AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್​ನೋಟ್ ಬರೆದಿಟ್ಟು ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ; ಬ್ಯಾಂಕ್ ವಿರುದ್ಧ ಗಂಭೀರ ಆರೋಪ

ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತ ಖಾಸಗಿ ಬ್ಯಾಂಕ್​ ಉದ್ಯೋಗಿ ಎಂ.ಸಂತೋಷ್​ ಖಾಸಗಿ ಲಾಡ್ಜ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಅವರಿಗೆ ಕೆಲ ದಿನಗಳ ಹಿಂದೆ ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿತ್ತು.

ಡೆತ್​ನೋಟ್ ಬರೆದಿಟ್ಟು ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ; ಬ್ಯಾಂಕ್ ವಿರುದ್ಧ ಗಂಭೀರ ಆರೋಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 06, 2024 | 7:42 PM

Share

ಚಿತ್ರದುರ್ಗ, ಆಗಸ್ಟ್.06: ಡೆತ್​ನೋಟ್ (Death Note) ಬರೆದಿಟ್ಟು ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಖಾಸಗಿ ಲಾಡ್ಜ್​​ನಲ್ಲಿ ನಡೆದಿದೆ. ಖಾಸಗಿ ಬ್ಯಾಂಕ್​ ಉದ್ಯೋಗಿ ಎಂ.ಸಂತೋಷ್​(40) ಖಾಸಗಿ ಲಾಡ್ಜ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಆಗಿದ್ದ ಸಂತೋಷ್ ಅವರಿಗೆ ಕೆಲ ದಿನಗಳ ಹಿಂದೆ ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅನಾರೋಗ್ಯ ಕಾರಣ ಸಂತೋಷ್​ ಅವರು ಕರ್ನಾಟಕದಲ್ಲೇ ಇರಲು ಬಯಸಿದ್ದರು. ಹೀಗಾಗಿ ಬ್ಯಾಂಕ್ ಮುಖ್ಯಸ್ಥರು 2 ದಿನಕ್ಕಾಗಿ ಹೊಸದುರ್ಗದಲ್ಲಿರಲು ಕಳಿಸಿದ್ದರು. ಸಂತೋಷ್ ಅವರು ಹೊಸದುರ್ಗದ ಬ್ಯಾಂಕ್ ಕಟ್ಟಡದ ಮೇಲ್ಭಾಗದಲ್ಲಿನ ಲಾಡ್ಜ್​ನಲ್ಲೇ ಪ್ರಾಣಬಿಟ್ಟಿದ್ದಾರೆ.

ಬ್ಯಾಂಕ್ ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಎಂದು ಸಂತೋಷ್ ಅವರು ತಮ್ಮ ಡೆತ್ ನೋಟ್​ನಲ್ಲಿ ಬರೆದಿದ್ದಾರೆ.  ಬ್ಯಾಂಕ್ ನನ್ನ ಸಾವಿಗೆ ಪರಿಹಾರ ನೀಡಬೇಕೆಂದು ಬರೆದಿದ್ದಾರೆ. ಅಲ್ಲದೆ ಲಂಚ ನೀಡಿದರೆ ಮಾತ್ರ ಬ್ಯಾಂಕ್​​ನಲ್ಲಿ ಕೆಲಸ ಆಗುತ್ತದೆಂದು ಆರೋಪಿಸಿದ್ದಾರೆ. ಸದ್ಯ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮಳೆ ಮಧ್ಯೆಯೂ ಹೊತ್ತಿ ಉರಿದ ಬಿಎಂಟಿಸಿ ಬಸ್​

ದೇಗುಲ ಸ್ವಚ್ಛಗೊಳಿಸುವಾಗ ಕರೆಂಟ್ ಶಾಕ್​​, ಇಬ್ಬರು ಬಲಿ

ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಕಲಾವತಿ ಬೀದರವಾಡಿ ಮತ್ತು ಸವಿತಾ ಒಂಟಿ ಮೃತಪಟ್ಟ ದುರ್ದೈವಿಗಳು. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಎಳೆಯುವಾಗ ದುರಂತ ಸಂಭವಿಸಿದೆ. ಮೃತ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆ

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆ ಬಳಿ ಮೃತದೇಹ ಸಿಕ್ಕಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಶಂಕ ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:07 am, Tue, 6 August 24

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ