AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವಂಚನೆ ಪ್ರಕರಣ; ನಗರಸಭೆ ಸದಸ್ಯ ಚಂದ್ರಶೇಖರ್ ಸೇರಿ ನಾಲ್ವರ ಬಂಧನ

ವಾರ್ಡ್ ನಂ.4ರ JDS ನಗರಸಭೆ ಸದಸ್ಯ ಚಂದ್ರಶೇಖರ್, ದೊಡ್ಡಬಳ್ಳಾಪುರದ ನಾಗರಾಜ್ ಎಂಬುವರಿಗೆ ವಂಚನೆ ಮಾಡಿದ್ದಾರೆ. 6 ಲಕ್ಷಕ್ಕೆ 18 ಲಕ್ಷ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. 6ಲಕ್ಷ ಅಸಲಿ ಹಣ ಪಡೆದು 18ಲಕ್ಷ ಹಣವಿದೆ ಎಂದು ಬ್ಯಾಗ್ ನೀಡಿ ಮೋಸ ಮಾಡಿದ್ದಾರೆ.

ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವಂಚನೆ ಪ್ರಕರಣ; ನಗರಸಭೆ ಸದಸ್ಯ ಚಂದ್ರಶೇಖರ್ ಸೇರಿ ನಾಲ್ವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 22, 2021 | 10:02 AM

Share

ಚಿತ್ರದುರ್ಗ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಗರಸಭೆ ಸದಸ್ಯ ಚಂದ್ರಶೇಖರ್ ಸೇರಿ ನಾಲ್ವರನ್ನು ಚಿತ್ರದುರ್ಗ ಬಡಾವಣೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ನಗರಸಭೆಯ JDS ಸದಸ್ಯ ಚಂದ್ರಶೇಖರ್, ಪತ್ನಿ ದೇವಿಕಾ, ಬಾಬು, ಅರುಣ್ ಬಂಧಿತ ಆರೋಪಿಗಳು.

ವಾರ್ಡ್ ನಂ.4ರ JDS ನಗರಸಭೆ ಸದಸ್ಯ ಚಂದ್ರಶೇಖರ್, ದೊಡ್ಡಬಳ್ಳಾಪುರದ ನಾಗರಾಜ್ ಎಂಬುವರಿಗೆ ವಂಚನೆ ಮಾಡಿದ್ದಾರೆ. 6 ಲಕ್ಷಕ್ಕೆ 18 ಲಕ್ಷ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. 6ಲಕ್ಷ ಅಸಲಿ ಹಣ ಪಡೆದು 18ಲಕ್ಷ ಹಣವಿದೆ ಎಂದು ಬ್ಯಾಗ್ ನೀಡಿ ಮೋಸ ಮಾಡಿದ್ದಾರೆ. ಈ ಸಂಬಂಧ ಡಿಸೆಂಬರ್ 6ರಂದು ಬಡಾವಣೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಚಂದ್ರಶೇಖರ್ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ನಗರಸಭೆ ಸದಸ್ಯ ಚಂದ್ರಶೇಖರ್ ಹಲವು ವಂಚನೆ ಕೇಸ್ನಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಖೋಟಾನೋಟು ಚಂದ್ರು ಎಂದೇ ಚಂದ್ರಶೇಖರ್ ಕುಖ್ಯಾತಿ ಗಳಿಸಿದ್ದಾರೆ. ತಲೆ ಮರೆಸಿಕೊಂಡಿದ್ದ ಆರೋಪಿ ಚಂದ್ರಶೇಖರ್, ಪತ್ನಿ ದೇವಿಕಾ, ಬಾಬು, ಅರುಣ್ ನನ್ನು ಚಿತ್ರದುರ್ಗ ಬಡಾವಣೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಕೃಷಿ ಚಟುವಟಿಕೆಗೆ ಮಹೀಂದ್ರಾ ಕೆಯುವಿ100 ಕಾರ್ ಬಳಸಿದ ರೈತ; ವಿಡಿಯೋ ನೋಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ