AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಟೊಮ್ಯಾಟೋ ಬೆಳೆದು ಕೈ ಸುಟ್ಟುಕೊಂಡ ರೈತರು; ಕೆ.ಜಿಗೆ 1 ರೂ, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಕಂಗಾಲಾದ ರೈತ

ಕೋಟೆನಾಡಿನ ಕೆಲ ರೈತರು ಸಾಂಪ್ರದಾಯಿಕ ಕೃಷಿಯಿಂದ ಹೊರ ಬಂದು ಟೊಮ್ಯಾಟೋ ಬೆಳೆಯತ್ತ ಚಿತ್ತ ಹರಿಸಿದ್ದಾರೆ. ಅಂತೆಯೇ ಈ ವರ್ಷ ಟೊಮ್ಯಾಟೊ ಬೆಳೆ ಫಸಲೇನೋ ಉತ್ತಮವಾಗಿ ಬಂದಿದೆ. ಆದರೆ ಬೆಲೆ ಕುಸಿತದ ಪರಿಣಾಮ ರೈತನ ಶ್ರಮಕ್ಕೆ ತಕ್ಕ ಫಲ ಸಿಗದೆ ಕಂಗಾಲಾಗಿದ್ದಾನೆ.

Chitradurga News: ಟೊಮ್ಯಾಟೋ ಬೆಳೆದು ಕೈ ಸುಟ್ಟುಕೊಂಡ ರೈತರು; ಕೆ.ಜಿಗೆ 1 ರೂ, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಕಂಗಾಲಾದ ರೈತ
ಚಿತ್ರದುರ್ಗ ಟೊಮ್ಯಾಟೋ ಬೆಳೆಗಾರರು
ಕಿರಣ್ ಹನುಮಂತ್​ ಮಾದಾರ್
|

Updated on: May 25, 2023 | 7:56 AM

Share

ಚಿತ್ರದುರ್ಗ: ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆ ಬಿಡಿಸದೆ ಜಮೀನಿನಲ್ಲೇ ಬಿಟ್ಟ ರೈತರು. ಟೊಮ್ಯಾಟೋ(Tomato) ದರ ಕುಸಿತದಿಂದಾಗಿ ರಸ್ತೆ ಬದಿ ಸುರಿದಿರುವ ಟೊಮ್ಯಾಟೋ ಬೆಳೆಗಾರರು. ಬೆಂಬಲ ಬೆಲೆ ನೀಡುವಂತೆ ಟೊಮ್ಯಾಟೋ ಬೆಳೆಗಾರರ ಆಗ್ರಹ. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಜಿಲ್ಲೆಯ ಚಳ್ಳಕೆರೆ(Challakere) ತಾಲೂಕಿನ ಜಡೇಕುಂಟೆ ಗ್ರಾಮದ ಬಳಿ. ಹೌದು, ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲೂಕಿನ ವಿವಿದೆಡೆ ರೈತರು ಟೊಮ್ಯಾಟೋ ಬೆಳೆಯನ್ನು ಬೆಳೆದಿದ್ದಾರೆ. ಈ ವರ್ಷ ಉತ್ತಮ ಬೆಳೆಯೇನೋ ಬಂದಿದೆ. ಆದ್ರೆ, ಒಂದು ಕೆಜಿ ಟೊಮ್ಯಾಟೋಗೆ 1 ರೂಪಾಯಿಗಿಂತ ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ರೈತನ ಶ್ರಮ ಬಿಟ್ಟು ಕೃಷಿಗೆ ಹಾಕಿದ ಬಂಡವಾಳವೂ ಎದುರಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇನ್ನು ರೈತರು ‘ಎರಡು ಎಕರೆಯಲ್ಲಿ ಟೊಮ್ಯಾಟೋ ಬೆಳೆ ಬೆಳೆದಿದ್ದು ಉತ್ತಮ ಫಲ ಬಂದಾಗಲೇ ದರ ಕುಸಿತ ಆಗಿದೆ. ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಕೇಳಿಕೊಂಡಿದ್ದಾರೆ.

ಇನ್ನು ರೈತ ಮಹಿಳೆ ಗಂಗಮ್ಮ ಎನ್ನುವವರು ಸಹ 3 ಎಕರೆ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆದಿದ್ದಾರೆ. ಆದ್ರೆ, ದಿಢೀರನೇ ಟೊಮ್ಯಾಟೋ ಬೆಲೆ ಕುಸಿತ ಆಗಿದ್ದು, ಪರಿಣಾಮ ಜಮೀನಿನಲ್ಲಿರುವ ಟೊಮ್ಯಾಟೋ ಬಿಡಿಸಿದರೂ ಪ್ರಯೋಜನವಿಲ್ಲದಂತಾಗಿದೆ. ಟೊಮ್ಯಾಟೋ ಬಿಡಿಸುವ ಹಣವೂ ಮೈಮೇಲೆ ಬರುತ್ತದೆ. ಹೀಗಾಗಿ, ಜಾನುವಾರುಗಳ ಪಾಲಾಗಲಿ ಎಂದು ಜಮೀನಿನಲ್ಲೇ ಬೆಳೆ ಬಿಟ್ಟು ಕಂಗಾಲಾಗಿ ಕುಳಿತಿದ್ದಾರೆ. ಇದೀಗ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಸಕ್ಕರೆ ಕಾರ್ಖಾನೆಗಳಿಂದ ಬೆಂಬಲ ಬೆಲೆ ಸಿಗದೆ ಆಲೆಮನೆಗಳತ್ತ ಹೆಜ್ಜೆ ಹಾಕಿದ ರೈತರು – ಕೃಷಿ ಇಲಾಖೆ ಇವರಿಗೆ ನೆರವು ನೀಡುತ್ತದಾ?

ಒಟ್ಟಾರೆಯಾಗಿ ಕೋಟೆನಾಡಿನಲ್ಲಿ ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲೂಕಿನ ವಿವಿದೆಡೆ ನೂರಾರು ಎಕರೆ ಪ್ರದೇಶದಲ್ಲಿ ರೈತರು ಟೊಮ್ಯಾಟೋ ಬೆಳೆದಿದ್ದಾರೆ. ಆದ್ರೆ, ಟೊಮ್ಯಾಟೋ ಉತ್ತಮ ಫಲ ನೀಡಿದ ಸಂದರ್ಭದಲ್ಲೇ ಬೆಲೆ ಕುಸಿತ ಆಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಹೀಗಾಗಿ, ಸರ್ಕಾರ ಟೊಮ್ಯಾಟೋಗೆ ಬೆಂಬಲ ಬೆಲೆ ಘೋಷಿಸಿ ರೈತರ ಕೈ ಹಿಡಿಯಬೇಕಿದೆ.

ವರದಿ: ಬಸವರಾಜ ಮುದನೂರ್ ಟಿವಿ9 ಚಿತ್ರದುರ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ