AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಗೊಲ್ಲ ಪದ ಸೇರಿಸದಿರಲು ಒತ್ತಾಯ: ಗುಂಪುಗಳ ನಡುವೆ ವಾಗ್ವಾದ

ನಿಗಮದ ಹೆಸರಿನಲ್ಲಿ ಕಾಡುಗೊಲ್ಲ ಪದದ ಜೊತೆಗೆ ಗೊಲ್ಲ ಎಂಬ ಪದವೂ ಇರಬೇಕು ಎಂದು ಗೊಲ್ಲ ಸಮುದಾಯ ಒತ್ತಾಯಿಸುತ್ತಿದೆ. ಇದನ್ನು ಕಾಡುಗೊಲ್ಲ ಸಮುದಾಯದ ಸಂಘಟನೆಗಳು ವಿರೋಧಿಸುತ್ತಿವೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಗೊಲ್ಲ ಪದ ಸೇರಿಸದಿರಲು ಒತ್ತಾಯ: ಗುಂಪುಗಳ ನಡುವೆ ವಾಗ್ವಾದ
ನಿಗಮ ಸ್ಥಾಪನೆಗೆ ಕಾಡುಗೊಲ್ಲರ ಹೋರಾಟ ಮತ್ತು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 07, 2021 | 4:20 PM

Share

ಚಿತ್ರದುರ್ಗ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರಿಗೆ ಸಂಬಂಧಿಸಿದ ವಿವಾದ ಇನ್ನೂ ಮುಂದುವರಿದಿದೆ. ನಿಗಮದ ಹೆಸರಿನಲ್ಲಿ ಕಾಡುಗೊಲ್ಲ ಪದದ ಜೊತೆಗೆ ಗೊಲ್ಲ ಎಂಬ ಪದವೂ ಇರಬೇಕು ಎಂದು ಗೊಲ್ಲ ಸಮುದಾಯ ಒತ್ತಾಯಿಸುತ್ತಿದೆ. ಇದನ್ನು ಕಾಡುಗೊಲ್ಲ ಸಮುದಾಯದ ಸಂಘಟನೆಗಳು ವಿರೋಧಿಸುತ್ತಿವೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ನಿಗಮದ ಹೆಸರಿನ ವಿಚಾರ ಹಲವು ಗೊಂದಲಗಳಿಗೆ ಕಾರಣವಾಗಿದೆ. ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ‘ಗೊಲ್ಲ’ ಪದ ಸೇರಿಸಬಾರದು ಎಂದು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭ ಹೆಸರು ಬದಲಾವಣೆಯ ಪರವಾಗಿದ್ದವರು ಹಾಗೂ ವಿರೋಧಿಸುವವರ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಕಾಡುಗೊಲ್ಲ ನಿಗಮದ ಹೆಸರು ಬದಲಾವಣೆಯ ಪರವಾಗಿದ್ದಾರೆ. ಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಿಸಬೇಕೆಂದು ಶಾಸಕರೇ ಪತ್ರ ಬರೆದಿದ್ದರು ಎಂದು ಈ ಸಂದರ್ಭ ಹಲವರು ಆರೋಪಿಸಿದರು. ಈ ವೇಳೆ ಶಾಸಕಿ ಪೂರ್ಣಿಮಾ ಬೆಂಬಲಿಗರು ಹಾಗೂ ಕಾಡುಗೊಲ್ಲ ಸಮಾಜದ ಮುಖಂಡರ ನಡುವೆ ವಾಗ್ವಾದ ನಡೆಯಿತು.

ಬದಲಾವಣೆಗೆ ವಿರೋಧ ನಿಗಮದ ಹೆಸರಿಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ, ರಾಜ್ಯ ಕಾಡು ಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಸರ್ಕಾರವು ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಾವಣೆ ಮಾಡಲು ಮುಂದಾಗಿರುವುದು ಸರಿಯಲ್ಲ. ಹೆಸರು ಬದಲಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಹಿಂದೆ ಶಿರಾ ಉಪಚುನಾವಣೆ ಸಮಯದಲ್ಲಿ ಚುನಾವಣೆ ಗೆಲ್ಲುವ ಉದ್ದೇಶದಿಂದ ಕಾಡುಗೊಲ್ಲರ ಮತ ಸೆಳೆಯಲು, ಕಾಡುಗೊಲ್ಲರ ಅಭಿವೃದ್ಧಿ ನಿಗಮ ಆರಂಭಕ್ಕೆ ಸರ್ಕಾರ ಆದೇಶ ನೀಡಿತ್ತು. ಇದರಿಂದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಸುಲಭವಾಯಿತು. ಆದರೆ ಈಗ ಗೊಲ್ಲ-ಕಾಡುಗೊಲ್ಲರ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಾಯಿಸಲು ಮುಂದಾಗಿರುವುದು ಸರಿಯಲ್ಲ. ಇದರಿಂದ ಹಿಂದುಳಿದ ಬುಡಕಟ್ಟು ಸಮುದಾಯಕ್ಕೆ ಕಾಡುಗೊಲ್ಲ ಸಮುದಾಯಕ್ಕೆ ಅನ್ಯಾಯವಾಗಲಿದೆ. ಈಗಾಗಲೇ ಹೇಳಿರುವ ಪ್ರಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರ ನೇಮಕ ಮಾಡಲಾಗಿದೆ. ಜೊತೆಗೆ ಐದು ಕೋಟಿ ಅನುದಾನ ನೀಡಲಾಗಿದೆ ಎಂದರು.

ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಬಳಿಕ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಬದಲಾಗಿ, ಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುಮೋದನೆ ಹೊರಡಿಸಲಾಗಿದೆ. ಹೆಸರು ಬದಲಾವಣೆ ಮಾಡಿದರೆ ಸಮುದಾಯದಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಚಿತ್ರದುರ್ಗ: ಕಾಡುಗೊಲ್ಲ ಸಮುದಾಯದ ಅಪರೂಪ ಸಾಂಪ್ರದಾಯಿಕ ಆಚರಣೆ ಅನಾವರಣ ಇದನ್ನೂ ಓದಿ: ಬೆಳಗಿನ ಜಾವ ಗೊಲ್ಲಹಳ್ಳಿ ಗೇಟ್ ಬಳಿ ಕಾರು-ಬಸ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ