ಚಿತ್ರದುರ್ಗ: ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 8 ಕೋಟಿ ಹಣ ಪತ್ತೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನೋವಾ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಅಡಿಕೆ ವರ್ತಕರೊಬ್ಬರಿಗೆ ಸೇರಿದ ಹಣ ಇದು ಎಂದು ಹೇಳಲಾಗುತ್ತಿದೆ.

ಚಿತ್ರದುರ್ಗ: ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 8 ಕೋಟಿ ಹಣ ಪತ್ತೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಪೊಲೀಸರು ವಶಕ್ಕೆ ಪಡೆದ 8 ಕೋಟಿ ರೂಪಾಯಿ
Edited By: Rakesh Nayak Manchi

Updated on: Nov 29, 2023 | 8:12 PM

ಚಿತ್ರದುರ್ಗ, ನ.29: ದಾಖಲೆ ಇಲ್ಲದೆ ಕೋಟ್ಯಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜಿಲ್ಲೆಯ (Chitradurga) ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಇದು ಅಡಕೆ ವರ್ತಕರೊಬ್ಬರಿಗೆ ಸೇರಿದ್ದು ಎನ್ನಲಾಗಿದೆ.

ಈ ಬಗ್ಗೆ ಟಿವಿ9ಗೆ ಚಿತ್ರದುರ್ಗ ಎಸ್​ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಸಚಿನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಸಿಸಿಬಿ ಮಿಂಚಿನ ಕಾರ್ಯಚರಣೆ: ಡ್ರಗ್ಸ್​ ಫ್ಯಾಕ್ಟರಿ ನಡೆಸುತ್ತಿದ್ದವನ ಬಂಧನ, 10 ಕೋಟಿ ರೂ. ಮೌಲ್ಯದ MDMA ವಶಕ್ಕೆ

ಪತ್ತೆಯಾದ ಹಣದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ವಿಚಾರಣೆ ಬಳಿಕ ಖಚಿತ ಮಾಹಿತಿ ತಿಳಿಯಲಿದೆ. ಯಾರಿಗೆ ಸೇರಿದ ಹಣ, ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿಯಬೇಕಿದೆ. ಸುಮಾರು 8 ಕೋಟಿ ಹಣ ಜಪ್ತಿ ಮಾಡಲಾಗಿದೆ. ಅಧಿಕಾರಿಗಳು ಹಣ ಎಣಿಕೆ ನಡೆಸುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us