ಚಿತ್ರದುರ್ಗದಲ್ಲಿ ಯುದ್ಧ ಡ್ರೋನ್ ಘಾತಕ್​ ಯಶಸ್ವಿ ಪ್ರಯೋಗ: ಡಿಆರ್​​ಡಿಒ ಮಾಹಿತಿ

ಈ ಯುಎವಿಯನ್ನು ಡಿಆರ್​​ಡಿಒದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ. ಈ ಯುಎವಿ ಮೊದಲ ಹಾರಾಟವನ್ನು ಜುಲೈ 2022 ರಲ್ಲಿ ನಡೆಸಲಾಗಿತ್ತು.

ಚಿತ್ರದುರ್ಗದಲ್ಲಿ ಯುದ್ಧ ಡ್ರೋನ್ ಘಾತಕ್​ ಯಶಸ್ವಿ ಪ್ರಯೋಗ: ಡಿಆರ್​​ಡಿಒ ಮಾಹಿತಿ
ಚಿತ್ರದುರ್ಗದಲ್ಲಿ ಯುದ್ಧ ಡ್ರೋನ್ ಘಾತಕ್​ ಯಶಸ್ವಿ ಪ್ರಯೋಗ
Follow us
| Updated By: ಗಣಪತಿ ಶರ್ಮ

Updated on: Dec 16, 2023 | 10:46 AM

ಚಿತ್ರದುರ್ಗ, ಡಿಸೆಂಬರ್ 16: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ದೇಶೀಯ ನಿರ್ಮಿತ, ಅತಿವೇಗದಲ್ಲಿ ಹಾರಾಟ ನಡೆಸಬಲ್ಲ ಡ್ರೋನ್ (ಮಾನವರಹಿತ ವೈಮಾನಿಕ ವಾಹನ ಅಥವಾ UAV) ಸಂಬಂಧಿತ ತಂತ್ರಜ್ಞಾನದ (Autonomous Flying Wing Technology) ಯಶಸ್ವಿ ಪ್ರಯೋಗ ನಡೆಸಿದೆ. ಘಾತಕ್ ಹೆಸರಿನ ಭಾರತದ ರಹಸ್ಯ ಯುದ್ಧ ಡ್ರೋನ್‌ಗಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.

ತಂತ್ರಜ್ಞಾನದ ಯಶಸ್ವಿ ಪ್ರಯೋಗವು ದೇಶದಲ್ಲಿ ತಂತ್ರಜ್ಞಾನದ ಸನ್ನದ್ಧತೆಯ ಪರಿಪಕ್ವತೆಗೆ ಸಾಕ್ಷಿಯಾಗಿದೆ. ಇದರೊಂದಿಗೆ, ಟೇಲ್​ಲೆಸ್ ಕಾನ್ಫಿಗರೇಷನ್​​ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ನಿಯಂತ್ರಣಗಳನ್ನು ಕರಗತ ಮಾಡಿಕೊಂಡಿರುವ ದೇಶಗಳ ಎಲೈಟ್ ಕ್ಲಬ್‌ಗೆ ಭಾರತವು ಸೇರಿಕೊಂಡಿದೆ ಎಂದು ಡಿಆರ್​​ಡಿಒ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಯುಎವಿಯನ್ನು ಡಿಆರ್​​ಡಿಒದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ. ಈ ಯುಎವಿ ಮೊದಲ ಹಾರಾಟವನ್ನು ಜುಲೈ 2022 ರಲ್ಲಿ ನಡೆಸಲಾಗಿತ್ತು. ನಂತರ ಎರಡು ಆಂತರಿಕವಾಗಿ ತಯಾರಿಸಿದ ಮೂಲಮಾದರಿಗಳನ್ನು ಬಳಸಿಕೊಂಡು ವಿವಿಧ ಅಭಿವೃದ್ಧಿ ಸಂರಚನೆಗಳಲ್ಲಿ ಆರು ಹಾರಾಟ ಪ್ರಯೋಗಗಳನ್ನು ನಡೆಸಲಾಗಿತ್ತು.

ಇದನ್ನೂ ಓದಿ: DRDOದಿಂದ ಮತ್ತೊಂದು ಯಶಸ್ವಿ ಪ್ರಯೋಗ: ಏನದು?

ಯಶಸ್ವಿ ಪ್ರಯೋಗಕ್ಕಾಗಿ ಡಿಆರ್‌ಡಿಒ, ಸಶಸ್ತ್ರ ಪಡೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶ್ಲಾಘಿಸಿದ್ದಾರೆ. ಅಂತಹ ನಿರ್ಣಾಯಕ ತಂತ್ರಜ್ಞಾನಗಳ ಯಶಸ್ವಿ ಅಭಿವೃದ್ಧಿಯು ಸ್ಥಳೀಯವಾಗಿ ಸಶಸ್ತ್ರ ಪಡೆಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ