AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?

ಆ ಜೋಡಿ ಒಂದೇ ಗ್ರಾಮದವರು, ಒಂದೇ ಸಮುದಾಯದವರು. ಅಷ್ಟೇ ಅಲ್ಲ, ಸಂಬಂಧದಲ್ಲಿ ಯುವತಿಗೆ ಆ ಯುವಕ ಮಾವನೇ ಆಗಬೇಕು. ಆದರೂ, ಪೋಷಕರು ಮಾತ್ರ ಯುವಪ್ರೇಮಿಗಳಿಗೆ ವಿಲನ್ ಆಗಿದ್ದು ನೆಮ್ಮದಿ ಕೆಡಿಸಿದ್ದಾರೆ. ಇದೀಗ ಪೋಷಕರ ವಿರೋಧ ಇದ್ದರೂ ಮದುವೆಯಾಗಿರುವ ಯುವ ಜೋಡಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?
ಮಾರುತಿ ಹಾಗೂ ಅಮೃತಾ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 17, 2025 | 8:56 AM

Share

ಚಿತ್ರದುರ್ಗ, ಅಕ್ಟೋಬರ್ 17: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್ ಆಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿದ್ಯಮಾನ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಮಜೋಗಿಹಳ್ಳಿಯ ಅಮೃತಾ ಪಿಯುಸಿ ಪಾಸಾಗಿದ್ದು ಬೆಂಗಳೂರಲ್ಲಿ ಬಿಇ ಓದುತ್ತಿದ್ದಾಳೆ. ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿ ಮಾವನೇ ಆದ ಸ್ವಗ್ರಾಮದ ಮಾರುತಿಯನ್ನು ಪ್ರೇಮಿಸುತ್ತಿದ್ದಾಳೆ. ವಿಷಯ ತಿಳಿದ ಯುವತಿಯ ಪೋಷಕರು ಉಗ್ರ ಸ್ವರೂಪ ತಾಳಿದ್ದಾರೆ. ಯುವತಿಗೆ ಇಲ್ಲದ ಕಿರುಕುಳ ನೀಡಿ ಮಾರುತಿಗೂ ಜೀವ ಬೆದರಿಕೆ ಹಾಕಿದ್ದಾರೆ. ಯುವಕ ಎಸ್​ಎಸ್​ಎಲ್​ಸಿ ಮಾತ್ರ ಓದಿದ್ದು ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ, ಬಡತನದ ಕುಟುಂಬ ಮತ್ತು ಶಿಕ್ಷಣ ಇಲ್ಲದ ಕಾರಣ ಪ್ರೇಮ ವಿವಾಹಕ್ಕೆ ವಿರೋಧಿಸಿದ್ದಾರೆಂದು ಅಮೃತಾ ಆರೋಪಿಸಿದ್ದಾಳೆ.

ಅಮೃತಾಳ ಪೋಷಕರ ಬೆದರಿಕೆ, ವಿವಾಹಕ್ಕೆ ವಿರೋಧದಿಂದ ಕಂಗಾಲಾದ ಮಾರುತಿ ಅಸ್ವಸ್ಥನಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಕೊನೆಗೆ ಅಮೃತಾಳೇ ಬೆಂಗಳೂರಿಂದ ಆಗಮಿಸಿ ಮಾರುತಿಯನ್ನು ಡಿಸ್ಚಾರ್ಜ್ ಮಾಡಿಸಿ ದೇಗುಲದಲ್ಲಿ ಮದುವೆ ಆಗಿದ್ದಾಳೆ. ಪೋಷಕರಿಂದ ಜೀವ ಬೆದರಿಕೆ ಇದ್ದು ರಕ್ಷಣೆ ನೀಡಿ ಬದುಕಲು ಬಿಡಿ ಎಂದು ಯುವ ಜೋಡಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಆಗಮಿಸಿ ಗುರುವಾರ ಮನವಿ ಮಾಡಿದ್ದಾರೆ‌.

ಇದನ್ನೂ ಓದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಒಟ್ಟಾರೆಯಾಗಿ ರಾಮಜೋಗಿಹಳ್ಳಿಯ ಅಮೃತಾ ಮತ್ತು ಮಾರುತಿ ಪೋಷಕರ ವಿರೋಧ ಲೆಕ್ಕಿಸದೆ ಮದುವೆ ಆಗಿದ್ದಾರೆ. ಅಂತಸ್ತು ಮತ್ತು ಶಿಕ್ಷಣದ ಬಗ್ಗೆ ತಕರಾರು ತೆಗೆದು ಅಮೃತಾ ಪೋಷಕರು ಯುವ ಜೋಡಿಯ ಪಾಲಿಗೆ ವಿಲನ್ ಆಗಿದ್ದಾರೆ. ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?