ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕ

ರಾಜ್ಯ ಸರ್ಕಾರ ಕೊನೆಗೂ ನಿವೃತ್ತ ಐಎಎಸ್​ ಅಧಿಕಾರಿಯನ್ನು ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕ
ಚಿತ್ರದುರ್ಗದ ಮುರುಘಾಮಠ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2022 | 5:36 PM

ಬೆಂಗಳೂರು/ಚಿತ್ರದುರ್ಗ: ಕರ್ನಾಟಕ ಸರ್ಕಾರ ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ(Chitradurga Muruga Mutt) ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ (Retired IAS Officer Vastrad ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಇಂದು(ಡಿಸೆಂಬರ್ 13) ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ ನಾಮ ನಿರ್ದೇಶನ: ಬಿಜೆಪಿ MLC ಕೆ.ಎಸ್.ನವೀನ್ ನೇಮಕ

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಹಿನ್ನೆಲೆ ಶಿವಮೂರ್ತಿ ಮುರುಘಾ ಶರಣರು ಕಳೆದ 3 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರಿಂದ ಹಲವು ದಿನಗಳೀಂದ ಮುರುಘಾಮಠದಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಆಗ್ರಹಗಳು ಬರುತ್ತಿವೆ. ಅಂತಿಮವಾಗಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ.

ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು ಎಂದು ಊ ಹಿಂದೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದರು.

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ

ಮೊನ್ನೆ ಅಷ್ಟೇ ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯಕ್ಕೆ (SJM) ಸರ್ಕಾರದ ಬೋರ್ಡ್ ಆಫ್ ಗವರ್ನರ್ಸ್ ಆಗಿ ಬಿಜೆಪಿ ವಿಧಾನಪರಿಷತ್ ಕೆ.ಎಸ್.ನವೀನ್ ಅವರನ್ನು​ ನಾಮ ನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:59 pm, Tue, 13 December 22