AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸೇಂಗಾ ಬೆಳೆ ಪ್ರಮುಖವಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಸೇಂಗಾ ಕಣಜ ಎಂದೇ ದುರ್ಗ ಖ್ಯಾತಿ ಪಡೆದಿದೆ. ಆದ್ರೆ, ಈ ವರ್ಷ ಮಾತ್ರ ಅತಿಯಾದ ಶೀತದಿಂದ ಸೇಂಗಾ ಬೆಳೆಗೆ ಸುಳಿರೋಗ ಬಾಧಿಸುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
ಚಿತ್ರದುರ್ಗದಲ್ಲಿ ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2024 | 9:24 PM

Share

ಚಿತ್ರದುರ್ಗ, ಸೆ.08: ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಶೇಂಗಾ ಕಣಜ ಎಂಬ ಖ್ಯಾತಿ ಕೋಟೆನಾಡಿಗಿದೆ. ಈ ವರ್ಷ ಸುಮಾರು 1ಲಕ್ಷ 20ಸಾವಿರ ಹೆಕ್ಟೇರ್​ನಲ್ಲಿ ಶೇಂಗಾ ಬಿತ್ತನೆ ಆಗಿದೆ. ಆದ್ರೆ, ಸುಮಾರು ಐನೂರು ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿನ ಶೇಂಗಾಕ್ಕೆ ಸುಳಿರೋಗ ಕಾಡುತ್ತಿದೆ. ಕಳೆದೊಂದು ತಿಂಗಳಿಂದ ನಿರಂತರ ತುಂತುರು ಮಳೆಯಿಂದಾಗಿ ಬೆಳೆ ಹಾನಿಗೊಳಗಾಗುತ್ತಿದೆ. ಸರ್ಕಾರ ಕೂಡಲೇ ವಿಷೇಶ ತಜ್ಞರ ಸಮಿತಿ ರಚಿಸಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಇನ್ನು ಶೇಂಗಾ ಬೆಳೆಗೆ ಹರಡಿದ ಸುಳಿರೋಗ ಬಾಧೆಯಿಂದ ರೈತೆರಿಗೆ ಏನೋ ತೋಚದ ಸ್ಥಿತಿ ನಿರ್ಮಾಣ ಆಗಿದೆ. ಹೊಸದಾಗಿ ಈ ಸುಳಿರೋಗ ಕಾಣಿಸಿಕೊಂಡಿದ್ದು, ಪರಿಹಾರ ತಿಳಿಯದಾಗಿದೆ. ಜೋರಾಗಿ ಮಳೆ ಸುರಿಯಬೇಕು ಅಥವಾ ರಣ ಬಿಸಿಲು ಬಿದ್ದರೆ ಸುಳಿರೋಗ ಮಾಯವಾಗುತ್ತದೆ ಎನ್ನಲಾಗುತ್ತಿದೆ. ಆದ್ರೆ, ವಾತಾವರಣ ಬದಲಾಗುವ ಲಕ್ಷಣಗಳಿಲ್ಲ ಎಂಬುದು ರೈತರನ್ನು ಕಂಗೆಡಿಸಿದೆ.

ಇದನ್ನೂ ಓದಿ:ರೈತನ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ನಲ್ಲಿ ಬೆಳೆದ ಸೇಂಗಾ ಬೆಳೆ ಸುಳಿರೋಗದಿಂದ ಹಾಳಾಗುತ್ತಿದೆ. ಹೀಗಾಗಿ, ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ