AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ: ಮೈಸೂರು ಜಿಲ್ಲೆಯ ವಂಚಕ ಅರೆಸ್ಟ್​, ಇಡೀ ಗ್ಯಾಂಗ್​​ಗೆ ಬಲೆ ಬೀಸಿದ ದುರ್ಗದ ಪೊಲೀಸರು

chitradurga police: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುವ ಜಾಲವೊಂದು ಕೆಲ ದಿನಗಳಿಂದ ಕಾರ್ಯಪ್ರವೃತ್ತಿ ಆಗಿದೆ. ಇನ್ನಾದ್ರೂ ಜನ ಇಂಥ ವಂಚಕರ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ.

ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ: ಮೈಸೂರು ಜಿಲ್ಲೆಯ ವಂಚಕ ಅರೆಸ್ಟ್​, ಇಡೀ ಗ್ಯಾಂಗ್​​ಗೆ ಬಲೆ ಬೀಸಿದ ದುರ್ಗದ ಪೊಲೀಸರು
ಕೋಟೆನಾಡಿನಲ್ಲಿ ಭಾರೀ ಉದ್ಯೋಗ ಆಮಿಷ
Follow us
ಸಾಧು ಶ್ರೀನಾಥ್​
|

Updated on: May 27, 2023 | 8:30 AM

ನಿರುದ್ಯೋಗ ಎಂಬುದು ಯುವಪಡೆಗೆ ಪೆಡಂಭೂತವಾಗಿ ಕಾಡುತ್ತಿದೆ. ವಂಚಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು ಮೋಸದ ಬಲೆ ಬೀಸುತ್ತಿದ್ದಾರೆ. ಆದ್ರೆ ಸಮಾಧಾನದ ಸಂಗತಿಯೆಂದರೆ ಕೋಟೆನಾಡಿನಲ್ಲಿ ಪೊಲೀಸ್ರು ವಂಚಕನ ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ವರದಿ ಇಲ್ಲಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಬಲೆ ಬೀಸಿದ್ದ ವಂಚಕರು (fake job scam). ಸುಮಾರು 30ಕ್ಕೂ ಹೆಚ್ಚು ಜನರಿಗೆ ವಿವಿಧ ಹುದ್ದೆ ಕೊಡಿಸುತ್ತೇವೆಂದು ಟೋಪಿ. ವಂಚಕರ ಜಾಲ ಬೇಧಿಸಿದ ಕೋಟೆನಾಡಿನ ಪೊಲೀಸರು. ಹೌದು, ಮೈಸೂರು ಜಿಲ್ಲೆ ಹೆಚ್ ಡಿ ಕೋಟೆಯ ಗಿರೀಶ್ ಮತ್ತು ದಿನೇಶ್ ಎಂಬುವರು ಉದ್ಯೋಗಾಕಾಂಕ್ಷಿಗಳಿಗೆ ಬಲೆ ಬೀಸುತ್ತಿದ್ದರು. ಶಿಕ್ಷಕ ಹುದ್ದೆ, ಕಂಪ್ಯೂಟರ್ ಶಿಕ್ಷ ಹುದ್ದೆ ಸೇರಿ ವಿವಿಧ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಣ ಪೀಕುತ್ತಿದ್ದರು. ಚಿತ್ರದುರ್ಗದಲ್ಲಿ 30ಕ್ಕೂ ಹೆಚ್ಚು ಜನರ ಬಳಿ ಒಟ್ಟು 30 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ. ಹೀಗಾಗಿ, ವಂಚಿತರು ಚಿತ್ರದುರ್ಗ ನಗರದ ಕೋಟೆ ಠಾಣೆಗೆ ದೂರು ನೀಡಿದ್ದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಅಂತೆಯೇ ಪೊಲೀಸ್ರು ಮೈಸೂರು ಮೂಲದ ಗಿರೀಶ್ ನನ್ನು ಬಂಧಿಸಿದ್ದಾರೆ. ಆದ್ರೆ, ಮೋಸದ ಜಾಲ ದೊಡ್ಡದಾಗಿದ್ದು ಪೊಲೀಸ್ರು (chitradurga police) ಕೂಲಂಕಷ ತನಿಖೆ ನಡೆಸಬೇಕೆಂಬುದು ಸಂತ್ರಸ್ಥರು ಆಗ್ರಹಿಸಿದ್ದಾರೆ.

ಇನ್ನು ಚಿತ್ರದುರ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸ್ರು ಈಗಾಗಲೇ ಮೊದಲ ಆರೋಪಿ ಗಿರೀಶ್ ನನ್ನು ಬಂಧಿಸಿದ್ದಾರೆ. ಇನ್ನುಳಿದಂತೆ ಮೋಸದ ಜಾಲದ ಬಗ್ಗೆ ತನಿಖೆ ಮುಂದುವರೆದಿದೆ. ಆದ್ರೆ, ಜನರು ವಂಚಕರ ಬಣ್ಣದ ಮಾತಿಗೆ ಮರಳಾಗಬಾರದು. ಎಚ್ಚರದಿಂದ ಇರಬೇಕು ಎಂದು ಎಸ್ಪಿ ಕೆ.ಪರಶುರಾಮ್ ಹೇಳಿದ್ದಾರೆ.

ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುವ ಜಾಲವೊಂದು ಕೆಲ ದಿನಗಳಿಂದ ಕಾರ್ಯಪ್ರವೃತ್ತಿ ಆಗಿತ್ತು. ಅಂತೆಯೇ ಅನೇಕರಿಗೆ ನಂಬಿಸಿ ಮಕ್ಮಲ್ ಟೋಪಿಯನ್ನು ಸಹ ಹಾಕಿದೆ. ಹೀಗಾಗಿ, ಇನ್ನಾದ್ರೂ ಜನರು ಇಂಥ ವಂಚಕರಿಂದ ವಂಚನೆಗೊಳಗಾಗುವ ಮುನ್ನ ಎಚ್ಚರಿಕೆ ವಹಿಸಬೇಕಿದೆ.

ವರದಿ: ಬಸವರಾಜ ಮುದನೂರ್, ಟಿವಿ9, ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ