AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ರೂಟ್​ ಮ್ಯಾಪ್ ಇಲ್ಲಿದೆ ನೋಡಿ

ರಾಜ್ಯದ ವಿವಿಧೆಡೆ ಗಣೇಶೋತ್ಸವ ಮತ್ತು ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ ಗದ್ದಲಗಳು ನಡೆದಿವೆ. ಇದೆ ಸಂದರ್ಭದಲ್ಲಿ ನಾಳೆ(ಸೆ.28) ಕೋಟೆನಾಡು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯುತ್ತಿದೆ. ಗಣೇಶನ ಮೆರವಣಿಗೆಯಲ್ಲಿ ಲಕ್ಷಾಂತರ ಜನ ಭಾಗಿ ಆಗಲಿದ್ದು ದುರ್ಗ ಮದುವಣಗಿತ್ತಿಯಂತೆ ಅಲಂಕೃತಗೊಂಡಿದೆ. ಜೊತೆಗೆ ಪೊಲೀಸರು ಕೂಡ ಹೈ ಅಲರ್ಟ ಆಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ರೂಟ್​ ಮ್ಯಾಪ್ ಇಲ್ಲಿದೆ ನೋಡಿ
ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Sep 27, 2024 | 6:25 PM

Share

ಚಿತ್ರದುರ್ಗ, ಸೆ.27: ಚಿತ್ರದುರ್ಗ(Chitradurga) ನಗರದ ಜೈನಧಾಮದಲ್ಲಿ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ. ನಾಳೆ(ಸೆ.28) ಹಿಂದೂ ಮಹಾಗಣಪತಿ ಶೊಭಾಯಾತ್ರೆ ಮತ್ತು ವಿಸರ್ಜನೆ ಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ನಾಳೆಯೂ ಐದಾರು ಲಕ್ಷ ಜನ ಗಣಪತಿಯ ಮೆರವಣಿಗೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಜೊತೆಗೆ ನಿರಾತಂಕದಿಂದ ಭಕ್ತರು ಗಣೇಶೊತ್ಸವದಲ್ಲಿ ಭಾಗಿ ಆಗಬೇಕೆಂದು ಆಯೋಜಕರು ಹೇಳಿದ್ದಾರೆ.

ರೂಟ್​ ಮ್ಯಾಪ್ ಇಲ್ಲಿದೆ

ಸೆ.28ರಂದು ಚಿತ್ರದುರ್ಗ ನಗರದ ಬಿ. ಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂಧಿಸಲಾಗಿದೆ. ಚಿತ್ರದುರ್ಗ ನಗರದ ಹೊರವಲಯದ ಬೈಪಾಸ್ ರಸ್ತೆಗಳ ಮೂಲಕ ಸಂಚರಿಸಲು ಸೂಚಿಸಲಾಗಿದೆ. ಅಂತೆಯೇ ಬಿ ಡಿ ರಸ್ತೆ ಉದ್ದಕ್ಕೂ ವಾಹನಗಳಿಗೆ ಎಂಟ್ರಿ ನೀಡದಂತೆ ಬ್ಯಾರಿಕೇಡ್​ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ:ತುಮಕೂರು ಹಿಂದೂ ಮಹಾಗಣಪತಿ ವಿಸರ್ಜನೆಯಲ್ಲಿ ಕಿಕ್ಕಿರಿದ ಜನ

ಪೊಲೀಸ್ ಇಲಾಖೆ ಹೈ ಅಲರ್ಟ್, ಮದ್ಯಮಾರಾಟ ನಿಷೇಧ

ಇನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೂ ಹೈ ಅಲರ್ಟ್ ಆಗಿದೆ. ಅದರಂತೆ ಚಿತ್ರದುರ್ಗದಲ್ಲಿ ಇಂದು ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಸಲಾಯಿತು. ಮುಂಜಾಗೃತೆ ಕ್ರಮವಾಗಿ ಸೆ.27ರ ಬೆಳಗ್ಗೆಯಿಂದ 28ರ ಮಧ್ಯರಾತ್ರಿವರೆಗೆ ಚಿತ್ರದುರ್ಗದಲ್ಲಿ ಮದ್ಯಮಾರಾಟ ನಿಷೇಧಿಸಿದೆ. ಈ ಕುರಿತು ಮಾತನಾಡಿದ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು, ‘ಮುಂಜಾಗೃತ ಕ್ರಮವಾಗಿ 6 ಜನ ಎಎಸ್ಪಿ , 16 ಜನ ಡಿವೈಎಸ್ಪಿ 50 ಸಿಪಿಐ, 120ಪಿಎಸ್ ಐ, 167 ಎಎಸ್ಐ, 1886 ಪೊಲೀಸರು, 500 ಜನ ಹೋಂಗಾರ್ಡ್ಸ್, 10 ಕೆಎಸ್​​ಆರ್​​ಪಿ, 12 ಡಿಎಆರ್ , 4 ಕ್ಯೂಆರ್​ಟಿ ತುಕಡಿಗಳನ್ನು ಬಂದೋಬಸ್ತ್​ಗೆ ನಿಯೋಜಿಸಲಾಗಿದೆ. ಒಟ್ಟು 3,500ಕ್ಕೂ ಹೆಚ್ಚು ಜನ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಅಲ್ಲದೆ 26 ವಾಚ್ ಟವರ್, 150 ಕಡೆ ಸಿಸಿಟಿವಿ, 5ಡ್ರೋನ್, 50 ಸ್ಕೈಸೆಂಟ್ರಿಗಳು ಅಳವಡಿಸಲಾಗಿದೆ. 9 ಕಡೆ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಗರಿ ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆಗೆ ಸಿದ್ಧವಾಗಿದೆ. ಬೆಳಗ್ಗೆ 11ಗಂಟೆಗೆ ಚಳ್ಳಕೆರೆ ವೃತ್ತ ಬಳಿಯ ಜೈನಧಾಮದಿಂದ ಆರಂಭವಾಗಿ ಚಂದ್ರವಳ್ಳಿವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಲಕ್ಷಾಂತರ ಜನರು ಉತ್ಸವದಲ್ಲಿ ಭಾಗಿ ಆಗಲಿದ್ದಾರೆ. ಡಿಜೆ ಸದ್ದಿಗೆ ಮೈಮರೆತು ಕುಣಿಯಲಿದ್ದು, ಪೊಲೀಸರು ಮತ್ತು ಜಿಲ್ಲಾಡಳಿತ ಈ ಸಲ ಹಿಂದೆಂದಿಗಿಂತಲೂ ಹೆಚ್ಚು ಅಲರ್ಟಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮ ಕೈಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!