AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?

ಆ ಜೋಡಿ ಒಂದೇ ಗ್ರಾಮದವರು, ಒಂದೇ ಸಮುದಾಯದವರು. ಅಷ್ಟೇ ಅಲ್ಲ, ಸಂಬಂಧದಲ್ಲಿ ಯುವತಿಗೆ ಆ ಯುವಕ ಮಾವನೇ ಆಗಬೇಕು. ಆದರೂ, ಪೋಷಕರು ಮಾತ್ರ ಯುವಪ್ರೇಮಿಗಳಿಗೆ ವಿಲನ್ ಆಗಿದ್ದು ನೆಮ್ಮದಿ ಕೆಡಿಸಿದ್ದಾರೆ. ಇದೀಗ ಪೋಷಕರ ವಿರೋಧ ಇದ್ದರೂ ಮದುವೆಯಾಗಿರುವ ಯುವ ಜೋಡಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದೆ.

ಪೆಟ್ರೋಲ್ ಬಂಕಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಎಂಜಿನಿಯರಿಂಗ್ ಓದ್ತಿರೋ ಯುವತಿಗೆ ಲವ್, ಮದುವೆ! ಆಮೇಲೇನಾಯ್ತು?
ಮಾರುತಿ ಹಾಗೂ ಅಮೃತಾ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 17, 2025 | 8:56 AM

Share

ಚಿತ್ರದುರ್ಗ, ಅಕ್ಟೋಬರ್ 17: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್ ಆಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿದ್ಯಮಾನ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಮಜೋಗಿಹಳ್ಳಿಯ ಅಮೃತಾ ಪಿಯುಸಿ ಪಾಸಾಗಿದ್ದು ಬೆಂಗಳೂರಲ್ಲಿ ಬಿಇ ಓದುತ್ತಿದ್ದಾಳೆ. ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿ ಮಾವನೇ ಆದ ಸ್ವಗ್ರಾಮದ ಮಾರುತಿಯನ್ನು ಪ್ರೇಮಿಸುತ್ತಿದ್ದಾಳೆ. ವಿಷಯ ತಿಳಿದ ಯುವತಿಯ ಪೋಷಕರು ಉಗ್ರ ಸ್ವರೂಪ ತಾಳಿದ್ದಾರೆ. ಯುವತಿಗೆ ಇಲ್ಲದ ಕಿರುಕುಳ ನೀಡಿ ಮಾರುತಿಗೂ ಜೀವ ಬೆದರಿಕೆ ಹಾಕಿದ್ದಾರೆ. ಯುವಕ ಎಸ್​ಎಸ್​ಎಲ್​ಸಿ ಮಾತ್ರ ಓದಿದ್ದು ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ, ಬಡತನದ ಕುಟುಂಬ ಮತ್ತು ಶಿಕ್ಷಣ ಇಲ್ಲದ ಕಾರಣ ಪ್ರೇಮ ವಿವಾಹಕ್ಕೆ ವಿರೋಧಿಸಿದ್ದಾರೆಂದು ಅಮೃತಾ ಆರೋಪಿಸಿದ್ದಾಳೆ.

ಅಮೃತಾಳ ಪೋಷಕರ ಬೆದರಿಕೆ, ವಿವಾಹಕ್ಕೆ ವಿರೋಧದಿಂದ ಕಂಗಾಲಾದ ಮಾರುತಿ ಅಸ್ವಸ್ಥನಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಕೊನೆಗೆ ಅಮೃತಾಳೇ ಬೆಂಗಳೂರಿಂದ ಆಗಮಿಸಿ ಮಾರುತಿಯನ್ನು ಡಿಸ್ಚಾರ್ಜ್ ಮಾಡಿಸಿ ದೇಗುಲದಲ್ಲಿ ಮದುವೆ ಆಗಿದ್ದಾಳೆ. ಪೋಷಕರಿಂದ ಜೀವ ಬೆದರಿಕೆ ಇದ್ದು ರಕ್ಷಣೆ ನೀಡಿ ಬದುಕಲು ಬಿಡಿ ಎಂದು ಯುವ ಜೋಡಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಆಗಮಿಸಿ ಗುರುವಾರ ಮನವಿ ಮಾಡಿದ್ದಾರೆ‌.

ಇದನ್ನೂ ಓದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಒಟ್ಟಾರೆಯಾಗಿ ರಾಮಜೋಗಿಹಳ್ಳಿಯ ಅಮೃತಾ ಮತ್ತು ಮಾರುತಿ ಪೋಷಕರ ವಿರೋಧ ಲೆಕ್ಕಿಸದೆ ಮದುವೆ ಆಗಿದ್ದಾರೆ. ಅಂತಸ್ತು ಮತ್ತು ಶಿಕ್ಷಣದ ಬಗ್ಗೆ ತಕರಾರು ತೆಗೆದು ಅಮೃತಾ ಪೋಷಕರು ಯುವ ಜೋಡಿಯ ಪಾಲಿಗೆ ವಿಲನ್ ಆಗಿದ್ದಾರೆ. ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್