AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ, ಸೈಬರ್​ ಠಾಣೆಯಲ್ಲಿ ದೂರು ದಾಖಲು

ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್​ ಮಾಡಿದ್ದ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಳು. ತಕ್ಷಣವೇ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ, ಸೈಬರ್​ ಠಾಣೆಯಲ್ಲಿ ದೂರು ದಾಖಲು
ಜಿ.ಹೆಚ್.ತಿಪ್ಪಾರೆಡ್ಡಿ
TV9 Web
| Updated By: ಆಯೇಷಾ ಬಾನು|

Updated on:Nov 02, 2022 | 11:19 AM

Share

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್​ಗೆ​ ಬೀಳಿಸುವ ಯತ್ನ ನಡೆದಿದೆ. ವಿಡಿಯೋ ಕಾಲ್​ ಮಾಡಿ ಶಾಸಕರನ್ನು ಹನಿಟ್ರ್ಯಾಪ್​ ಮಾಡಲು ಯತ್ನಿಸಲಾಗಿದ್ದು ತಕ್ಷಣ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಈ ಬಗ್ಗೆ ಚಿತ್ರದುರ್ಗ ಸೈಬರ್​ ಠಾಣೆಗೆ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೊದಲಿಗೆ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್ ಒಂದು ಬಂದಿದೆ. ಅದನ್ನು ರಿಸಿವ್ ಮಾಡುತ್ತಿದ್ದಂತೆ ಅದರಲ್ಲಿ ಅಶ್ಲೀಲ ದೃಶ್ಯ ಕಂಡು ತಿಪ್ಪಾರೆಡ್ಡಿ ಅವರು ಮೊಬೈಲನ್ನು ಪಕ್ಕಕ್ಕೆ ಇಟ್ಟಿದ್ದಾರೆ. ಬಳಿಕ ಹನಿಟ್ರ್ಯಾಪ್​ಗೆ​ ಯತ್ನಿಸಿದ್ದ ಕಿಡಿಗೇಡಿಗಳು ಕರೆ ಕಡಿತವಾದ ನಂತರ ಅಶ್ಲೀಲ ವಿಡಿಯೋ ವಾಟ್ಸಾಪ್​ ಮಾಡಿದ್ದಾರೆ. ವಿಡಿಯೋ ವಾಟ್ಸಾಪ್​ಗೆ ಬಂದದನ್ನು ಕಂಡು ತಿಪ್ಪಾರೆಡ್ಡಿ ಅವರು ತಮ್ಮವರಿಗೆ ಹೇಳಿ ವಿಡಿಯೋ ಕಾಲ್​ ಮಾಡಿದ್ದ ನಂಬರ್​ ಬ್ಲಾಕ್​ ಮಾಡಿಸಿದ್ದಾರೆ. ಇದಾದ ಬಳಿಕ ಸೈಬರ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಆಳಂದ: ಕಬ್ಬಿನ ಗದ್ದೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

ತನಿಖೆ ವೇಳೆ ಈ ವಿಡಿಯೋ ಕಾಲ್, ರಾಜಸ್ಥಾನ, ಒಡಿಶಾದಿಂದ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ. ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್​ ಮಾಡಿದ್ದ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಳು. ತಕ್ಷಣವೇ ಮೊಬೈಲ್​ ಪಕ್ಕಕ್ಕೆ ಇಟ್ಟಿರುವುದಾಗಿ ಜಿ.ಹೆಚ್.ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಅಪರಿಚಿತ ಯುವತಿಯಿಂದ ವಾಟ್ಸಪ್‍ನಲ್ಲಿ ವಿಡಿಯೋ ಕಾಲ್ ಬಂದಿತ್ತು. ಕ್ಷೇತ್ರದ ಜನರೋ ಅಥವಾ ಸಂಬಂಧಿಕರೋ ಎಂದು ಕಾಲ್ ರಿಸೀವ್ ಮಾಡಿದ್ದೆ. ಆದರೆ ಅವರ ಭಾಷೆ ನನಗೆ ಅರ್ಥವಾಗಿಲ್ಲ. ಆದರೆ ಈ ರೀತಿ ಆಗಿರುವುದು ನನ್ನ ಗಮನಕ್ಕೆ 2 ಬಾರಿ ಬಂತು. ಆ ಸಮಯದಲ್ಲಿ ನನ್ನ ಪತ್ನಿಗೆ ತಿಳಿಸಿ ತಕ್ಷಣ ಆ ನಂಬರ್ ಅನ್ನು ಬ್ಲಾಕ್ ಮಾಡಿಸಿದೆ. ನಂತರ ಈ ಬಗ್ಗೆ ಎಸ್‍ಪಿಗೂ ಮಾಹಿತಿ ನೀಡಿದೆ. ಆದರೆ ತನಿಖೆ ಎಲ್ಲಿವರೆಗೆ ಬಂದಿದೆ ಎನ್ನುವುದನ್ನು ನಾನು ವಿಚಾರಿಸಿಲ್ಲ. ಆದರೆ ಅವರು ತನಿಖೆ ನಡೆಸುತ್ತಿದ್ದಾರೆ ಜೊತೆಗೆ ವೀಡಿಯೋ ಕಾಲ್ ಬಂದ ನಂಬರನ್ನು ಪೊಲೀಸರು ತೆಗೆದುಕೊಂಡಿದ್ದಾರೆ. ಇದು ಓರಿಸ್ಸಾ ಅಥವಾ ರಾಜಸ್ಥಾನದಿಂದ ಬಂದ ನಂಬರ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಯಾರ ಮೇಲೂ ನನಗೆ ಅನುಮಾನವಿಲ್ಲ. ನನಗೆ ಯಾರು ವಿರೋಧಗಳಿಲ್ಲ. ಘಟನೆಗೆ ಸಂಬಂಧಿಸಿ ಸೈಬರ್ ಠಾಣೆಗೆ ದೂರು ನೀಡಿದ್ದೇನೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:13 am, Wed, 2 November 22

ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?