AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ, ಸೈಬರ್​ ಠಾಣೆಯಲ್ಲಿ ದೂರು ದಾಖಲು

ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್​ ಮಾಡಿದ್ದ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಳು. ತಕ್ಷಣವೇ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ, ಸೈಬರ್​ ಠಾಣೆಯಲ್ಲಿ ದೂರು ದಾಖಲು
ಜಿ.ಹೆಚ್.ತಿಪ್ಪಾರೆಡ್ಡಿ
TV9 Web
| Updated By: ಆಯೇಷಾ ಬಾನು|

Updated on:Nov 02, 2022 | 11:19 AM

Share

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್​ಗೆ​ ಬೀಳಿಸುವ ಯತ್ನ ನಡೆದಿದೆ. ವಿಡಿಯೋ ಕಾಲ್​ ಮಾಡಿ ಶಾಸಕರನ್ನು ಹನಿಟ್ರ್ಯಾಪ್​ ಮಾಡಲು ಯತ್ನಿಸಲಾಗಿದ್ದು ತಕ್ಷಣ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಈ ಬಗ್ಗೆ ಚಿತ್ರದುರ್ಗ ಸೈಬರ್​ ಠಾಣೆಗೆ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೊದಲಿಗೆ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್ ಒಂದು ಬಂದಿದೆ. ಅದನ್ನು ರಿಸಿವ್ ಮಾಡುತ್ತಿದ್ದಂತೆ ಅದರಲ್ಲಿ ಅಶ್ಲೀಲ ದೃಶ್ಯ ಕಂಡು ತಿಪ್ಪಾರೆಡ್ಡಿ ಅವರು ಮೊಬೈಲನ್ನು ಪಕ್ಕಕ್ಕೆ ಇಟ್ಟಿದ್ದಾರೆ. ಬಳಿಕ ಹನಿಟ್ರ್ಯಾಪ್​ಗೆ​ ಯತ್ನಿಸಿದ್ದ ಕಿಡಿಗೇಡಿಗಳು ಕರೆ ಕಡಿತವಾದ ನಂತರ ಅಶ್ಲೀಲ ವಿಡಿಯೋ ವಾಟ್ಸಾಪ್​ ಮಾಡಿದ್ದಾರೆ. ವಿಡಿಯೋ ವಾಟ್ಸಾಪ್​ಗೆ ಬಂದದನ್ನು ಕಂಡು ತಿಪ್ಪಾರೆಡ್ಡಿ ಅವರು ತಮ್ಮವರಿಗೆ ಹೇಳಿ ವಿಡಿಯೋ ಕಾಲ್​ ಮಾಡಿದ್ದ ನಂಬರ್​ ಬ್ಲಾಕ್​ ಮಾಡಿಸಿದ್ದಾರೆ. ಇದಾದ ಬಳಿಕ ಸೈಬರ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಆಳಂದ: ಕಬ್ಬಿನ ಗದ್ದೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ತನಿಖೆ ವೇಳೆ ಈ ವಿಡಿಯೋ ಕಾಲ್, ರಾಜಸ್ಥಾನ, ಒಡಿಶಾದಿಂದ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ. ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್​ ಮಾಡಿದ್ದ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಳು. ತಕ್ಷಣವೇ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಅಪರಿಚಿತ ಯುವತಿಯಿಂದ ವಾಟ್ಸಪ್‍ನಲ್ಲಿ ವಿಡಿಯೋ ಕಾಲ್ ಬಂದಿತ್ತು. ಕ್ಷೇತ್ರದ ಜನರೋ ಅಥವಾ ಸಂಬಂಧಿಕರೋ ಎಂದು ಕಾಲ್ ರಿಸೀವ್ ಮಾಡಿದ್ದೆ. ಆದರೆ ಅವರ ಭಾಷೆ ನನಗೆ ಅರ್ಥವಾಗಿಲ್ಲ. ಆದರೆ ಈ ರೀತಿ ಆಗಿರುವುದು ನನ್ನ ಗಮನಕ್ಕೆ 2 ಬಾರಿ ಬಂತು. ಆ ಸಮಯದಲ್ಲಿ ನನ್ನ ಪತ್ನಿಗೆ ತಿಳಿಸಿ ತಕ್ಷಣ ಆ ನಂಬರ್ ಅನ್ನು ಬ್ಲಾಕ್ ಮಾಡಿಸಿದೆ. ನಂತರ ಈ ಬಗ್ಗೆ ಎಸ್‍ಪಿಗೂ ಮಾಹಿತಿ ನೀಡಿದೆ. ಆದರೆ ತನಿಖೆ ಎಲ್ಲಿವರೆಗೆ ಬಂದಿದೆ ಎನ್ನುವುದನ್ನು ನಾನು ವಿಚಾರಿಸಿಲ್ಲ. ಆದರೆ ಅವರು ತನಿಖೆ ನಡೆಸುತ್ತಿದ್ದಾರೆ ಜೊತೆಗೆ ವೀಡಿಯೋ ಕಾಲ್ ಬಂದ ನಂಬರನ್ನು ಪೊಲೀಸರು ತೆಗೆದುಕೊಂಡಿದ್ದಾರೆ. ಇದು ಓರಿಸ್ಸಾ ಅಥವಾ ರಾಜಸ್ಥಾನದಿಂದ ಬಂದ ನಂಬರ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಯಾರ ಮೇಲೂ ನನಗೆ ಅನುಮಾನವಿಲ್ಲ. ನನಗೆ ಯಾರು ವಿರೋಧಗಳಿಲ್ಲ. ಘಟನೆಗೆ ಸಂಬಂಧಿಸಿ ಸೈಬರ್ ಠಾಣೆಗೆ ದೂರು ನೀಡಿದ್ದೇನೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:13 am, Wed, 2 November 22

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು