AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮನೆಯ ಗೋಡೆ ಕುಸಿದು ಬಾಲಕಿ ಸಾವು; ತಂದೆಗೆ ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಾಣಗೆರೆ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಬಾಲಕಿ ಬಲಿಯಾಗಿದ್ದಾಳೆ. ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ಹರ್ಷಿತಾ(11) ಸಾವನ್ನಪ್ಪಿದ್ದಾಳೆ.

ಚಿತ್ರದುರ್ಗ: ಮನೆಯ ಗೋಡೆ ಕುಸಿದು ಬಾಲಕಿ ಸಾವು; ತಂದೆಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 07, 2021 | 11:03 AM

Share

ಚಿತ್ರದುರ್ಗ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ಹಾನಿ ಮತ್ತು ಪ್ರಾಣ ಹಾನಿ ಸಂಭವಿಸುತ್ತಿದೆ. ಅದರಂತೆ ಇಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಾಣಗೆರೆ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಬಾಲಕಿ ಬಲಿಯಾಗಿದ್ದಾಳೆ. ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ಹರ್ಷಿತಾ(11) ಸಾವನ್ನಪ್ಪಿದ್ದಾಳೆ.

ಹರ್ಷಿತಾ ತಂದೆ ರವಿ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಕವಿತಾ (35), ಸಹೋದರಿ ಅಮೂಲ್ಯಾ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ: ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಮೂವರ ಬಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಅತಿವೇಗದಿಂದ ಆಟೋ ಚಾಲನೆ ಮಾಡಿದ ಪರಿಣಾಮ ಆಟೋ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ರಸ್ತೆಯಲ್ಲಿ ಬಿದ್ದ ಆಟೋಗೆ ಕಾರು ಡಿಕ್ಕಿ ಹೊಡೆದು ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೇವನಹಳ್ಳಿಯ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ಈ ಅಪಘಾತ ಸಂಭವಿಸಿದೆ.

ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್(28) ಮತ್ತು ರಾಹುಲ್( 21) ಸಾವನ್ನಪ್ಪಿದ್ದಾರೆ. ನೆನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋದಲ್ಲಿದ್ದ ಇನ್ನೊರ್ವ ವ್ಯಕ್ತಿ ವಾಸಪ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪ್ರಯಾಣಿಕರನ್ನು ಕೂರಿಸಿಕೊಂಡು ಬೂದಿಗೆರೆ ಕಡೆಯಿಂದ ಬಾಗಲೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಘಾತ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಕಾರು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಕಾರು ಚಾಲಕನ ವಿರುದ್ಧ ಚಿಕ್ಕಜಾಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕಡಪ‌ ಜಿಲ್ಲಾ‌ ಅಗ್ರಹಾರಂ ಬಳಿ ನಡೆದಿದೆ. ಮೃತರೆಲ್ಲಾ ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ಸ್ಟೇಶನ್​ ಗೋಡೆ ಹತ್ತಿದ ಯುವತಿಯನ್ನು ಆಕೆಗೆ ಗೊತ್ತಾಗದಂತೆ ಕಾಪಾಡಿದ ಪೊಲೀಸ್​; ವಿಡಿಯೋ ವೈರಲ್

Published On - 9:20 am, Sat, 7 August 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್