AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ ಚಿತ್ರಹಳ್ಳಿ ಪೊಲೀಸರು; ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳು ವಶಕ್ಕೆ

ಚಿತ್ರದುರ್ಗ ಜಿಲ್ಲೆಯ ಚಿತ್ರಹಳ್ಳಿ ಠಾಣೆ ಪೊಲೀಸುರು ಕಾರ್ಯಾಚರಣೆ ನಡೆಸಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅನ್ನು ಬಂಧಿಸಿ ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರು ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ ಚಿತ್ರಹಳ್ಳಿ ಪೊಲೀಸರು; ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳು ವಶಕ್ಕೆ
ಅಂತಾರಾಜ್ಯ ಕಳ್ಳರ ಗ್ಯಾಂಗ್ ಅನ್ನು ಬಂಧಿಸಿದ ಪೊಲೀಸರು ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳನ್ನು ವಶಕ್ಕೆ ಪಡೆದಿದ್ದಾರೆ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Rakesh Nayak Manchi|

Updated on: Nov 11, 2023 | 9:05 PM

Share

ಚಿತ್ರದುರ್ಗ, ನ.11: ಜಿಲ್ಲೆಯ (Chitradurga) ಚಿತ್ರಹಳ್ಳಿ ಠಾಣೆ ಪೊಲೀಸುರು ಕಾರ್ಯಾಚರಣೆ ನಡೆಸಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅನ್ನು ಬಂಧಿಸಿ ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್​ಪಿ ಧರ್ಮೇಂದರ್ ಕುಮಾರ್ ಮೀನಾ, ಆರು ಮಂದಿ ಅಂತಾರಾಜ್ಯ ಶ್ರೀಗಂಧ ಕಳ್ಳರನ್ನು ಬಂಧಿಸಿ 91 ಕೆ.ಜಿ. 300 ಗ್ರಾಂ ಶ್ರೀಗಂಧ, 15 ಕೆ.ಜಿ. 500 ಗ್ರಾಂ ರಕ್ತ ಚಂದನ, 25 ಕೆ.ಜಿ. 400 ಗ್ರಾಂ ತೂಕದ 2 ಆನೆ ದಂತಗಳು, 34 ಕೆ.ಜಿ. 100 ಗ್ರಾಂ ಪೆಂಗೋಲಿನ್ ಚಿಪ್ಪುಗಳು, 1 ಲಕ್ಷ 10 ಸಾವಿರ ನಗದು, 2 ಕಾರು, 9 ಮೊಬೈಲ್ ಸೇರಿದಂತೆ ಇತರೆ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.

ರಿಸಿವರ್ ತರಿಕೆರೆ ಮೂಲದ ಚಂದ್ರಶೇಖರ್ ಅಲಿಯಾಸ್ ಬೋಟಿ ಚಂದ್ರ, ಶ್ರೀಗಂಧ ಕಟಾವು ಮಾಡುತ್ತಿದ್ದ ಆಂದ್ರ ಮೂಲದ ಖಲೀಲ್, ಮಾಹಿತಿದಾರರಾದ ಹೊಸದುರ್ಗ ಮೂಲದ ಪ್ರಶಾಂತ್, ರಂಗಸ್ವಾಮಿ, ಕಡೂರ್ ಮೂಲದ ಪುನಿತ್ ನಾಯ್ಕ್, ರಾಮಾ ನಾಯ್ಕ್ ಬಂಧಿತ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಚಿನ್ನ ಖರೀದಿಸುವ ಸೋಗಿನಲ್ಲಿ ಬಾಲಕನ ಜೊತೆ ಬಂದು ಕಳ್ಳಿಯ ಕೈಚಳಕ, ವಿಡಿಯೋ ವೈರಲ್

ಶ್ರೀಗಂಧ ಕಳ್ಳರ ಗ್ಯಾಂಗ್ ಜೊತೆ ಇನ್ನಷ್ಟು ಜನರಿದ್ದಾರೆ. ಪೊಲೀಸ್ ತನಿಖೆ ಮೂಲಕ ಜಾಲ ಬೇಧಿಸಿ ಉಳಿದವರನ್ನು ಬಂಧಿಸಲಾಗುವುದು. ವಶಕ್ಕೆ ಪಡೆದ ವಸ್ತುಗಳನ್ನು ಎಲ್ಲಿಂದ ತಂದಿದ್ದರು, ಯಾರಿಗೆ ಕೊಡುತ್ತಿದ್ದರೆಂಬುದು ತಿಳಿಯಬೇಕಿದೆ. ಶ್ರೀಗಂಧ ಕಳ್ಳತನದ ಬಗ್ಗೆ ಕೆಲವು ರೈತರಿಂದ ದೂರುಗಳು ಬಂದ ಹಿನ್ನೆಲೆ ಪರಿಶೀಲನೆ ನಡೆಸಲಾಗುವುದು ಎಂದರು.

ಪೊಲೀಸರು ರಾತ್ರಿ ಗಸ್ತಿನಲ್ಲಿದ್ದಾಗ ಅನುಮಾನಸ್ಪವಾಗಿ ಸಂಚರಿಸುತ್ತಿದ್ದ ವಾಹನವನ್ನು ತಡೆದು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯಲ್ಲಿ ಅಕ್ರಮ ಮಾಲುಗಳು ಪತ್ತೆಯಾಗಿವೆ ಎಂದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​