AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ ಎಲ್ಲ 103 ಮಕ್ಕಳ ಆಪ್ತಸಮಾಲೋಚನೆಗೆ ಸೂಚನೆ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆಗಸ್ಟ್​ 26 ರಂದು ಇಬ್ಬರು ಬಾಲಕಿಯರು ಹಾಗೂ ಅಕ್ಟೋಬರ್ 13 ರಂದು ನಾಲ್ವರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ನೀಡಿದ್ದರು.

ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ ಎಲ್ಲ 103 ಮಕ್ಕಳ ಆಪ್ತಸಮಾಲೋಚನೆಗೆ ಸೂಚನೆ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on:Oct 20, 2022 | 1:44 PM

Share

ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್​ನಲ್ಲಿರುವ ಎಲ್ಲ ಮಕ್ಕಳ ಆಪ್ತಸಮಾಲೋಚನೆ (Conselling) ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚನೆ ನೀಡಿದೆ. ಕೌನ್ಸೆಲಿಂಗ್ ನಡೆಸಿ ನ 30ರ ಒಳಗೆ ವರದಿ ನೀಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಮಠದ ಹಾಸ್ಟೆಲ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 103 ವಿದ್ಯಾರ್ಥಿನಿಯರು ಆಶ್ರಯ ಪಡೆದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ 49 ಜನ ವಿದ್ಯಾರ್ಥಿನಿಯರನ್ನು ಮಕ್ಕಳ ರಕ್ಷಣಾ ಘಟಕಗಳ ನೆರವಿನೊಂದಿಗೆ ಆಯಾ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದ್ದು, 54 ವಿದ್ಯಾರ್ಥಿನಿಯರನ್ನು ಪಾಲಕರೊಂದಿಗೆ ಕಳುಹಿಸಿಕೊಡಲಾಯಿತು. ಒಟ್ಟು 11 ಜಿಲ್ಲೆಗಳಲ್ಲಿ ಈ ಮಕ್ಕಳು ಇದ್ದಾರೆ.

ದೂರು ನೀಡಿದ ಮಕ್ಕಳಷ್ಟೇ ಅಲ್ಲದೆ, ಹಾಸ್ಟೆಲ್​ನಲ್ಲಿದ್ದ ಎಲ್ಲ ಮಕ್ಕಳನ್ನೂ ಮಾತನಾಡಿಸಬೇಕು. ಆಪ್ತ ಸಮಾಲೋಚನೆಯ ವೇಳೆ ಲೈಂಗಿಕ ದೌರ್ಜನ್ಯದ ಮಾಹಿತಿ ಸಿಕ್ಕರೆ ಹೇಳಿಕೆ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆಗಸ್ಟ್​ 26 ರಂದು ಇಬ್ಬರು ಬಾಲಕಿಯರು ಹಾಗೂ ಅಕ್ಟೋಬರ್ 13 ರಂದು ನಾಲ್ವರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ನೀಡಿದ್ದರು. ನಂತರದ ದಿನಗಳಲ್ಲಿ ತನಿಖಾಧಿಕಾರಿ ದೂರು ನೀಡಿದ ಮಕ್ಕಳು, ಪೋಷಕರು ಹಾಗೂ ಇತರ ಸಂಬಂಧಿಸಿದ ವ್ಯಕ್ತಿಗಳ ಹೇಳಿಕೆ ದಾಖಲಿಸಿದ್ದರು. ಮಕ್ಕಳ ದೂರಿನ ಆಧಾರದ ಮೇಲೆ ಶಿವಮೂರ್ತಿ ಶರಣರನ್ನು ಬಂಧಿಸಲಾಯಿತು.

2ನೇ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗು ಮುರುಘಾ ಮಠದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ 2ನೇ ದೂರಿನ ಇಬ್ಬರು ಆರೋಪಿಗಳ ನಿರಿಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು 25ಕ್ಕೆ ಮುಂದೂಡಿದೆ. ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಆರಂಭಿಸಿದ ನ್ಯಾಯಾಧೀಶರು ಸಂತ್ರಸ್ತರ ಹೇಳಿಕೆ ದಾಖಲು ಮಾಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಾಲ ನ್ಯಾಯ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು ಬುಧವಾರ (ಅ 9) ಸ್ಥಳ ಮಹಜರು ಮಾಡಿದ್ದಾರೆ. ಪಿಎಸ್‌ಐ ಡಿ.ಶಿವಕುಮಾರ್‌ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ. ಪೊಲೀಸರ ತಂಡ ಮುರುಘಾ ಮಠಕ್ಕೆ ಭೇಟಿ ನೀಡಿ, ನಾಲ್ಕೂವರೆ ವರ್ಷದ ಹೆಣ್ಣು ಮಗು ಇದ್ದ ಮಡಿಲು ದತ್ತು ಮಕ್ಕಳ ಕೇಂದ್ರ ಹಾಗೂ 17 ವರ್ಷದ ಬಾಲಕಿ ವಾಸ್ತವ್ಯ ಹೂಡಿದ್ದ ಹಾಸ್ಟೆಲ್‌ನ ಮಹಜರು ಪ್ರಕ್ರಿಯೆ ನಡೆಸಿತು.

Published On - 1:42 pm, Thu, 20 October 22

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ