AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳಿಂದ ಯಶಸ್ವಿ ಪ್ರಯೋಗ; ಚಿತ್ರದುರ್ಗದಲ್ಲಿ RLV-LEX​​ ಯಶಸ್ವಿ ಹಾರಾಟ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ.

TV9 Web
| Edited By: ಆಯೇಷಾ ಬಾನು|

Updated on:Apr 02, 2023 | 12:27 PM

Share

ಚಿತ್ರದುರ್ಗ: ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳು ಮತ್ತೊಂದು ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ. ಮರುಬಳಕೆ ಮಾಡಬಹುದಾದ ವಾಹನ(RLV)ದ ಆಟಾನಮಸ್‍ ಲ್ಯಾಂಡಿಂಗ್ ಮಿಷನ್ ಯಶಸ್ವಿಯಾಗಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಭಾರತವು ಪ್ರಮುಖ ಸಾಧನೆಯನ್ನು ಮಾಡಿದೆ. ಡಿಆರ್‌ಡಿಒ ಜೊತೆಗೂಡಿ ಇಸ್ರೋ ಭಾನುವಾರ ಬೆಳಗ್ಗೆ, ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ರಿಯೂಸ್‌ಬಲ್ ಲಾಂಚ್ ವೆಹಿಕಲ್ ಆಟಾನಮಸ್‍ ಲ್ಯಾಂಡಿಂಗ್ ಮಿಷನ್(RLV LEX) ಯಶಸ್ವಿ ಪರೀಕ್ಷೆ ಮಾಡಲಾಗಿದೆ. ಭಾರತೀಯ ವಾಯು ಪಡೆಯ ಚೆನೋಕ್ ಹೆಲಿಕಾಪ್ಟ್ ಮೂಲಕ ಆರ್‌ಎಲ್‌ವಿ ಬೆಳಗ್ಗೆ 7.10ಕ್ಕೆ ಟೇಕ್ ಆಫ್ ಆಯ್ತು. ಆರ್‌ಎಲ್‌ವಿ ಬಿಡುಗಡೆಯು ಸ್ವಾಯತ್ತವಾಗಿತ್ತು. ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಮತ್ತು ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ಕ್ಕೆ ಆಟಾನಮಸ್‍ ಲ್ಯಾಂಡಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಮೂಲಕ ಬಾಹ್ಯಾಕಾಶ ವಾಹನದ ಆಟಾನಮಸ್‍ ಲ್ಯಾಂಡಿಂಗ್ ಅನ್ನು ಇಸ್ರೋ ಯಶಸ್ವಿಯಾಗಿ ಸಾಧಿಸಿ, ಮತ್ತೊಂದು ಹಂತಕ್ಕೆ ಏರಿದೆ ಎಂದು ಇಸ್ರೋ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಒಂದು ವೇಳೆ, ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರು ಬಳಸಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಅಂದರೆ, ಮಾನವ ರಹಿತ ರಾಕೆಟ್, ಲ್ಯಾಂಡಿಂಗ್ ಹೈ ಸ್ಪೀಡ್ ಮತ್ತು ರಿಟರ್ನಿಂಗ್ ಸೇಮ್ ಪಾಥ್‌ನ ಸ್ಥಿತಿಗಳಲ್ಲಿ ಈ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಗೆ ಸ್ಥಳೀಯ ನ್ಯಾವಿಗೇಷನ್, ಉಪಕರಣಗಳು, ಸಂವೇದಕಗಳು ಸೇರಿದಂತೆ ಇತ್ಯಾದಿ ಸ್ಥಳೀಯ ವ್ಯವಸ್ಥೆಗಳನ್ನು ಬಳಸಿಕೊಂಡು ಮಾಡಿರುವುದು ಇಸ್ರೋದ ಹೆಚ್ಚುಗಾರಿಕೆಯಾಗಿದೆ. ಈ ಎಲ್ಲ ವ್ಯವಸ್ಥೆಗಳನ್ನು ಇಸ್ರೋ ಅಭಿವೃದ್ದಿಪಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:15 pm, Sun, 2 April 23

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!