AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸೇಂಗಾ ಬೆಳೆ ಪ್ರಮುಖವಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಸೇಂಗಾ ಕಣಜ ಎಂದೇ ದುರ್ಗ ಖ್ಯಾತಿ ಪಡೆದಿದೆ. ಆದ್ರೆ, ಈ ವರ್ಷ ಮಾತ್ರ ಅತಿಯಾದ ಶೀತದಿಂದ ಸೇಂಗಾ ಬೆಳೆಗೆ ಸುಳಿರೋಗ ಬಾಧಿಸುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
ಚಿತ್ರದುರ್ಗದಲ್ಲಿ ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2024 | 9:24 PM

Share

ಚಿತ್ರದುರ್ಗ, ಸೆ.08: ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಶೇಂಗಾ ಕಣಜ ಎಂಬ ಖ್ಯಾತಿ ಕೋಟೆನಾಡಿಗಿದೆ. ಈ ವರ್ಷ ಸುಮಾರು 1ಲಕ್ಷ 20ಸಾವಿರ ಹೆಕ್ಟೇರ್​ನಲ್ಲಿ ಶೇಂಗಾ ಬಿತ್ತನೆ ಆಗಿದೆ. ಆದ್ರೆ, ಸುಮಾರು ಐನೂರು ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿನ ಶೇಂಗಾಕ್ಕೆ ಸುಳಿರೋಗ ಕಾಡುತ್ತಿದೆ. ಕಳೆದೊಂದು ತಿಂಗಳಿಂದ ನಿರಂತರ ತುಂತುರು ಮಳೆಯಿಂದಾಗಿ ಬೆಳೆ ಹಾನಿಗೊಳಗಾಗುತ್ತಿದೆ. ಸರ್ಕಾರ ಕೂಡಲೇ ವಿಷೇಶ ತಜ್ಞರ ಸಮಿತಿ ರಚಿಸಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಇನ್ನು ಶೇಂಗಾ ಬೆಳೆಗೆ ಹರಡಿದ ಸುಳಿರೋಗ ಬಾಧೆಯಿಂದ ರೈತೆರಿಗೆ ಏನೋ ತೋಚದ ಸ್ಥಿತಿ ನಿರ್ಮಾಣ ಆಗಿದೆ. ಹೊಸದಾಗಿ ಈ ಸುಳಿರೋಗ ಕಾಣಿಸಿಕೊಂಡಿದ್ದು, ಪರಿಹಾರ ತಿಳಿಯದಾಗಿದೆ. ಜೋರಾಗಿ ಮಳೆ ಸುರಿಯಬೇಕು ಅಥವಾ ರಣ ಬಿಸಿಲು ಬಿದ್ದರೆ ಸುಳಿರೋಗ ಮಾಯವಾಗುತ್ತದೆ ಎನ್ನಲಾಗುತ್ತಿದೆ. ಆದ್ರೆ, ವಾತಾವರಣ ಬದಲಾಗುವ ಲಕ್ಷಣಗಳಿಲ್ಲ ಎಂಬುದು ರೈತರನ್ನು ಕಂಗೆಡಿಸಿದೆ.

ಇದನ್ನೂ ಓದಿ:ರೈತನ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ನಲ್ಲಿ ಬೆಳೆದ ಸೇಂಗಾ ಬೆಳೆ ಸುಳಿರೋಗದಿಂದ ಹಾಳಾಗುತ್ತಿದೆ. ಹೀಗಾಗಿ, ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ