AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

Karnataka Rain Updates: ಬಿರುಗಾಳಿ ಸಹಿತ ಮಳೆ ಹಿನ್ನೆಲೆ ಮರಗಳು ನೆಲಕ್ಕೆ ಉರುಳಿದ್ದು, ಒಂದು ಎಮ್ಮೆ, 12 ಆಡುಗಳು ಸಾವನ್ನಪ್ಪಿವೆ. ಬಿರುಗಾಳಿಗೆ ಆರು ಮನೆಗಳ ಟಿನ್ ಶೆಡ್​ಗಳು ಹಾರಿ ಹೋಗಿವೆ. ಆರು ಮನೆಗಳಿಗೆ ಹಾನಿಯಾಗಿದ್ದು, ಭಾಗಶಃ ಮನೆಗಳು ಬಿದ್ದಿವೆ.

Karnataka Rain: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು
ಬಿರುಗಾಳಿ ಸಹಿತ ಮಳೆಯಿಂದ ಹಾರಿ ಹೋದ ಶೇಡ್​ಗಳು ಮತ್ತು ಧರೆಗುರುಳಿದ ವಿದ್ಯುತ್ ಕಂಬಗಳು.
TV9 Web
| Edited By: |

Updated on: Jun 06, 2022 | 10:01 AM

Share

ಚಿತ್ರದುರ್ಗ: ಚಳ್ಳಕೆರೆಯಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಹಿನ್ನೆಲೆ ಅವಾಂತರ ಸೃಷ್ಟಿಯಾಗಿದ್ದು, ಗಾಳಿ, ಮಳೆಗೆ ಅಂಗಡಿ ಮುಂಭಾಗದಲ್ಲಿ ಹಾಕಿದ್ದ ತಗಡಿನ ಸೀಟುಗಳು ನೆಲಕ್ಕುರುಳಿದೆ. ಬೈಕ್​ಗಳು ಹಾಗೂ ಆಟೋಗೆ ಹಾನಿಯಾಗಿದ್ದು, ಚಳ್ಳಕೆರೆ ಪಟ್ಟಣದ ನೆಹರು ವೃತ್ತದ ಬಳಿ ಘಟನೆ ನಡೆದಿದೆ. ನೆಹರು ವೃತ್ತದ ಬಳಿ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರಸ್ತೆ ಮೇಲೆ ಬಿದ್ದಿದ್ದ ತಗಡಿನ ಸೀಟನ್ನು ಪೊಲೀಸರು ತೆರವುಗೊಳಿಸಿದರು. ಚಳ್ಳಕೆರೆಯ ರಹೀಂ ನಗರ, ಶಾಂತಿ ನಗರದ ರಸ್ತೆಗಳು ಜಲವೃತವಾಗಿದ್ದು, ತಗ್ಗು ಪ್ರದೇಶದ ಕೆಲ‌ ಮನೆಗಳಿಗೂ ನೀರು ನುಗ್ಗಿದೆ. ಸ್ಥಳಕ್ಕೆ ತಹಸೀಲ್ದಾರ್ ಎನ್.ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಳೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದ ಬಳಿಯ ಗೂಡಂಗಡಿ ಮೇಲೆ ನೆಟ್ವರ್ಕ್ ಟವರ್ ಉರುಳಿ ಬಿದ್ದಿದೆ. ನೆಟ್ವರ್ಕ್ ಟವರ್ ಬಿದ್ದ ಕಾರಣ ಗೂಡಂಗಡಿ ಜಖಂ ಆಗಿದ್ದು, ನೆಟ್ವರ್ಕ್ ಟವರ್ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಿನ್ ಶೆಡ್​ಗಳ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿಯ ಕಾಲು ಮುರಿತ

ರಾಯಚೂರು: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಹಿನ್ನೆಲೆ ಮರಗಳು ನೆಲಕ್ಕೆ ಉರುಳಿದ್ದು, ಒಂದು ಎಮ್ಮೆ, 12 ಆಡುಗಳು ಸಾವನ್ನಪ್ಪಿವೆ. ಬಿರುಗಾಳಿಗೆ ಆರು ಮನೆಗಳ ಟಿನ್ ಶೆಡ್​ಗಳು ಹಾರಿ ಹೋಗಿವೆ. ಆರು ಮನೆಗಳಿಗೆ ಹಾನಿಯಾಗಿದ್ದು, ಭಾಗಶಃ ಮನೆಗಳು ಬಿದ್ದಿವೆ. ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ಘಟನೆ ನಡೆದಿದೆ. ಟಿನ್ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕಾಲು ಮುರಿದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಾಲಕಿ ಪಾರಾಗಿದ್ದಾಳೆ. ಮನೆಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಾನವಿ ತಾಲ್ಲೂಕಿನ ಮಲದಗುಡ್ಡದಲ್ಲಿ‌12 ಮೇಕೆಗಳು ಸಾವನ್ನಪ್ಪಿದ್ದು, ಬೇವಿನ ಮರದ ಪಕ್ಕ‌ ಶೆಡ್​ನಲ್ಲಿ ಮೇಕೆಗಳನ್ನಿರಿಸಲಾಗಿತ್ತು. ರಾತ್ರಿ ಗಾಳಿ ಮಳೆಗೆ ಬೇವಿನ ಮರಕ್ಕೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಮರದ ಪಕ್ಕದಲ್ಲಿದ್ದ ಶೆಡ್​ಗೆ ವಿದ್ಯುತ್ ಪಾಸಾಗಿದ್ದು, ವಿದ್ಯುತ್ ಶಾಕ್​ನಿಂದ 12 ಮೇಕೆಗಳು ದರ್ಮರಣ ಹೊಂದಿವೆ.

ಬಿರುಗಾಳಿ ಸಹಿತ ಮಳೆಗೆ ಹಾರಿಹೋದ ಶಾಲೆ ಶೆಡ್

ಚಿಕ್ಕೋಡಿ: ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಶಾಲೆ ಶೆಡ್ ಹಾರಿ ಅವಘಡ ಸಂಭವಿಸಿರುವಂತಹ ಘಟನೆ ಅನಂತಪುರ, ಬೆಳ್ಳಿಗೇರಿ, ಗ್ರಾಮಗಳಲ್ಲಿ ನಡೆದಿದೆ. ಭಾರಿ ಮಳೆಗೆ ಶೆಡ್ ಕೆಳಗಡೆ ನಿಲ್ಲಿಸಿದ್ದ ಬೈಕ್​ಗಳು ಜಖಂಗೊಂಡಿವೆ. ಅದೃಷ್ಠವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

ರಾಮನಗರ: ತಡರಾತ್ರಿ ಬಿರುಗಾಳಿ ಸಹಿತ ಧಾರಕಾರ ಮಳೆ ಹಿನ್ನೆಲೆ ಮರಗಳು, ವಿದ್ಯುತ್ ಕಂಬಗಳು, ಮನೆಯ ಶೀಟ್​ಗಳು ಹಾರಿ ಹೋದಂತಹ ಘಟನೆ ಮುರುಕಣಿ ಗ್ರಾಮದಲ್ಲಿ ನಡೆದಿದೆ. ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬ, ಐದು ಮರಗಳು ನೆಲಕ್ಕೆ ಉರುಳಿದ್ದು, ಹತ್ತು ಮನೆಯ ಶೀಟ್​​ಗಳು ಗಾಳಿಗೆ ಹಾರಿ ಹೋಗಿವೆ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಮಳೆಯಿಂದಾಗಿ ವಾಣಿಜ್ಯ ಮಳಿಗೆಗಳಿಗೆ ನುಗ್ಗಿದ ನೀರು

ಮಂಡ್ಯ: ರಾತ್ರಿ ಸುರಿದ ಮಳೆಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿರುವಂತಹ ಘಟನೆ ನಡೆದಿದೆ. ಪ್ರತಿ ಬಾರಿ ಮಳೆ ಬಂದಾಗಲು ಸಾರ್ವಜನಿಕರಿಗೆ ಈ ಗೋಳು ತಪ್ಪಿದಂಲ್ಲ. ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ರು ಶಾಶ್ವತ ಪರಿಹಾರ ಸಿಕ್ಕಿಲ್ಲ. ಬೇಕರಿ, ಸ್ಟುಡಿಯೋ ಮತ್ತಿತರ ಅಂಗಡಿಗಳಿಗೆ ನೀರು ನುಗ್ಗಿದೆ. ನೀರಿನಿಂದ ಲಕ್ಷಾಂತರ ರೂ. ಹಾನಿಯಾಗಿದ್ದು, ಕ್ಯಾಮೆರಾ ಇತರ ವಸ್ತುಗಳು ನೀರಿನಲ್ಲಿ ಮುಳುಗಡೆಯಾಗಿವೆ. ಅವೈಜ್ಞಾನಿಕ ಮೋರಿಯಿಂದ ಈ ಅವಘಡಕ್ಕೆ ಕಾರಣವೆನ್ನಲಾಗುತ್ತಿದೆ. ಶ್ರೀರಂಗಪಟ್ಟಣ ಮುಖ್ಯರಸ್ತೆಯಿಂದ ಹರಿದು ಬಂದ ನೀರು ವಾಣಿಜ್ಯ ಮಳಿಗೆಗಳಿಗೆ ಈ ಅವಾಂತರಕ್ಕೆ ಕಾರಣವಾಗಿದೆ. ರಸ್ತೆಗಾಗಿ ನಿರ್ಮಿಸಿದಂತ ಚೀನಾ ಮಹಾಗೋಡೆ ಇಂದ ಈ ಅವಘಡಕ್ಕೆ ಉಂಟಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್