AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ

ಮುರುಘಾಶ್ರೀ, ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ಸಭೆ ನಡೆಸಿ ತಮ್ಮ ಆಪ್ತರೆದುರು ಪ್ರಕರಣದ ಬಗ್ಗೆ ಮುರುಘಾಶ್ರೀಗಳು ಮಾತನಾಡಿದ್ದಾರೆ.

ಫೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
TV9 Web
| Updated By: ಆಯೇಷಾ ಬಾನು|

Updated on:Aug 27, 2022 | 5:40 PM

Share

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮತ್ತೊಂದೆಡೆ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಕೇಸ್ ದಾಖಲಾಗಿದೆ. ಇದರ ನಡುವೆ ಮುರುಘಾ ಶ್ರೀಗಳ ಮೇಲೆ ಆರೋಪ ಕೇಳಿ ಬಂದಿದ್ದೇ ತಡ, ಚಿತ್ರದುರ್ಗದ ಮುರುಘಾ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಲಹಾ ಸಮಿತಿ ಸಭೆಯಲ್ಲಿ ಭಕ್ತರು, ವಕೀಲರು, ವಿವಿಧ ಸಮಾಜಗಳ ಮುಖಂಡರು ಸೇರಿ ಹಲವರು ಭಾಗಿಯಾಗಿದ್ರು. ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಮುಖಂಡರು, ನೇರವಾಗಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದಾರೆ. ಆದ್ರೆ ಮುರುಘಾಶ್ರೀ, ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ಸಭೆ ನಡೆಸಿ ತಮ್ಮ ಆಪ್ತರೆದುರು ಪ್ರಕರಣದ ಬಗ್ಗೆ ಮುರುಘಾಶ್ರೀಗಳು ಮಾತನಾಡಿದ್ದಾರೆ. ತಪ್ಪು ಒಪ್ಪಿಕೊಂಡು ಬಂದರೆ ಕ್ಷಮಿಸಿ ಸಂಧಾನ ಮಾಡೋಣ. ಕಾನೂನು ಸಮರಕ್ಕೆ ಸೈ ಅಂದ್ರೆ ಕಾನೂನು ಮೂಲಕವೇ ಹೋರಾಟ ಮಾಡೋಣಾ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.

ಕೆಲ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ಮುರುಘಾಮಠದ ಮುರುಘಾಶ್ರೀ ಮಾತುಕತೆ ನಡೆಸಿದ್ದಾರೆ. ಬಂಧನದ ಭೀತಿ ನಡುವೆ ಎದೆಗುಂದದೆ ಮಾತುಕತೆ ನಡೆಸಿದ್ದಾರೆ. ಇನ್ನು ಆರೋಪ ಕೇಳಿ ಬಂದ ಬಳಿಕ ಬೆಳಗ್ಗೆಯಿಂದ ವಿವಿಧ ಮುಖಂಡರು, ಮಠಾಧೀಶರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ಆದ್ರೆ ಇದೀಗ ಮುರುಘಾ ಶರಣರು ತಮ್ಮ ವೈಯಕ್ತಿಕ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.

ಯಾರೂ ಸಹ ಮಕ್ಕಳನ್ನು ಇಂತಹ ದೃಷ್ಟಿಯಿಂದ ನೋಡಲ್ಲ

ಇನ್ನು ಮುರುಘಾಶ್ರೀಗಳ ವಿರುದ್ಧ ಗಂಭೀರ ಆರೋಪಕ್ಕೆ ಸಂಬಂಧಿಸಿ ಶ್ರೀಗಳ ಭೇಟಿ ಬಳಿಕ ಶಾಸಕ ಎಂ.ಚಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುಮಾರು ವರ್ಷಗಳಿಂದ ಶ್ರೀಗಳನ್ನು ನೋಡುತ್ತಿದ್ದೇನೆ. ಮುರುಘಾಶ್ರೀಗಳು ಆ ರೀತಿಯ ಕೃತ್ಯ ಎಸಗುವವರಲ್ಲ. ಶ್ರೀಗಳ ವಿರುದ್ಧ ದುರುದ್ದೇಶದಿಂದ ಕೇಸ್ ದಾಖಲಿಸಿರಬಹುದು. ಮಠದ ಶಾಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲೂ ವಿದ್ಯಾರ್ಥಿಗಳು ಇದ್ದಾರೆ. ಯಾರೂ ಸಹ ಮಕ್ಕಳನ್ನು ಇಂತಹ ದೃಷ್ಟಿಯಿಂದ ನೋಡಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:40 pm, Sat, 27 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?