AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಕ್ಕೆ ಬರಿದಾಗಿದೆ ಐತಿಹಾಸಿಕ ಕೆರೆ; ಸಂರಕ್ಷಣೆಗೆ ಸ್ಥಳೀಯರ ಆಗ್ರಹ

ಅದು ಇಡೀ ನಗರಕ್ಕೆ ನೀರು ಪೂರೈಸಿದ್ದ ಐತಿಹಾಸಿಕ ಕೆರೆ. ಅರಣ್ಯ ವ್ಯಾಪ್ತಿಯ ಪ್ರಾಣಿ-ಪಕ್ಷಿಗಳಿಗೆ ಜೀವಾಳ ಆಗಿದ್ದ ಅಪರೂಪದ ಕೆರೆ. ಈ ವರ್ಷ ರಣ ಭೀಕರ ಬರಗಾಲದ ಪರಿಣಾಮ ಇತಿಹಾಸ ಪ್ರಸಿದ್ಧ ಕೆರೆಯೂ ಬರಿದಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಭೀಕರ ಬರಕ್ಕೆ ಬರಿದಾಗಿದೆ ಐತಿಹಾಸಿಕ ಕೆರೆ; ಸಂರಕ್ಷಣೆಗೆ ಸ್ಥಳೀಯರ ಆಗ್ರಹ
ಭೀಕರ ಬರಕ್ಕೆ ಬರಿದಾಗಿದೆ ಚಿತ್ರದುರ್ಗದ ಐತಿಹಾಸಿಕ ಕೆರೆ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 17, 2024 | 9:46 PM

Share

ಚಿತ್ರದುರ್ಗ, ಮೇ.17: ಕೋಟೆನಾಡು ಆಳ್ವಿಕೆ ನಡೆಸಿದ ಮೊದಲ ಪಾಳೇಗಾರ(Palegara) ತಿಮ್ಮಣ್ಣ ನಾಯಕರು, ಜೀವಪರ ಕಾಳಜಿ ಉಳ್ಳವರಾಗಿದ್ದರು. ಅನೇಕ ಕೆರೆ-ಕಟ್ಟೆಗಳನ್ನು ಕಟ್ಟಿಸಿ ಜನ-ಜಾನುವಾರು, ಪ್ರಾಣಿ-ಪಕ್ಷಿಗಳಿಗೆ ನೀರು ಒದಗಿಸಿದ್ದರು. ಆಡುಮಲ್ಲೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಒಂದು ಕಡೆ ಕಲ್ಲು ಬಂಡೆಗಳ ಬೆಟ್ಟ, ಮತ್ತೊಂದು ಕಡೆ ಹಸಿರುವನದ ಅದ್ಭುತ ಪರಿಸರದ ಮಧ್ಯೆ ಕೆರೆಯೊಂದರನ್ನು ನಿರ್ಮಾಣ ಮಾಡಿದ್ದರು. ಕೆರೆಗೆ ತಿಮ್ಮಣ್ಣ ನಾಯಕರ ಕೆರೆ ಎಂದೇ ಕರೆಯಲಾಗುತ್ತಿದೆ. ಈ ಹಿಂದೆ ಇಡೀ ನಗರ ಪ್ರದೇಶಕ್ಕೆ ನೀರು ಪೂರೈಸುತ್ತಿದ್ದ ಕೆರೆ, ಕೆಲ ವರ್ಷಗಳಿಂದ ಅರಣ್ಯ ವ್ಯಾಪ್ತಿಯ ಪ್ರಾಣಿ-ಪಕ್ಷಿಗಳು, ಜಾನುವಾರುಗಳಿಗೆ ಜೀವಾಳವಾಗಿ ಉಳಿದಿತ್ತು.

ಇತ್ತೀಚೆಗೆ ಅವನತಿಯ ಅಂಚಿನಲ್ಲಿರುವ ಕೆರೆ ಬಗ್ಗೆ ಟಿವಿ9 ಈ ಹಿಂದೆ ಕೆರೆ ಉಳಿಸಿ ಅಭಿಯಾನದಡಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಟಿವಿ9 ವರದಿಯಿಂದ ಪ್ರೇರಣೆ ಪಡೆದ ಅಂಜಿನಪ್ಪ ಮತ್ತು ಗೆಳೆಯರ ಬಳಗ 2ವರ್ಷದ ಹಿಂದೆ ಕೆರೆ ಹೂಳೆತ್ತುವ ಕೆಲಸ ಮಾಡಿತ್ತು. ಕಳೆದ ವರ್ಷ ಕೆರೆಗೆ ನೀರು ಹರಿದು ಬಂದು ಜೀವಕಳೆ ಪಡೆದಿತ್ತು. ಅರಣ್ಯ ವ್ಯಾಪ್ತಿಯ ಪ್ರಾಣಿ, ಪಕ್ಷಿಗಳಿಗೆ ಹಾಗೂ ಜಾನುವಾರುಗಳಿಗೆ ವರದಾನವಾಗಿತ್ತು. ಆದ್ರೆ, ಈ ವರ್ಷ ಮತ್ತೆ ರಣ ಭೀಕರ ಬರಗಾಲ ಎದುರಾಗಿದ್ದು, ಐತಿಹಾಸಿಕ ಕೆರೆ ಸಂಪುರ್ಣ ಬರಿದಾಗಿದೆ.

ಇದನ್ನೂ ಓದಿ:ಮಲೀನವಾಗ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ; ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು

ಇನ್ನು ಈ ಐತಿಹಾಸಿಕ ತಿಮ್ಮಣ್ಣ ನಾಯಕ ಕೆರೆ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿದೆ. ದೂರದ ಶಾಂತಿ ಸಾಗರ ಮತ್ತು ವಾಣಿ ವಿಲಾಸ ಸಾಗರ ಜಲಾಶಯದಿಂದ ಚಿತ್ರದುರ್ಗಕ್ಕೆ ಕುಡಿಯುವ ನೀರು ತರಲಾಗುತ್ತಿದೆ. ಆದ್ರೆ, ತಿಮ್ಮಣ್ಣ ನಾಯಕ ಕೆರೆ ಸಂರಕ್ಷಣೆ ಮಾಡಿ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದರೆ ಇಡೀ ನಗರಕ್ಕೆ ಅನುಕೂಲ ಆಗಲಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ಒಂದು ಕಾಲದಲ್ಲಿ ಇಡೀ ಕೋಟೆನಾಡಿಗೆ ನೀರು ಪೂರೈಸುತ್ತಿದ್ದ ಐತಿಹಾಸಿಕ ಕೆರೆ ಆಳುವ ವರ್ಗದ ನಿರ್ಲಕ್ಷದಿಂದ ಬರಿದಾಗಿದೆ. ಅರಣ್ಯ ವ್ಯಾಪ್ತಿಯ ಪ್ರಾಣಿ-ಪಕ್ಷಿಗಳ ಸಹ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ಇನ್ನಾದ್ರೂ ಜಿಲ್ಲಾಡಳಿತ,  ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ದುರ್ಗದ ಜನರ ಆಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ