AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳಿಂದ ಯಶಸ್ವಿ ಪ್ರಯೋಗ; ಚಿತ್ರದುರ್ಗದಲ್ಲಿ RLV-LEX​​ ಯಶಸ್ವಿ ಹಾರಾಟ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ.

TV9 Web
| Updated By: ಆಯೇಷಾ ಬಾನು|

Updated on:Apr 02, 2023 | 12:27 PM

Share

ಚಿತ್ರದುರ್ಗ: ಇಸ್ರೋ, ಐಎಎಫ್, ಡಿಆರ್​ಡಿಒ​​​ ಸಂಸ್ಥೆಗಳು ಮತ್ತೊಂದು ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಏರೋನಾಟಿಕಲ್​ ಟೆಸ್ಟ್ ರೇಂಜ್​​ನಲ್ಲಿ RLV-LEX​​ ಯಶಸ್ವಿ ಹಾರಾಟ ನಡೆಸಿದೆ. ಮರುಬಳಕೆ ಮಾಡಬಹುದಾದ ವಾಹನ(RLV)ದ ಆಟಾನಮಸ್‍ ಲ್ಯಾಂಡಿಂಗ್ ಮಿಷನ್ ಯಶಸ್ವಿಯಾಗಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಭಾರತವು ಪ್ರಮುಖ ಸಾಧನೆಯನ್ನು ಮಾಡಿದೆ. ಡಿಆರ್‌ಡಿಒ ಜೊತೆಗೂಡಿ ಇಸ್ರೋ ಭಾನುವಾರ ಬೆಳಗ್ಗೆ, ಕರ್ನಾಟಕದ ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ರಿಯೂಸ್‌ಬಲ್ ಲಾಂಚ್ ವೆಹಿಕಲ್ ಆಟಾನಮಸ್‍ ಲ್ಯಾಂಡಿಂಗ್ ಮಿಷನ್(RLV LEX) ಯಶಸ್ವಿ ಪರೀಕ್ಷೆ ಮಾಡಲಾಗಿದೆ. ಭಾರತೀಯ ವಾಯು ಪಡೆಯ ಚೆನೋಕ್ ಹೆಲಿಕಾಪ್ಟ್ ಮೂಲಕ ಆರ್‌ಎಲ್‌ವಿ ಬೆಳಗ್ಗೆ 7.10ಕ್ಕೆ ಟೇಕ್ ಆಫ್ ಆಯ್ತು. ಆರ್‌ಎಲ್‌ವಿ ಬಿಡುಗಡೆಯು ಸ್ವಾಯತ್ತವಾಗಿತ್ತು. ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಮತ್ತು ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ಕ್ಕೆ ಆಟಾನಮಸ್‍ ಲ್ಯಾಂಡಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಮೂಲಕ ಬಾಹ್ಯಾಕಾಶ ವಾಹನದ ಆಟಾನಮಸ್‍ ಲ್ಯಾಂಡಿಂಗ್ ಅನ್ನು ಇಸ್ರೋ ಯಶಸ್ವಿಯಾಗಿ ಸಾಧಿಸಿ, ಮತ್ತೊಂದು ಹಂತಕ್ಕೆ ಏರಿದೆ ಎಂದು ಇಸ್ರೋ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಒಂದು ವೇಳೆ, ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರು ಬಳಸಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಅಂದರೆ, ಮಾನವ ರಹಿತ ರಾಕೆಟ್, ಲ್ಯಾಂಡಿಂಗ್ ಹೈ ಸ್ಪೀಡ್ ಮತ್ತು ರಿಟರ್ನಿಂಗ್ ಸೇಮ್ ಪಾಥ್‌ನ ಸ್ಥಿತಿಗಳಲ್ಲಿ ಈ ಪರೀಕ್ಷೆಯನ್ನು ಕೈಗೊಳ್ಳಲಾಯಿತು. ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಗೆ ಸ್ಥಳೀಯ ನ್ಯಾವಿಗೇಷನ್, ಉಪಕರಣಗಳು, ಸಂವೇದಕಗಳು ಸೇರಿದಂತೆ ಇತ್ಯಾದಿ ಸ್ಥಳೀಯ ವ್ಯವಸ್ಥೆಗಳನ್ನು ಬಳಸಿಕೊಂಡು ಮಾಡಿರುವುದು ಇಸ್ರೋದ ಹೆಚ್ಚುಗಾರಿಕೆಯಾಗಿದೆ. ಈ ಎಲ್ಲ ವ್ಯವಸ್ಥೆಗಳನ್ನು ಇಸ್ರೋ ಅಭಿವೃದ್ದಿಪಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:15 pm, Sun, 2 April 23

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ