AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಸ್ತ್ರೀಯರ ವ್ಯಾಮೋಹವಿದ್ದ ಪತಿರಾಯ, ಅದನ್ನ ಪ್ರಶ್ನಿಸುತ್ತಿದ್ದ ತನ್ನ ಪತ್ನಿಯನ್ನು ಗೋಡೆಗೆ ಹೊಡೆದು ಸಾಯಿಸಿದ!

extra marital affair: ಚಿತ್ರದುರ್ಗದಲ್ಲಿ ಫೋಟೋಗ್ರಾಫರ್ ಆಗಿದ್ದ ಯರಿಸ್ವಾಮಿ ಪರಸ್ತ್ರೀ ವ್ಯಾಮೋಹಕ್ಕೆ ಬಿದ್ದು ಪತ್ನಿಯ ಮೇಲೆ ಘೋರ ಕೃತ್ಯವೆಸಗಿದ್ದಾನೆ. ಪತಿಯೇ ದೇವರೆಂದು ನಂಬಿಕೊಂಡಿದ್ದ ಅಮಾಯಕಳ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಪರಸ್ತ್ರೀಯರ ವ್ಯಾಮೋಹವಿದ್ದ ಪತಿರಾಯ, ಅದನ್ನ ಪ್ರಶ್ನಿಸುತ್ತಿದ್ದ ತನ್ನ ಪತ್ನಿಯನ್ನು ಗೋಡೆಗೆ ಹೊಡೆದು ಸಾಯಿಸಿದ!
ಪತ್ನಿಯನ್ನು ಗೋಡೆಗೆ ಹೊಡೆದು ಸಾಯಿಸಿದ!
TV9 Web
| Edited By: ಸಾಧು ಶ್ರೀನಾಥ್​|

Updated on: Apr 11, 2023 | 2:38 PM

Share

ಆ ಜೋಡಿಗೆ ಆರು ವರ್ಷದ ಹಿಂದಷ್ಟೇ ಮದುವೆ ಆಗಿತ್ತು. ಮುದ್ದಾದ ಇಬ್ಬರು ಗಂಡು ಮಕ್ಕಳು ಸುಂದರ ಸಂಸಾರಕ್ಕೆ ಸಾಕ್ಷಿಯಾಗಿದ್ದರು. ಆದ್ರೆ, ಪತಿಗೆ (husband) ಮಾತ್ರ ಪರಸ್ತ್ರೀಯರ ವ್ಯಾಮೋಹವಿತ್ತು (extra marital affair). ಪ್ರಶ್ನಿಸಿದ ಪತ್ನಿಯನ್ನೇ (wife) ಪತಿರಾಯ ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಕೋಟೆನಾಡಿನಲ್ಲಿ ನಡೆದಿದೆ. ಮೃತಳ ಸಂಬಂಧಿಕರು ಇದರಿಂದ ಕಂಗಾಲಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ನಗರದ (chitradurga) ಗೋಪಾಲಪುರ ರಸ್ತೆಯ ಬಡಾವಣೆಯಲ್ಲಿ. ಈ ಕುರಿತು ಒಂದು ವರದಿ.

ಹೌದು, ಸುಮಾರು ಆರು ವರ್ಷದ ಹಿಂದೆ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮದ ಯರಿಸ್ವಾಮಿ, ಚಿತ್ರದುರ್ಗ ತಾಲೂಕಿನ ಕೋಡಯ್ಯನಹಟ್ಟಿಯ ರೋಜಾ ಜತೆ ಮದುವೆ ಆಗಿತ್ತು. ಪೋಷಕರ ಆಶಯದಂತೆ ಪದವಿ ಓದಿದ್ದ ರೋಜಾ, ಫೋಟೋಗ್ರಾಫರ್ ಯರಿಸ್ವಾಮಿ ಜತೆ ಮದುವೆ ಆಗಿದ್ದಳು. ಚಿನ್ನಾಭರಣ, ವರದಕ್ಷಿಣೆ ನೀಡಿ ಪೋಷಕರು ಮದುವೆ ಮಾಡಿದ್ದರು. ಬಳಿಕ ಚಿತ್ರದುರ್ಗ ನಗರದ ಗೋಪಾಲಪುರ ರಸ್ತೆಯ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು.

ಸುಂದರ ಸಂಸಾರಕ್ಕೆ ಇಬ್ಬರು ಗಂಡು ಮಕ್ಕಳು ಜತೆಯಾಗಿದ್ದರು. ಆದ್ರೆ, ವರ್ಷಗಳು ಸವೆದಂತೆ ಸ್ತ್ರೀಲೋಲನಾಗಿದ್ದ ಯರಿಸ್ವಾಮಿಯ ಮುಖವಾಡ ಬಯಲಾಗಿತ್ತು. ಪರಸ್ತ್ರೀಯರ ಸಂಘ ಮಾಡಿದ್ದ ಯರಿಸ್ವಾಮಿ ಪತ್ನಿ ಮೇಲೆ ದೌರ್ಜನ್ಯ ನಡೆಸುತ್ತಿದ್ದನು. ಅನೇಕ ಸಲ ಸಂಬಂಧಿಕರು ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಆದ್ರೆ, ನಿನ್ನೆ ರಾತ್ರಿ ವೇಳೆ ಅನಾಚಾರವನ್ನು ಪ್ರಶ್ನಿಸಿದ ಪತ್ನಿಯ ಮೇಲೆಯೇ ರಾಕ್ಷಸ ಕೃತ್ಯವೆಸಗಿದ ಯರಿಸ್ವಾಮಿ ಮನಸೋ ಇಚ್ಛೆ ಹೊಡೆದು ಗೋಡೆಗೆ ತಳ್ಳಿದ್ದಾನೆ. ಬಳಿಕ, ತಲೆಯಲ್ಲಿ ರಕ್ತಸ್ರಾವ ಆಗುವುದು ಕಂಡು ಆಟೋದಲ್ಲಿ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಆದ್ರೆ, ವೈದ್ಯರು ರೋಜಾ ಉಸಿರು ಚೆಲ್ಲಿದ್ದಾಳೆಂದು ಹೇಳುತ್ತಿದ್ದಂತೆ ಎಸ್ಕೇಪ್ ಆಗಿದ್ದಾನೆ.

ಇನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯರಿಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸ್ರು ಬಲೆ ಬೀಸಿದ್ದಾರೆ. ಮೃತಳ ಕುಟುಂಬಸ್ಥರು ಹಾಗೂ ಗೆಳತಿಯರು ಪತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ಯುವತಿಯರ ಜತೆಗೆ ಯರಿಸ್ವಾಮಿ ಸಂಬಂಧ ಇರಿಸಿಕೊಂಡಿದ್ದು ಅವರು ಸಹ ರೋಜಾ ಜತೆ ಗಲಾಟೆ ನಡೆಸಿದ್ದಾರೆ. ನನ್ನ ಗಂಡ ಎಂದು ರೋಜಾ ಜತೆಗೆ ಗಲಾಟೆ ನಡೆಸಿದ ಘಟನೆಗಳೂ ನಡೆದಿವೆ.

Also Read:

ಹೆಂಡತಿ ಮಕ್ಕಳ ಬಿಟ್ಟು ನೇಣಿಗೆ ಶರಣಾದ, ವಿವಾಹಿತ ಪ್ರಿಯತಮೆಗಾಗಿ ಹುಚ್ಚನಂತಾದವ ಎದೆ ಮೇಲೆ ಆಕೆಯ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ!

ಆದ್ರೂ, ಪತಿಯನ್ನು ಬಿಟ್ಟು ತವರು ಸೇರಬಾರದೆಂಬ ಏಕೈಕ ಕಾರಣಕ್ಕೆ ಎಲ್ಲಾ ಹಿಂಸೆ ಸಹಿಸಿಕೊಂಡಿದ್ದಳು. ಈ ಹಿಂದೆಯೂ ಅನೇಕ ಸಲ ಇದೇ ರೀತಿ ರೋಜಾಳ ಮೇಲೆ ದೌರ್ಜನ್ಯ ನಡೆಸಿದ್ದನು. ಕೊನೆಗೂ ಪತ್ನಿಯನ್ನು ಹೊಡೆದು ಸಾಯಿಸಿದ್ದಾನೆ. ಆರೋಪಿಗೆ ತಕ್ಕ ಕಠಿಣ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಜನರ ಕೈಗೆ ನೀಡಬೇಕೆಂದು ಕಿಡಿ ಕಾರಿದ್ದಾರೆ.

ಒಟ್ಟಾರೆ ಚಿತ್ರದುರ್ಗದಲ್ಲಿ ಫೋಟೋಗ್ರಾಫರ್ ಆಗಿದ್ದ ಯರಿಸ್ವಾಮಿ ಪರಸ್ತ್ರೀ ವ್ಯಾಮೋಹಕ್ಕೆ ಬಿದ್ದು ಪತ್ನಿಯ ಮೇಲೆ ಘೋರ ಕೃತ್ಯವೆಸಗಿದ್ದಾನೆ. ಪತಿಯೇ ದೇವರೆಂದು ನಂಬಿಕೊಂಡಿದ್ದ ಅಮಾಯಕಳ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ. ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸ್ರು ಆರೋಪಿಯ ಪತ್ತೆ ಹಚ್ಚಿ ತಕ್ಕ ಶಿಕ್ಷೆ ವಿಧಿಸಬೇಕಿದೆ.

ವರದಿ: ಬಸವರಾಜ ಮುದನೂರ್, ಟಿವಿ 9, ಚಿತ್ರದುರ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ