Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹವಾಗಿದ್ದ ದಂಪತಿಗೆ ಗ್ರಾಮದಿಂದ ಬಹಿಷ್ಕಾರ: ಬಾಣಂತಿ ಎನ್ನುವುದನ್ನು ಲೆಕ್ಕಿಸದೇ ಊರಿನಿಂದ ಆಚೆಗೆ

Chitradurga News: ಹುಟ್ಟುತ್ತಲೇ ಶ್ರವಣ ಮತ್ತು ವಾಕ್ ದೋಷ ಜೋಡಿ ಪ್ರೀತಿಸಿ ಮದುವೆಯಾಗಿದೆ. ಆದ್ರೆ, ಇದೀಗ ಈ ಜೋಡಿಗೆ ಗ್ರಾಮದಿಂದಲೇ ಬಹಿಷ್ಕರಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಬಾಣಂತಿ ಎನ್ನುವುದನ್ನು ಲೆಕ್ಕಿಸದೇ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದು, ಇದೀಗ ಈ ಜೋಡಿ 1 ತಿಂಗಳ ಪುಟ್ಟ ಮಗುವಿನೊಂದಿಗೆ ಚಳ್ಳಕೆರೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದೆ.

ಅಂತರ್ಜಾತಿ ವಿವಾಹವಾಗಿದ್ದ ದಂಪತಿಗೆ ಗ್ರಾಮದಿಂದ ಬಹಿಷ್ಕಾರ: ಬಾಣಂತಿ ಎನ್ನುವುದನ್ನು ಲೆಕ್ಕಿಸದೇ ಊರಿನಿಂದ ಆಚೆಗೆ
ಬಹಿಷ್ಕಾರಕ್ಕೊಳಗಾದ ಜೋಡಿ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ರಮೇಶ್ ಬಿ. ಜವಳಗೇರಾ

Updated on:Sep 28, 2023 | 9:10 AM

ಚಿತ್ರದುರ್ಗ, (ಸೆಪ್ಟೆಂಬರ್ 28): ಅಂತರ್ಜಾತಿ ವಿವಾಹವಾಗಿದ್ದಕ್ಕೆ (intercaste marriage) ಗ್ರಾಮಸ್ಥರು ದಂಪತಿಯನ್ನು ಬಹಿಷ್ಕರಿಸಿರುವ ಅಮಾನವೀಯ ಘಟನೆ ಚಿತ್ರದುರ್ಗ(Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ (N Devarahalli) ಬೆಳಕಿಗೆ ಬಂದಿದೆ. ಎನ್.ದೇವರಹಳ್ಳಿಯ ಸಾವಿತ್ರಮ್ಮ, ಆಂಧ್ರ ಮೂಲದ ಮಣಿಕಂಠ ಪ್ರೀತಿಸಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ಜೋಡಿ ಹುಟ್ಟುತ್ತಲೇ ಶ್ರವಣ ಮತ್ತು ವಾಕ್ ದೋಷ ಹೊಂದಿದ್ದಾರೆ. ಆದ್ರೆ, ಇದೀಗ ತವರು ಮನೆಗೆ ಬಂದಿರುವ ಸಾವಿತ್ರಮ್ಮಳನ್ನು ಬಾಣತಿ ಎನ್ನುವುದನ್ನೂ ಲೆಕ್ಕಿಸದೇ ಮುಖಂಡರು ಊರಿನಿಂದ ಬಹಿಷ್ಕರಿಸಿದ್ದಾರೆ.

ಸಾವಿತ್ರಮ್ಮ ದೇವರಹಳ್ಳಿ ಗ್ರಾಂದ ಜೋಗಿ ಸಮುದಾಯಕ್ಕೆ ಸೇರಿದ್ದರೆ, ಮಣಿಕಂಠ ರೆಡ್ಡಿ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಗಳಾಗಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, 2021 ಏಪ್ರಿಲ್ 7ರಂದು ವಾಕ್-ಶ್ರವಣ ದೋಷದ ಜೋಡಿ ಮದುವೆಯಾಗಿತ್ತು. ಬಳಿಕ ಸಾವಿತ್ರಮ್ಮ. ಗಂಡನನ್ನು ತನ್ನ ತವರಿಗೆ ಕರೆತಂದಿದ್ದರು. ಆಗಲೂ ಗ್ರಾಮದ ಜೋಗಿ ಸಮುದಾಯದ ಮುಖಂಡರು, ಅನ್ಯಜಾತಿ ಯುವಕನನ್ನು ಮದುವೆಯಾಗಿರುವುದು ಸಂಪ್ರದಾಯಕ್ಕೆ ವಿರುದ್ಧದ ನಡೆ ಎಂದಿದ್ದರು. ಅಲ್ಲದೇ ಯುವತಿಯ ಪಾಲಕರಿಗೆ 30,000 ರೂ. ದಂಡ ಕಟ್ಟಿಸಿಕೊಂಡು ದಂಪತಿಯನ್ನು ಗ್ರಾಮದಿಂದ ಆಚೆ ಹೋಗುವಂತೆ ಬಹಿಷ್ಕರಿಸಿದ್ದರು. ಬಳಿಕ ದಂಪತಿ ವಿಧಿ ಇಲ್ಲದೇ ಬೆಂಗಳೂರಿಗೆ ವಾಪಸ್ ಆಗಿತ್ತು.

ಇದನ್ನೂ ಓದಿ: ಗುಬ್ಬಿ ತಾಲೂಕಿನಲ್ಲಿ ಋತುಚಕ್ರವಾದ ಮಹಿಳೆಯರನ್ನು ಊರಿಂದ ಹೊರಗಿಡುವ ಸಂಪ್ರದಾಯ, ಗ್ರಾಮಸ್ಥರಿಗೆ ಚಳಿ ಬಿಡಿಸಿದ ತಹಶೀಲ್ದಾರ್ ಆರತಿ

ನಂತರ ಸಾವಿತ್ರಮ್ಮ ಇತ್ತೀಚೆಗೆ ಹೆರಿಗೆಂದು ತವರಿಗೆ ಬಂದ ವಿಷಯ ತಿಳಿದ ಜೋಗಿ ಜನಾಂಗದ ಮುಖಂಡರು ಮತ್ತೆ ಆಕೆಯ ಪಾಲಕರನ್ನು ಕರೆಸಿ ಗಲಾಟೆ ಮಾಡಿದ್ದಾರೆ. ಮಗಳು ಹಾಗೂ ಅಳಿಯನನ್ನು ಗ್ರಾಮದಿಂದ ಹೊರ ಕಳುಹಿಸುವಂತೆ ಸೂಚಿಸಿದ್ದಾರೆ. ಇಲ್ಲದಿದ್ದರೆ ನಿಮ್ಮನ್ನೂ ಸಹ ಗ್ರಾಮದಿಂದ ಶಾಶ್ವತವಾಗಿ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬೇಸತ್ತ ಸಾವಿತ್ರಮ್ಮ ಮತ್ತು ಆಕೆ ಪತಿ ಒಂದು ತಿಂಗಳ ಮಗುವಿನೊಂದಿಗೆ ಚಳ್ಳಕೆರೆಯ ಮೂಗ ಮತ್ತು ಕಿವುಡರ ಶಾಲೆ ತೆರಳಿ ಅಲ್ಲಿನ ಸಿಬ್ಬಂದಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಬಳಿಕ ಅಲ್ಲಿನ ಶಿಕ್ಷಕರು ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆತಂದು ತಹಶೀಲ್ದಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚೆಳ್ಳಿಕೆರೆ ತಹಶೀಲ್ದಾರ್ ರಹಾನ್ ಪಾಷ ಸಾವಿತ್ರಮ್ಮ ಇರುವ ಸಾಂತ್ವನ ಕೇಂದ್ರ ಭೇಟಿ ನೀಡಿ ಸಾವಿತ್ರಮ್ಮ ಮತ್ತು ಆಕೆಯ ಗಂಡನಿಂದ ಮಾಹಿತಿ ಪಡೆದುಕೊಂಡು ಧೈರ್ಯ ಹೇಳಿದ್ದಾರೆ. ಇದೀಗ ಸಂತ್ರಸ್ತ ಜೋಡಿಯ ಪರ ನಿಂತ ಸಾಮಾಜಿಕ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದು, ಬಹಿಷ್ಕಾರ ಹಾಕಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Thu, 28 September 23

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ