AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್​​ಗೆ ದಂಡ ವಿಧಿಸಿದ ಹೈಕೋರ್ಟ್; ಏನಿದು ಪ್ರಕರಣ?

ಕೆಲವು ಆದೇಶ ಉಲ್ಲಂಘಣೆ ಹಿನ್ನಲೆ ವಿಹೆಚ್‌ಪಿ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿ ಬುಧವಾರ ಆದೇಶ ಹೊರಡಿಸಿದೆ. ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ವೇಳೆ ಹೈಕೋರ್ಟ್ ನಿರ್ಧರಿಸಿದ್ದ ಸಮಯ ಮೀರಿ ಭಾಗವಹಿಸಿ ಭಾಷಣ ಮಾಡಿದ್ದರಿಂದ ದಂಡ ವಿಧಿಸಲಾಗಿದೆ.

ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್​​ಗೆ ದಂಡ ವಿಧಿಸಿದ ಹೈಕೋರ್ಟ್; ಏನಿದು ಪ್ರಕರಣ?
ಶರಣ್ ಪಂಪ್​​ವೆಲ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Oct 08, 2025 | 6:50 PM

Share

ಚಿತ್ರದುರ್ಗ, ಅಕ್ಟೋಬರ್​ 08: ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ (Sharan Pumpwell) ಹೈಕೋರ್ಟ್ 2 ಲಕ್ಷ ರೂ. ದಂಡ (fine) ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಆದೇಶ ಹೊರಡಿಸಲಾಗಿದೆ.

ನಡೆದದ್ದೇನು? 

ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್​​ವೆಲ್​​ ಹೈಕೋರ್ಟ್ ಮೊರೆ ಹೋಗಿದ್ದರು. ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಮಹಾಗಣಪತಿ ಶೋಭಾಯಾತ್ರೆಗೆ ಡಿಜೆ ನಿರ್ಬಂಧ: ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ, ಹಿಂದೂ ಸಂಘಟನೆಗಳ ಪ್ರತಿಭಟನೆ

ಸೆಪ್ಟೆಂಬರ್​ 13 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಬೆಳಗ್ಗೆ 10:30ರಿಂದ 12:30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಶರಣ್ ಪಂಪ್​​ವೆಲ್​​ ಅಂದಿನ ದಿನ 12:30ರ ಬದಲು 12:45ರವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದು, ಜೊತೆಗೆ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಇ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಹೀಗಾಗಿ ಆದೇಶ ಉಲ್ಲಂಘಿಸಿದ್ದಕ್ಕೆ ಇದೀಗ ಹೈಕೋರ್ಟ್ ದಂಡ ವಿಧಿಸಿ ಆದೇಶಿಸಿದೆ.

ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಜಿಲ್ಲಾ ಪ್ರವೇಶಿಸದಂತೆ ನಿರ್ಬಂಧಿಸಿದ್ದಕ್ಕೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಹೋರಾಟ ಮಾಡಿದ್ದರು. ಶೋಭಾಯಾತ್ರೆಗೆ ತಂದಿದ್ದ ಡಿಜೆ ವಾಹನದ ಟ್ಯಾಂಕ್​​ಗೆ ಪೊಲೀಸರು ನೀರೆರೆದು ಮರಳಿ ಕಳಿಸಲು ಯತ್ನಿಸಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಕೊನೆಗೂ ಪೊಲೀಸರು 6 ಡಿಜೆ ಮಾದರಿ ಸೌಂಡ್ ಸಿಸ್ಟಮ್​​ಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಹಿಂದೂ ಮಹಾಗಣಪತಿಯ ಡಿಜೆ ಜಪ್ತಿ, ಡೀಸೆಲ್ ಟ್ಯಾಂಕಿಗೆ​ ನೀರು ಸುರಿದ್ರಾ ಪೊಲೀಸ್ರು?

ಈ ವೇಳೆ ಪ್ರತಿಕ್ರಿಯಿಸಿದ್ದ ಶರಣ್ ಪಂಪ್​​ವೆಲ್ ಹೈಕೋರ್ಟ್ ಮೊರೆ ಹೋಗಿ ಶೋಭಾಯಾತ್ರೆ ಕಾರ್ಯಕ್ರಮಕ್ಕೆ ಬರಲು ಅನುಮತಿ ಪಡೆದಿದ್ದೇನೆ. ರಾಜ್ಯ ಸರ್ಕಾರ ಏಕೆ ಹಿಂದೂ ಧಾರ್ಮಿಕ ಆಚರಣೆ, ಹಬ್ಬಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆಯೋ ಗೊತ್ತಿಲ್ಲ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ ಮುದನೂರ್, ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?