AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ.

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
ರಸ್ತೆ ಅಪಘಾತ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Aug 13, 2023 | 7:11 AM

Share

ಚಿತ್ರದುರ್ಗ: ಭೀಕರ ಅಪಘಾತ (Accident) ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ (Chitradurga) ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ. ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಈ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಕುಟುಂಬ ನಿನ್ನೆ (ಆ.12) ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು (ಆ.13) ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ‌ ಎಸ್​​​ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ಅಮೃತಹಳ್ಳಿಯ ಟೆಲಿಕಾಂ ಲೇಔಟ್‌ನ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಭಾಷ್ ಕುಮಾರ್(30) ಮೃತ ಯುವಕ.

ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಗಿಳಿಸಲಾಗಿತ್ತು. ಅಲ್ಲದೇ ನೇಣುಬಿಗಿದುಕೊಂಡಿದ್ದ ಹಗ್ಗವನ್ನು ಸಹೋದರ ಜಿತೇಂದ್ರ ಕತ್ತರಿಸಿ ಎಸೆದಿದ್ದರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sun, 13 August 23

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More