AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದರೆ ಬಿಜೆಪಿ ಮತ್ತೆ ನೆಲಕಚ್ಚುವುದು ಖಚಿತ: ಎಸ್ ಲಿಂಗಮೂರ್ತಿ

ಕರ್ನಾಟಕ ರಾಜ್ಯದಲ್ಲಿ ವಿಪಕ್ಷ ಸ್ಥಾನದ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸುತ್ತಿದೆ. ಹಲವರ ಹೆಸರು ಮುನ್ನಲೆಯಲ್ಲಿ ಇದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜವಾಬ್ದಾರಿ ನೀಡದಂತೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್​.ಲಿಂಗಮೂರ್ತಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಗೆ ಜವಾಬ್ದಾರಿ ನೀಡಿದರೆ ಬಿಜೆಪಿ ಮತ್ತೆ ನೆಲಕಚ್ಚುವುದು ಖಚಿತ: ಎಸ್ ಲಿಂಗಮೂರ್ತಿ
ಎಸ್.ಲಿಂಗಮೂರ್ತಿ ಮತ್ತು ಬಸವರಾಜ ಬೊಮ್ಮಾಯಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: Rakesh Nayak Manchi|

Updated on: Jul 30, 2023 | 8:12 PM

Share

ಚಿತ್ರದುರ್ಗ, ಜುಲೈ 30: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಂತಹವರಿಗೆ ಜವಾಬ್ದಾರಿ ನೀಡಿದರೆ ಬಿಜೆಪಿ ಮತ್ತೆ ನೆಲಕಚ್ಚುವುದು ಖಚಿತ ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್​.ಲಿಂಗಮೂರ್ತಿ (S. Lingamurthy) ಹೇಳಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಪಕ್ಷ ಸ್ಥಾನದ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸುತ್ತಿದೆ. ಹಲವರ ಹೆಸರು ಮುನ್ನಲೆಯಲ್ಲಿ ಇದೆ. ಈ ಪೈಕಿ ಬೊಮ್ಮಾಯಿ ಹೆಸರು ಕೂಡ ಒಂದು.

ವಿಪಕ್ಷ ಸ್ಥಾನದ ಪೈಪೋಟಿಯಲ್ಲಿ ಬಸವರಾಜ್ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಮುಂಚೂಣಿಯಲ್ಲಿದೆ. ಪಕ್ಷದ ನಾಯಕರು ಬೊಮ್ಮಾಯಿ ಕಡೆ ಬೆರಳು ತೋರಿಸಿದರೆ, ಕಾರ್ಯಕರ್ತರು ಯತ್ನಾಳ್ ಪರ ಬ್ಯಾಟ್ ಬೀಸುತ್ತಿದ್ದಾರೆ. ಅದೇ ರೀತಿ ರಾಜ್ಯಧ್ಯಕ್ಷ ಸ್ಥಾನಕ್ಕೂ ಸಮರ್ಥ ನಾಯಕನ ಹುಡುಕಾಟದಲ್ಲಿ ಹೈಕಮಾಂಡ್ ನಿರತವಾಗಿದೆ.

ಇದನ್ನೂ ಓದಿ: ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇದ್ದಿದ್ದರಿಂದ ಸಿಪಿಎಲ್​ ಸಭೆ ನಡೆಸಿದರು: ಬೊಮ್ಮಾಯಿ

ಈ ನಡುವೆ ಟ್ವೀಟ್ ಮಾಡಿದ ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಎಸ್. ಲಿಂಗಮೂರ್ತಿ, “ಈಗಾಗಲೆ ಕರ್ನಾಟಕ ರಾಜ್ಯದಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಪಕ್ಷ, ಬಸವರಾಜ ಬೋಮ್ಮಾಯಿ ಅಂತಹ ವ್ಯಕ್ತಿಗಳಿಗೆ ಜವಾಬ್ದಾರಿ ಕೊಟ್ಟರೆ ಮತ್ತೆ ನೆಲ ಕಚ್ಚುವುದು ಕಚಿತ” ಎಂದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ ಅವರಿಗೆ ಹೊಸದುರ್ಗ ಕ್ಷೇತ್ರದ ಟಿಕೆಟ್ ಸಿಕ್ಕಿತ್ತು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದಾರೆ. ತನ್ನ ಸೋಲಿಗೆ ಲಿಂಗಮೂರ್ತಿ ಅವರು ಬೊಮ್ಮಾಯಿ ಕಡೆ ಬೆರಳು ಮಾಡಿದ್ದರು. ಇದೀಗ ಮತ್ತೆ ಟ್ವೀಟ್ ಮೂಲಕ ಬೊಮ್ಮಾಯಿ ಹೆಸರು ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More