ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸೇಂಗಾ ಬೆಳೆ ಪ್ರಮುಖವಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಸೇಂಗಾ ಕಣಜ ಎಂದೇ ದುರ್ಗ ಖ್ಯಾತಿ ಪಡೆದಿದೆ. ಆದ್ರೆ, ಈ ವರ್ಷ ಮಾತ್ರ ಅತಿಯಾದ ಶೀತದಿಂದ ಸೇಂಗಾ ಬೆಳೆಗೆ ಸುಳಿರೋಗ ಬಾಧಿಸುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ.

ರೈತರಿಗೆ ತಪ್ಪದ ಗೋಳು; ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
ಚಿತ್ರದುರ್ಗದಲ್ಲಿ ನೂರಾರು ಎಕರೆಯಲ್ಲಿ ಬೆಳೆದ ಶೇಂಗಾ ಬೆಳೆಗೆ ಸುಳಿರೋಗ ಕಾಟ
Edited By:

Updated on: Sep 08, 2024 | 9:24 PM

ಚಿತ್ರದುರ್ಗ, ಸೆ.08: ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ಹೀಗಾಗಿ, ಶೇಂಗಾ ಕಣಜ ಎಂಬ ಖ್ಯಾತಿ ಕೋಟೆನಾಡಿಗಿದೆ. ಈ ವರ್ಷ ಸುಮಾರು 1ಲಕ್ಷ 20ಸಾವಿರ ಹೆಕ್ಟೇರ್​ನಲ್ಲಿ ಶೇಂಗಾ ಬಿತ್ತನೆ ಆಗಿದೆ. ಆದ್ರೆ, ಸುಮಾರು ಐನೂರು ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿನ ಶೇಂಗಾಕ್ಕೆ ಸುಳಿರೋಗ ಕಾಡುತ್ತಿದೆ. ಕಳೆದೊಂದು ತಿಂಗಳಿಂದ ನಿರಂತರ ತುಂತುರು ಮಳೆಯಿಂದಾಗಿ ಬೆಳೆ ಹಾನಿಗೊಳಗಾಗುತ್ತಿದೆ. ಸರ್ಕಾರ ಕೂಡಲೇ ವಿಷೇಶ ತಜ್ಞರ ಸಮಿತಿ ರಚಿಸಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಇನ್ನು ಶೇಂಗಾ ಬೆಳೆಗೆ ಹರಡಿದ ಸುಳಿರೋಗ ಬಾಧೆಯಿಂದ ರೈತೆರಿಗೆ ಏನೋ ತೋಚದ ಸ್ಥಿತಿ ನಿರ್ಮಾಣ ಆಗಿದೆ. ಹೊಸದಾಗಿ ಈ ಸುಳಿರೋಗ ಕಾಣಿಸಿಕೊಂಡಿದ್ದು, ಪರಿಹಾರ ತಿಳಿಯದಾಗಿದೆ. ಜೋರಾಗಿ ಮಳೆ ಸುರಿಯಬೇಕು ಅಥವಾ ರಣ ಬಿಸಿಲು ಬಿದ್ದರೆ ಸುಳಿರೋಗ ಮಾಯವಾಗುತ್ತದೆ ಎನ್ನಲಾಗುತ್ತಿದೆ. ಆದ್ರೆ, ವಾತಾವರಣ ಬದಲಾಗುವ ಲಕ್ಷಣಗಳಿಲ್ಲ ಎಂಬುದು ರೈತರನ್ನು ಕಂಗೆಡಿಸಿದೆ.

ಇದನ್ನೂ ಓದಿ:ರೈತನ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ನಲ್ಲಿ ಬೆಳೆದ ಸೇಂಗಾ ಬೆಳೆ ಸುಳಿರೋಗದಿಂದ ಹಾಳಾಗುತ್ತಿದೆ. ಹೀಗಾಗಿ, ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us