AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ: ಮೈಸೂರು ಜಿಲ್ಲೆಯ ವಂಚಕ ಅರೆಸ್ಟ್​, ಇಡೀ ಗ್ಯಾಂಗ್​​ಗೆ ಬಲೆ ಬೀಸಿದ ದುರ್ಗದ ಪೊಲೀಸರು

chitradurga police: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುವ ಜಾಲವೊಂದು ಕೆಲ ದಿನಗಳಿಂದ ಕಾರ್ಯಪ್ರವೃತ್ತಿ ಆಗಿದೆ. ಇನ್ನಾದ್ರೂ ಜನ ಇಂಥ ವಂಚಕರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.

ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ: ಮೈಸೂರು ಜಿಲ್ಲೆಯ ವಂಚಕ ಅರೆಸ್ಟ್​, ಇಡೀ ಗ್ಯಾಂಗ್​​ಗೆ ಬಲೆ ಬೀಸಿದ ದುರ್ಗದ ಪೊಲೀಸರು
ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ
ಸಾಧು ಶ್ರೀನಾಥ್​
|

Updated on: May 27, 2023 | 8:30 AM

Share

ನಿರುದ್ಯೋಗ ಎಂಬುದು ಯುವಪಡೆಗೆ ಪೆಡಂಭೂತವಾಗಿ ಕಾಡುತ್ತಿದೆ. ವಂಚಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು ಮೋಸದ ಬಲೆ ಬೀಸುತ್ತಿದ್ದಾರೆ. ಆದ್ರೆ ಸಮಾಧಾನದ ಸಂಗತಿಯೆಂದರೆ ಕೋಟೆನಾಡಿನಲ್ಲಿ ಪೊಲೀಸ್ರು ವಂಚಕನ ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ವರದಿ ಇಲ್ಲಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಬಲೆ ಬೀಸಿದ್ದ ವಂಚಕರು (fake job scam). ಸುಮಾರು 30ಕ್ಕೂ ಹೆಚ್ಚು ಜನರಿಗೆ ವಿವಿಧ ಹುದ್ದೆ ಕೊಡಿಸುತ್ತೇವೆಂದು ಟೋಪಿ. ವಂಚಕರ ಜಾಲ ಬೇಧಿಸಿದ ಕೋಟೆನಾಡಿನ ಪೊಲೀಸರು. ಹೌದು, ಮೈಸೂರು ಜಿಲ್ಲೆ ಹೆಚ್ ಡಿ ಕೋಟೆಯ ಗಿರೀಶ್ ಮತ್ತು ದಿನೇಶ್ ಎಂಬುವರು ಉದ್ಯೋಗಾಕಾಂಕ್ಷಿಗಳಿಗೆ ಬಲೆ ಬೀಸುತ್ತಿದ್ದರು. ಶಿಕ್ಷಕ ಹುದ್ದೆ, ಕಂಪ್ಯೂಟರ್ ಶಿಕ್ಷ ಹುದ್ದೆ ಸೇರಿ ವಿವಿಧ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಣ ಪೀಕುತ್ತಿದ್ದರು. ಚಿತ್ರದುರ್ಗದಲ್ಲಿ 30ಕ್ಕೂ ಹೆಚ್ಚು ಜನರ ಬಳಿ ಒಟ್ಟು 30 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ. ಹೀಗಾಗಿ, ವಂಚಿತರು ಚಿತ್ರದುರ್ಗ ನಗರದ ಕೋಟೆ ಠಾಣೆಗೆ ದೂರು ನೀಡಿದ್ದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಅಂತೆಯೇ ಪೊಲೀಸ್ರು ಮೈಸೂರು ಮೂಲದ ಗಿರೀಶ್ ನನ್ನು ಬಂಧಿಸಿದ್ದಾರೆ. ಆದ್ರೆ, ಮೋಸದ ಜಾಲ ದೊಡ್ಡದಾಗಿದ್ದು ಪೊಲೀಸ್ರು (chitradurga police) ಕೂಲಂಕಷ ತನಿಖೆ ನಡೆಸಬೇಕೆಂಬುದು ಸಂತ್ರಸ್ಥರು ಆಗ್ರಹಿಸಿದ್ದಾರೆ.

ಇನ್ನು ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸ್ರು ಈಗಾಗಲೇ ಮೊದಲ ಆರೋಪಿ ಗಿರೀಶ್ ನನ್ನು ಬಂಧಿಸಿದ್ದಾರೆ. ಇನ್ನುಳಿದಂತೆ ಮೋಸದ ಜಾಲದ ಬಗ್ಗೆ ತನಿಖೆ ಮುಂದುವರೆದಿದೆ. ಆದ್ರೆ, ಜನರು ವಂಚಕರ ಬಣ್ಣದ ಮಾತಿಗೆ ಮರಳಾಗಬಾರದು. ಎಚ್ಚರದಿಂದ ಇರಬೇಕು ಎಂದು ಎಸ್ಪಿ ಕೆ.ಪರಶುರಾಮ್ ಹೇಳಿದ್ದಾರೆ.

ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುವ ಜಾಲವೊಂದು ಕೆಲ ದಿನಗಳಿಂದ ಕಾರ್ಯಪ್ರವೃತ್ತಿ ಆಗಿತ್ತು. ಅಂತೆಯೇ ಅನೇಕರಿಗೆ ನಂಬಿಸಿ ಮಕ್ಮಲ್ ಟೋಪಿಯನ್ನು ಸಹ ಹಾಕಿದೆ. ಹೀಗಾಗಿ, ಇನ್ನಾದ್ರೂ ಜನರು ಇಂಥ ವಂಚಕರಿಂದ ವಂಚನೆಗೊಳಗಾಗುವ ಮುನ್ನ ಎಚ್ಚರಿಕೆ ವಹಿಸಬೇಕಿದೆ.

ವರದಿ: ಬಸವರಾಜ ಮುದನೂರ್, ಟಿವಿ9, ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?