AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
TV9 Web
| Edited By: |

Updated on: Jun 25, 2021 | 2:57 PM

Share

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ