AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ: ಓರ್ವ ಕುರಿಗಾಹಿ ಸಾವು

ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ನಡಿದಿದೆ.

ಹೊಸದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ: ಓರ್ವ ಕುರಿಗಾಹಿ ಸಾವು
ಬಲ್ಲಾಳ ಸಮುದ್ರ ಗ್ರಾಮದ ಮಹೇಶ (55) ಮೃತ ವ್ಯಕ್ತಿ
TV9 Web
| Edited By: |

Updated on:Nov 30, 2022 | 4:16 PM

Share

ಚಿತ್ರದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ (bee attack) ಮಾಡಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ನಡೆದಿದೆ. ಬಲ್ಲಾಳ ಸಮುದ್ರ ಗ್ರಾಮದ ಮಹೇಶ (55) ಮೃತ ವ್ಯಕ್ತಿ. ಹೊಸದುರ್ಗ ತಾಲೂಕು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಚಾಕುವಿನಿಂದ ಇರಿದು ಪತಿಯಿಂದಲೆ ಪತ್ನಿಯ ಹತ್ಯೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕಾವೇರಿ‌ ನಗರದಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ ನಡೆದಿರುವಂಹ ಘಟನೆ ಹೊಸಕೋಟೆ ತಾಲೂಕಿನ ಕಾವೇರಿ‌ ನಗರದಲ್ಲಿ ನಡೆದಿದೆ. ಸ್ವಪ್ನ (22) ಮೃತ ಪತ್ನಿ. ಸುಧಾಕರ್​ ಹತ್ಯೆಗೈದ ಪತಿ. ಕಳೆದ 2 ವರ್ಷಗಳಿಂದ ದಂಪತಿ ದೂರವಾಗಿದ್ದರು. ಮೃತ ಮಹಿಳೆ ತವರು ಮನೆಗೆ ಬಂದು ಬದುಕು ಕಟ್ಟಿಕೊಂಡಿದ್ದರು.  ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ: ಓರ್ವ ಮಹಿಳೆ ಸಾವು

ಬೆಂಗಳೂರು: ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರಿ ಸಾವನ್ನಪ್ಪಿರವಂತಹ ಘಟನೆ ಕೆ.ಆರ್.ಪುರಂ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಶಾಲಿನಿ (27) ಸಾವನ್ನಪ್ಪಿದ ಮಹಿಳೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದ್ದು, ಮುಂದೆ ಸಾಗುತ್ತಿದ್ದ ಬೈಕ್​ಗೆ​ ಹಿಂಬದಿಯಿಂದ ಟಾಟ ಏಸ್ ವಾಹನ ಬಂದು ಗುದ್ದಿದೆ. ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಶಾಲಿನಿ ಮೃತಪಟ್ಟರೆ, ಹಿಂಬದಿ ಸವಾರ ಅಲೆನ್ ಸ್ಮಿತ್​ಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಲಾಗಿತ್ತು. ಅಪಘಾತ ಬಳಿಕ ಬೈಕ್ ಬಿಟ್ಟು ಟಾಟ ಏಸ್ ಚಾಲಕ ತೆರಳಿದ್ದಾನೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಮರಳೂರು ಕೆರೆ ಬಳಿ ನಡೆದಿದೆ.  ಹುಲಿಯೂರುದುರ್ಗ ನಿವಾಸಿಗಳಾದ ಅರುಣ್‌, ಚೇತನ್‌ ಮೃತ ದುರ್ದೈವಿಗಳು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಚಲಿಸುತ್ತಿದ್ದ ಕಾರಿಗೆ, ಕುಣಿಗಲ್ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ.  ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಬಳ್ಳಾರಿ: ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಗ್ರಾಮದಲ್ಲಿ ನಡೆದಿದೆ. ಹನುಮರೆಡ್ಡಿ(62) ಮೃತ ವ್ಯಕ್ತಿ. ಹನುಮರೆಡ್ಡಿ ಪೆಟ್ರೋಲ್ ಹಾಕಿಸಿಕೊಂಡು ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.    ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಗಿದೆ.

ಖಾಸಗಿ ಬಸ್​ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಾವು

ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 15 ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಗಾಯಳುಗಳು ಎನ್.ಆರ್ ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡಿದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:13 pm, Wed, 30 November 22

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ