AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?

ಆ ಜೋಡಿ ಒಂದೇ ಗ್ರಾಮದವರು, ಒಂದೇ ಸಮುದಾಯದವರು. ಅಷ್ಟೇ ಅಲ್ಲ, ಸಂಬಂಧದಲ್ಲಿ ಯುವತಿಗೆ ಆ ಯುವಕ ಮಾವನೇ ಆಗಬೇಕು. ಆದರೂ, ಪೋಷಕರು ಮಾತ್ರ ಯುವಪ್ರೇಮಿಗಳಿಗೆ ವಿಲನ್ ಆಗಿದ್ದು ನೆಮ್ಮದಿ ಕೆಡಿಸಿದ್ದಾರೆ. ಇದೀಗ ಪೋಷಕರ ವಿರೋಧ ಇದ್ದರೂ ಮದುವೆಯಾಗಿರುವ ಯುವ ಜೋಡಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?
ಮಾರುತಿ ಹಾಗೂ ಅಮೃತಾ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Ganapathi Sharma|

Updated on: Oct 17, 2025 | 8:56 AM

Share

ಚಿತ್ರದುರ್ಗ, ಅಕ್ಟೋಬರ್ 17: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್ ಆಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿದ್ಯಮಾನ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಮಜೋಗಿಹಳ್ಳಿಯ ಅಮೃತಾ ಪಿಯುಸಿ ಪಾಸಾಗಿದ್ದು ಬೆಂಗಳೂರಲ್ಲಿ ಬಿಇ ಓದುತ್ತಿದ್ದಾಳೆ. ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿ ಮಾವನೇ ಆದ ಸ್ವಗ್ರಾಮದ ಮಾರುತಿಯನ್ನು ಪ್ರೇಮಿಸುತ್ತಿದ್ದಾಳೆ. ವಿಷಯ ತಿಳಿದ ಯುವತಿಯ ಪೋಷಕರು ಉಗ್ರ ಸ್ವರೂಪ ತಾಳಿದ್ದಾರೆ. ಯುವತಿಗೆ ಇಲ್ಲದ ಕಿರುಕುಳ ನೀಡಿ ಮಾರುತಿಗೂ ಜೀವ ಬೆದರಿಕೆ ಹಾಕಿದ್ದಾರೆ. ಯುವಕ ಎಸ್​ಎಸ್​ಎಲ್​ಸಿ ಮಾತ್ರ ಓದಿದ್ದು ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ, ಬಡತನದ ಕುಟುಂಬ ಮತ್ತು ಶಿಕ್ಷಣ ಇಲ್ಲದ ಕಾರಣ ಪ್ರೇಮ ವಿವಾಹಕ್ಕೆ ವಿರೋಧಿಸಿದ್ದಾರೆಂದು ಅಮೃತಾ ಆರೋಪಿಸಿದ್ದಾಳೆ.

ಅಮೃತಾಳ ಪೋಷಕರ ಬೆದರಿಕೆ, ವಿವಾಹಕ್ಕೆ ವಿರೋಧದಿಂದ ಕಂಗಾಲಾದ ಮಾರುತಿ ಅಸ್ವಸ್ಥನಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಕೊನೆಗೆ ಅಮೃತಾಳೇ ಬೆಂಗಳೂರಿಂದ ಆಗಮಿಸಿ ಮಾರುತಿಯನ್ನು ಡಿಸ್ಚಾರ್ಜ್ ಮಾಡಿಸಿ ದೇಗುಲದಲ್ಲಿ ಮದುವೆ ಆಗಿದ್ದಾಳೆ. ಪೋಷಕರಿಂದ ಜೀವ ಬೆದರಿಕೆ ಇದ್ದು ರಕ್ಷಣೆ ನೀಡಿ ಬದುಕಲು ಬಿಡಿ ಎಂದು ಯುವ ಜೋಡಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಆಗಮಿಸಿ ಗುರುವಾರ ಮನವಿ ಮಾಡಿದ್ದಾರೆ‌.

ಇದನ್ನೂ ಓದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಒಟ್ಟಾರೆಯಾಗಿ ರಾಮಜೋಗಿಹಳ್ಳಿಯ ಅಮೃತಾ ಮತ್ತು ಮಾರುತಿ ಪೋಷಕರ ವಿರೋಧ ಲೆಕ್ಕಿಸದೆ ಮದುವೆ ಆಗಿದ್ದಾರೆ. ಅಂತಸ್ತು ಮತ್ತು ಶಿಕ್ಷಣದ ಬಗ್ಗೆ ತಕರಾರು ತೆಗೆದು ಅಮೃತಾ ಪೋಷಕರು ಯುವ ಜೋಡಿಯ ಪಾಲಿಗೆ ವಿಲನ್ ಆಗಿದ್ದಾರೆ. ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ