AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯೊಳಗಿದ್ದ ಗ್ಯಾಸ್​ ಸಿಲಿಂಡರ್ ತಡರಾತ್ರಿ ವೇಳೆ ಸ್ಫೋಟ; ನಿದ್ರೆಯಲ್ಲಿದ್ದ ದಂಪತಿ ದುರ್ಮರಣ

ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ತಡರಾತ್ರಿ ವೇಳೆ ಏಕಾಏಕಿ ಸ್ಫೋಟಿಸಿದ ಕಾರಣ ಪ್ರಕಾಶ್ ಹಾಗೂ ಸರೋಜಮ್ಮ ಇಬ್ಬರೂ ಮೃತಪಟ್ಟಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಿಸಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಮನೆಯೊಳಗಿದ್ದ ಗ್ಯಾಸ್​ ಸಿಲಿಂಡರ್ ತಡರಾತ್ರಿ ವೇಳೆ ಸ್ಫೋಟ; ನಿದ್ರೆಯಲ್ಲಿದ್ದ ದಂಪತಿ ದುರ್ಮರಣ
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು
TV9 Web
| Edited By: |

Updated on: Jul 21, 2021 | 11:00 AM

Share

ಚಿತ್ರದುರ್ಗ: ತಡರಾತ್ರಿ ವೇಳೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ದಂಪತಿ ಸಾವಿಗೀಡಾದ ದಾರುಣ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಹೊಳಲ್ಕೆರೆ ಸಮೀಪದ ಕೊಳಾಳ್ ತೇಕಲವಟ್ಟಿ ಎಂಬ ಗ್ರಾಮದ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಪ್ರಕಾಶ್ (54 ವರ್ಷ) ಹಾಗೂ ಸರೋಜಮ್ಮ (45 ವರ್ಷ) ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ತಡರಾತ್ರಿ ವೇಳೆ ಏಕಾಏಕಿ ಸ್ಫೋಟಿಸಿದ ಕಾರಣ ಪ್ರಕಾಶ್ ಹಾಗೂ ಸರೋಜಮ್ಮ ಇಬ್ಬರೂ ಮೃತಪಟ್ಟಿದ್ದಾರೆ (Death). ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಿಸಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

CYLINDER EXPLOSION

ಸಿಲಿಂಡರ್​ ಸ್ಪೋಟದಿಂದ ಮನೆಯ ಹೊರಭಾಗಕ್ಕೂ ಹಾನಿ

ಸಿಲಿಂಡರ್​ ಸ್ಫೋಟದಿಂದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಮನೆಯೊಂದು ಕುಸಿದು ಬಿದ್ದು, ನಾಲ್ವರು ಸಾವಿಗೀಡಾದ ದುರಂತ ಘಟನೆ ನಡೆದಿತ್ತು. ಮುನ್ನಿ ದೇವಿ (45), ನರೇಶ್​ (22), ಓಂ ಪ್ರಕಾಶ್ (20) ಮತ್ತು ಸುಮನ್​ (18) ಎಂಬ ನಾಲ್ವರು ಮೃತಪಟ್ಟಿದ್ದರು. ಇವರಲ್ಲಿ ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದರು ಎಂದು ಪೊಲೀಸರು ಹೇಳಿದ್ದರು.

ಗ್ಯಾಸ್​ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರ ಬೆಂಗಳೂರು: ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರಗೊಂಡ ದುರ್ಘಟನೆಯೊಂದು ಬೆಂಗಳೂರಿನ ರಿಚ್​ಮಂಡ್​ ಸರ್ಕಲ್ ಬಳಿ ಇತ್ತೀಚೆಗಷ್ಟೇ ನಡೆದಿತ್ತು.. ಲ್ಯಾಂಗ್​ಫೋರ್ಡ್​ ಹೌಸ್​ ಅಪಾರ್ಟ್​ಮೆಂಟ್​ನಲ್ಲಿ ಹುಟ್ಟುಹಬ್ಬ ಆಚರಣೆಗೆ ಬಲೂನ್ ಪೂರೈಕೆಗೆ ಬಂದಿದ್ದ ಯುವಕ ದುರ್ಘಟನೆಯಲ್ಲಿ ಮೃತಪಟ್ಟಿದ್ದ. ಅಪಾರ್ಟ್​ಮೆಂಟ್ ಹೊರಗೆ ಬಲೂನ್​ಗೆ ಗ್ಯಾಸ್​ ಫಿಲ್ಲಿಂಗ್ ಮಾಡುತ್ತಿದ್ದಾಗ ಏಕಾಏಕಿ ಗ್ಯಾಸ್​ ಸ್ಫೋಟಗೊಂಡು ಅನಾಹುತ ಸಂಭವಿಸಿತ್ತು. ಮೃತಪಟ್ಟ ಯುವಕ ತಮಿಳುನಾಡು ಮೂಲದವನು ಎಂಬ ಮಾಹಿತಿ ದೊರೆತಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಎಂದು ಮಾಹಿತಿ ಲಭ್ಯವಾಗಿತ್ತು.

ಬಲೂನ್ ಗ್ಯಾಸ್ ಸಹಿತ ಬೈಕ್​ನಲ್ಲಿ ತನ್ನ ಜತೆಗಾರನೊಂದಿಗೆ ವ್ಯಕ್ತಿ ಬಂದಿದ್ದ . ಅಪಾರ್ಟ್‌ಮೆಂಟ್ ಆವರಣದಲ್ಲೇ ಬೈಕ್ ನಿಲ್ಲಿಸಿಕೊಂಡು ಗ್ಯಾಸ್ ಫಿಲ್ಲಿಂಗ್ ನಡೆಸುತ್ತಿದ್ದ. ಜತೆಗಿದ್ದ ವ್ಯಕ್ತಿ ನೀರು ತರಲೆಂದು ಅಪಾರ್ಟ್‌ಮೆಂಟ್ ಒಳಗೆ ಹೋಗಿದ್ದ. ಈ ವೇಳೆ ಒಬ್ಬನೇ ಬಲೂನ್ ಫಿಲ್ ಮಾಡುವ ವೇಳೆ ದುರ್ಘಟನೆ ನಡೆದಿದೆ. ಮನೆಯ ಹೊರಗಡೆ ಬಲೂನ್ ಗ್ಯಾಸ್ ಸಿಡಿದು ಯುವಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: LPG cylinder accident insurance: ಅಡುಗೆ ಅನಿಲ ಸಿಲಿಂಡರ್ ಅಪಘಾತಕ್ಕೆ ಡೀಲರ್ ಮೂಲಕವೇ ಸಿಗುತ್ತೆ ಇನ್ಷೂರೆನ್ಸ್ 

LPG Cylinder: ಸ್ಮಾರ್ಟ್​ ಆಗಲಿದೆ ಎಲ್​ಪಿಜಿ ಸಿಲಿಂಡರ್; ನಿಮಗೆ ಗೊತ್ತಿರಬೇಕಾದ ಸಂಗತಿಗಳಿವು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್