AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳಿಂದ ಯಶಸ್ವಿ ಪ್ರಯೋಗ; ಚಿತ್ರದುರ್ಗದಲ್ಲಿ RLV-LEX​​ ಯಶಸ್ವಿ ಹಾರಾಟ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ.

TV9 Web
| Edited By: |

Updated on:Apr 02, 2023 | 12:27 PM

Share

ಚಿತ್ರದುರ್ಗ: ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳು ಮತ್ತೊಂದು ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ. ಮರುಬಳಕೆ ಮಾಡಬಹುದಾದ ವಾಹನ(RLV)ದ ಆಟಾನಮಸ್‍ ಲ್ಯಾಂಡಿಂಗ್ ಮಿಷನ್ ಯಶಸ್ವಿಯಾಗಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಭಾರತವು ಪ್ರಮುಖ ಸಾಧನೆಯನ್ನು ಮಾಡಿದೆ. ಡಿಆರ್‌ಡಿಒ ಜೊತೆಗೂಡಿ ಇಸ್ರೋ ಭಾನುವಾರ ಬೆಳಗ್ಗೆ, ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ರಿಯೂಸ್‌ಬಲ್ ಲಾಂಚ್ ವೆಹಿಕಲ್ ಆಟಾನಮಸ್‍ ಲ್ಯಾಂಡಿಂಗ್ ಮಿಷನ್(RLV LEX) ಯಶಸ್ವಿ ಪರೀಕ್ಷೆ ಮಾಡಲಾಗಿದೆ. ಭಾರತೀಯ ವಾಯು ಪಡೆಯ ಚೆನೋಕ್ ಹೆಲಿಕಾಪ್ಟ್ ಮೂಲಕ ಆರ್‌ಎಲ್‌ವಿ ಬೆಳಗ್ಗೆ 7.10ಕ್ಕೆ ಟೇಕ್ ಆಫ್ ಆಯ್ತು. ಆರ್‌ಎಲ್‌ವಿ ಬಿಡುಗಡೆಯು ಸ್ವಾಯತ್ತವಾಗಿತ್ತು. ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಮತ್ತು ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ಕ್ಕೆ ಆಟಾನಮಸ್‍ ಲ್ಯಾಂಡಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಮೂಲಕ ಬಾಹ್ಯಾಕಾಶ ವಾಹನದ ಆಟಾನಮಸ್‍ ಲ್ಯಾಂಡಿಂಗ್ ಅನ್ನು ಇಸ್ರೋ ಯಶಸ್ವಿಯಾಗಿ ಸಾಧಿಸಿ, ಮತ್ತೊಂದು ಹಂತಕ್ಕೆ ಏರಿದೆ ಎಂದು ಇಸ್ರೋ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಒಂದು ವೇಳೆ, ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರು ಬಳಸಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಅಂದರೆ, ಮಾನವ ರಹಿತ ರಾಕೆಟ್, ಲ್ಯಾಂಡಿಂಗ್ ಹೈ ಸ್ಪೀಡ್ ಮತ್ತು ರಿಟರ್ನಿಂಗ್ ಸೇಮ್ ಪಾಥ್‌ನ ಸ್ಥಿತಿಗಳಲ್ಲಿ ಈ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಗೆ ಸ್ಥಳೀಯ ನ್ಯಾವಿಗೇಷನ್, ಉಪಕರಣಗಳು, ಸಂವೇದಕಗಳು ಸೇರಿದಂತೆ ಇತ್ಯಾದಿ ಸ್ಥಳೀಯ ವ್ಯವಸ್ಥೆಗಳನ್ನು ಬಳಸಿಕೊಂಡು ಮಾಡಿರುವುದು ಇಸ್ರೋದ ಹೆಚ್ಚುಗಾರಿಕೆಯಾಗಿದೆ. ಈ ಎಲ್ಲ ವ್ಯವಸ್ಥೆಗಳನ್ನು ಇಸ್ರೋ ಅಭಿವೃದ್ದಿಪಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:15 pm, Sun, 2 April 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ