Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ ಎಲ್ಲ 103 ಮಕ್ಕಳ ಆಪ್ತಸಮಾಲೋಚನೆಗೆ ಸೂಚನೆ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆಗಸ್ಟ್​ 26 ರಂದು ಇಬ್ಬರು ಬಾಲಕಿಯರು ಹಾಗೂ ಅಕ್ಟೋಬರ್ 13 ರಂದು ನಾಲ್ವರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ನೀಡಿದ್ದರು.

ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ ಎಲ್ಲ 103 ಮಕ್ಕಳ ಆಪ್ತಸಮಾಲೋಚನೆಗೆ ಸೂಚನೆ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 20, 2022 | 1:44 PM

ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್​ನಲ್ಲಿರುವ ಎಲ್ಲ ಮಕ್ಕಳ ಆಪ್ತಸಮಾಲೋಚನೆ (Conselling) ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚನೆ ನೀಡಿದೆ. ಕೌನ್ಸೆಲಿಂಗ್ ನಡೆಸಿ ನ 30ರ ಒಳಗೆ ವರದಿ ನೀಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಮಠದ ಹಾಸ್ಟೆಲ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 103 ವಿದ್ಯಾರ್ಥಿನಿಯರು ಆಶ್ರಯ ಪಡೆದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ 49 ಜನ ವಿದ್ಯಾರ್ಥಿನಿಯರನ್ನು ಮಕ್ಕಳ ರಕ್ಷಣಾ ಘಟಕಗಳ ನೆರವಿನೊಂದಿಗೆ ಆಯಾ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದ್ದು, 54 ವಿದ್ಯಾರ್ಥಿನಿಯರನ್ನು ಪಾಲಕರೊಂದಿಗೆ ಕಳುಹಿಸಿಕೊಡಲಾಯಿತು. ಒಟ್ಟು 11 ಜಿಲ್ಲೆಗಳಲ್ಲಿ ಈ ಮಕ್ಕಳು ಇದ್ದಾರೆ.

ದೂರು ನೀಡಿದ ಮಕ್ಕಳಷ್ಟೇ ಅಲ್ಲದೆ, ಹಾಸ್ಟೆಲ್​ನಲ್ಲಿದ್ದ ಎಲ್ಲ ಮಕ್ಕಳನ್ನೂ ಮಾತನಾಡಿಸಬೇಕು. ಆಪ್ತ ಸಮಾಲೋಚನೆಯ ವೇಳೆ ಲೈಂಗಿಕ ದೌರ್ಜನ್ಯದ ಮಾಹಿತಿ ಸಿಕ್ಕರೆ ಹೇಳಿಕೆ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆಗಸ್ಟ್​ 26 ರಂದು ಇಬ್ಬರು ಬಾಲಕಿಯರು ಹಾಗೂ ಅಕ್ಟೋಬರ್ 13 ರಂದು ನಾಲ್ವರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ದೂರು ನೀಡಿದ್ದರು. ನಂತರದ ದಿನಗಳಲ್ಲಿ ತನಿಖಾಧಿಕಾರಿ ದೂರು ನೀಡಿದ ಮಕ್ಕಳು, ಪೋಷಕರು ಹಾಗೂ ಇತರ ಸಂಬಂಧಿಸಿದ ವ್ಯಕ್ತಿಗಳ ಹೇಳಿಕೆ ದಾಖಲಿಸಿದ್ದರು. ಮಕ್ಕಳ ದೂರಿನ ಆಧಾರದ ಮೇಲೆ ಶಿವಮೂರ್ತಿ ಶರಣರನ್ನು ಬಂಧಿಸಲಾಯಿತು.

2ನೇ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗು ಮುರುಘಾ ಮಠದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ 2ನೇ ದೂರಿನ ಇಬ್ಬರು ಆರೋಪಿಗಳ ನಿರಿಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು 25ಕ್ಕೆ ಮುಂದೂಡಿದೆ. ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಆರಂಭಿಸಿದ ನ್ಯಾಯಾಧೀಶರು ಸಂತ್ರಸ್ತರ ಹೇಳಿಕೆ ದಾಖಲು ಮಾಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದರು.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಾಲ ನ್ಯಾಯ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು ಬುಧವಾರ (ಅ 9) ಸ್ಥಳ ಮಹಜರು ಮಾಡಿದ್ದಾರೆ. ಪಿಎಸ್‌ಐ ಡಿ.ಶಿವಕುಮಾರ್‌ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ. ಪೊಲೀಸರ ತಂಡ ಮುರುಘಾ ಮಠಕ್ಕೆ ಭೇಟಿ ನೀಡಿ, ನಾಲ್ಕೂವರೆ ವರ್ಷದ ಹೆಣ್ಣು ಮಗು ಇದ್ದ ಮಡಿಲು ದತ್ತು ಮಕ್ಕಳ ಕೇಂದ್ರ ಹಾಗೂ 17 ವರ್ಷದ ಬಾಲಕಿ ವಾಸ್ತವ್ಯ ಹೂಡಿದ್ದ ಹಾಸ್ಟೆಲ್‌ನ ಮಹಜರು ಪ್ರಕ್ರಿಯೆ ನಡೆಸಿತು.

Published On - 1:42 pm, Thu, 20 October 22

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ