AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಬಂಧ ಕಡೆಗಣಿಸಿ, ಕೋಟೆ ನಾಡಿನಲ್ಲಿ 21 ದಿನ ಅದ್ಧೂರಿ ಗಣೇಶೋತ್ಸವಕ್ಕೆ ಭರದ ಸಿದ್ಧತೆ ನಡೆಸಿದ ಭಜರಂಗ ದಳ

ರಾಜ್ಯ ಬಿಜೆಪಿ ಸರ್ಕಾರ ಗಣೇಶೋತ್ಸವಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಆದ್ರೆ, ಸರ್ಕಾರದ ಆದೇಶಕ್ಕೆ ಸಂಘ ಪರಿವಾರವೇ ಸೆಡ್ಡು ಹೊಡೆಯಲು ಅಣಿಯಾಗಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕೋಟೆನಾಡಿನಲ್ಲಿ ಅದ್ಧೂರಿ‌ ಗಣೇಶೋತ್ಸವಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ.

ಸರ್ಕಾರದ ನಿರ್ಬಂಧ ಕಡೆಗಣಿಸಿ, ಕೋಟೆ ನಾಡಿನಲ್ಲಿ 21 ದಿನ ಅದ್ಧೂರಿ ಗಣೇಶೋತ್ಸವಕ್ಕೆ ಭರದ ಸಿದ್ಧತೆ ನಡೆಸಿದ ಭಜರಂಗ ದಳ
ಸರ್ಕಾರದ ನಿರ್ಬಂಧವನ್ನು ಪಕ್ಕಕ್ಕಿಟ್ಟು ಗಣೇಶೋತ್ಸವಕ್ಕೆ ಸಿದ್ಧತೆ
TV9 Web
| Edited By: ಸಾಧು ಶ್ರೀನಾಥ್​|

Updated on:Sep 07, 2021 | 5:03 PM

Share

ಚಿತ್ರದುರ್ಗ: ಪ್ರತಿ ವರ್ಷ ಕೋಟೆನಾಡಿನಲ್ಲಿ ಗಣೇಶೋತ್ಸವ ನಡೆಯುತ್ತಿತ್ತು. ಆದ್ರೆ ಈ ವರ್ಷ3ನೇ ಅಲೆ ಭೀತಿಯಿಂದ ಗಣೇಶೋತ್ಸವದ ಕೊರೊನಾ ಕರಿನೆರಳು ಬಿದ್ದಿದೆ. ಖಡಕ್ ರೂಲ್ಸ್ ಹೇರಿ ಅದ್ಧೂರಿ ಗಣೇಶೋತ್ಸವಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಹೀಗೆ ಸರ್ಕಾರದ ಟಫ್ ರೂಲ್ಸ್‌ ನಡುವೆ ಕೋಟೆನಾಡಿನ ಹಿಂದೂ ಮಹಾಸಭಾ ಗಣಪತಿ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಬೃಹತ್ ವೇದಿಕೆ ಗಣೇಶ ಉತ್ಸವಕ್ಕೆ ಸಜ್ಜಾಗುತ್ತಿದೆ. 7-8 ಅಡಿಯ ಗಣೇಶ ಪ್ರತಿಷ್ಠಾಪನೆಗೆ ಸಿನಿಮಾ ಸೆಟ್‌ನಂತೆ ವೇದಿಕೆ ರೆಡಿಮಾಡಿಕೊಳ್ಳಲಾಗುತ್ತಿದೆ. ಇನ್ನು ಎಂದಿನಂತೆ ಸಾಂಪ್ರದಾಯಿಕ ಆಚರಣೆ ನಡೆಯಲಿದ್ದು, 21ನೇ ದಿನ ಗಣೇಶ ವಿಸರ್ಜನೆ ಮಾಡುತ್ತೇವೆ ಎಂದು ಭಜರಂಗದಳ ಮುಖ್ಯಸ್ಥ ಪ್ರಭಂಜನ್ ತಿಳಿಸಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆ‌ ಬೊಮ್ಮಾಯಿ ಸರ್ಕಾರ ಕೆಲ ನಿರ್ಬಂಧ ಹೇರಿ‌ ಆದೇಶ ಹೊರಡಿಸಿದೆ. ಗಣೇಶ ಮೂರ್ತಿ ಎತ್ತರ, ಐದು ದಿನ ಮಾತ್ರ ಅವಕಾಶ ಹಾಗೂ ನಿಯಮಿತ ಪೆಂಡಾಲ್ ಸ್ಥಳ‌ ಸೇರಿದಂತೆ ಇತರೆ ನಿರ್ಬಂಧಗಳನ್ನು ವಿಧಿಸಿದೆ. ಆದ್ರೆ, ಸಂಘ ಪರಿವಾರ ಮಾತ್ರ ನಾವು 21 ದಿನ ಗಣಪತಿ ಇಟ್ಟು ಅದ್ಧೂರಿಯಾಗಿ ಗಣೇಶ ಉತ್ಸವ ಮಾಡುತ್ತೇವೆ ಎನ್ನುತ್ತಿದೆ. ಸರ್ಕಾರ ನಿರ್ಬಂಧ ಸಡಿಲಿಸದಿದ್ದರೇ ಸಂಘ ಪರಿವಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ವಿಪುಲ್ ಜೈನ್ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ದದಲ್ಲಿ ಎಂದಿನಂತೆ ಅದ್ಧೂರಿ ಗಣೇಶೋತ್ಸವಕ್ಕೆ ಸಂಘ ಪರಿವಾರ ಸಿದ್ಧವಾಗಿದೆ. ಸರ್ಕಾರದ ಆದೇಶದ ಬಗ್ಗೆ ತಲೆ ಕೆಡಿಸಿಕೊಳ್ಳದೆ ತನ್ನ ಪಾಡಿಗೆ ತಾನು ಗಣೇಶ ಹಬ್ಬಕ್ಕೆ ಸಜ್ಜಾಗುತ್ತಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಈ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕುತ್ತಾ? ಅಥವಾ ಒತ್ತಡಕ್ಕೆ ಮಣಿದು ನಿಯಮಗಳನ್ನ ಸಡಿಲಿಸುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಇದನ್ನೂ ಓದಿ: Shamanthakopakyana: ತಿಳಿದೂತಿಳಿದು ಗಣೇಶ ಹಬ್ಬದ ದಿನ ಯಾಕೆ ಚಂದ್ರನನ್ನು ನೋಡುವಿರಿ? ಚಂದ್ರ ದೋಷ ಬಾಧಿಸುತ್ತದೆ

Published On - 7:40 am, Tue, 7 September 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ