ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಬಹಳ ಹಿಂದಿನಿಂದಲೂ ಆರೋಪಗಳು ಕೇಳಿ ಬರುತ್ತಿವೆ. ನಟ ದರ್ಶನ್ ಅವರನ್ನು ಆ ಜೈಲಿನಲ್ಲಿ ಇರಿಸಿದ ಬಳಿಕ ಅಲ್ಲಿನ ಕರ್ಮಕಾಂಡಗಳು ಒಂದೊಂದಾಗಿ ಹೊರ ಬಂದಿದ್ದವು. ಇದೀಗ ಅದೇ ಜೈಲಿನಿಂದ ಕೊಲೆ ಆರೋಪಿಯೊಬ್ಬ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದಾನೆ.

ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ
ಆರೋಪಿ ಸುಜಯ್ ಭಾರ್ಗವ್ ಹಾಗೂ ಆತನ ವಿರುದ್ಧದ ಪೊಲೀಸ್ ದೂರಿನ ಪ್ರತಿ
Edited By:

Updated on: Apr 15, 2025 | 9:45 AM

ಚಿತ್ರದುರ್ಗ, ಏಪ್ರಿಲ್ 15: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ (Parappana Agrahara Jail) ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ (Chitradurga) ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ (Death threat) ಹಾಕಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಆರೋಪಿ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯನಿ ಅರ್ಜುನ್ ಸಿಂಗ್​ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ. ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಲ್ಲದೆ, ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್​ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್​ ಆರೋಪಿಸಿದ್ದಾರೆ.

ಅರ್ಜುನ್ ಸಿಂಗ್ ಅವರು ಹಿರಿಯೂರು ಸರ್ಕಾರಿ ಆಸ್ಪತ್ರೆ ಬಳಿ ಆಯಕಟ್ಟಿನ ಜಾಗದಲ್ಲಿರುವ ಕಟ್ಟಡದಲ್ಲಿ ಮಳಿಗೆ ನಡೆಸುತ್ತಿದ್ದಾರೆ. ಇದನ್ನು ಮೂರು ದಿನದಲ್ಲಿ ಕಟ್ಟಡ ಖಾಲಿ ಮಾಡದಿದ್ದರೆ ಜೀವ ಉಳಿಸಲ್ಲ. ಸುಟ್ಟು ಹಾಕುತ್ತೇನೆಂದು ಸುಜಯ್ ಭಾರ್ಗವ್ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಕೆಲ ದಿನ ಹಿಂದೆ ಇಬ್ಬರು ಹುಡುಗರನ್ನು ಗಾರ್ಮೆಂಟ್ಸ್ ಗೆ ಕಳಿಸಿ ಅವಾಜ್ ಹಾಕಿಸಿದ್ದ. ಜನವರಿ 10 ರಂದು ಸಹ ಅಪರಿಚಿತ ಯುವಕರಿಬ್ಬರು ಬಂದು ಧಮ್ಕಿ ಹಾಕಿದ್ದರು. ಈ ವಿಡಿಯೋ ಸಿಸಿಟಿವಿಲಿ ರೆಕಾರ್ಡ್ ಆಗಿತ್ತು. ಸುಜಯ್ ಕಡೆಯವರೆಂದು ಹೇಳಿಕೊಂಡು ಬಂದು ಯುವಕರು ಧಮ್ಕಿ ಹಾಕಿದ್ದರು. ಈ ಬಗ್ಗೆ ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈಗ ಮತ್ತೆ ನಿರಂತರ ಕರೆ, ವಾಯ್ಸ್ ಮೆಸೇಜ್ ಮೂಲಕ ಸುಜಯ್ ಧಮ್ಕಿ ಹಾಕುತ್ತಿದ್ದಾನೆ ಎನ್ನಲಾಗಿದೆ. ಕಟ್ಟಡ ಮಾಲೀಕ ಸೂರ್ಯನಾರಾಯಣ, ಅವರ ಪುತ್ರನಿಗೂ ಕರೆ ಮಾಡಿ ಆವಾಜ್ ಹಾಕಿದ್ದಾನೆ. ಸೂರ್ಯನಾರಾಯಣರ ಸಹೋದರ
ಚಂದ್ರಶೇಖರ್ ಪುತ್ರನೇ ಸುಜಯ್. ಚಂದ್ರಶೇಖರ್ ದಶಗಳ ಹಿಂದೆಯೇ ಆಸ್ತಿಯಲ್ಲಿ ಪಾಲು ಪಡೆದಿದ್ದರು.

ಇದನ್ನೂ ಓದಿ
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್​ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ

ಇದನ್ನೂ ಓದಿ: ಲಂಚಕ್ಕಾಗಿ ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು

ನಾನು ನಿನ್ನ ಮಗನಿದ್ದಂತೆ, ನನಗೂ ಪಾಲು ಕೊಡು ಎಂದು ಸುಜಯ್ ಧಮ್ಕಿ ಹಾಕಿದ್ದಾಗಿ ಸೂರ್ಯನಾರಾಯಣ ಹೇಳಿದ್ದು, ಸುಜಯ್ ಮತ್ತು ನಮ್ಮ ಮದ್ಯೆ ಯಾವುದೇ ಆಸ್ತಿ ವಿವಾದ ಇಲ್ಲ ಎಂದಿದ್ದಾರೆ. ಹೀಗಾಗಿ, ಅರ್ಜುನ್ ಸಿಂಗ್​​ಗೆ ಬೆದರಿಸಿ ಮಳಿಗೆ ಖಾಲಿ ಮಾಡಿಸಿ ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ಸುಜಯ್​ನದ್ದು ಎನ್ನಲಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪಾತಕಿಯ ಬೆದರಿಕೆ ಕರೆಯಿಂದ ಕಂಗೆಟ್ಟಿರುವ ಉದ್ಯಮಿ, ಕಟ್ಟಡ ಮಾಲೀಕರು ಸದ್ಯ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us