AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ

ಕಳಪೆ ಕಾಮಗಾರಿ ಆರೋಪ ಮಾಡಿ, ಚಿತ್ರದುರ್ಗ ತಾಲೂಕಿನ ಕಸವನಹಳ್ಳಿಯಲ್ಲಿ ಗ್ರಾಮಸ್ಥರು ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ
ಹಲ್ಲೆಗೊಳಗಾದ ಇಂಜಿನಿಯರ್​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 11, 2023 | 9:26 AM

Share

ಚಿತ್ರದುರ್ಗ: ತಾಲೂಕಿನ ಕಸವನಹಳ್ಳಿಯಲ್ಲಿ ಕಳಪೆ ಕಾಮಗಾರಿ ಆರೋಪ ಹಿನ್ನಲೆ, ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸನವನಹಳ್ಳಿ ಬಳಿ 1ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆ ರಸ್ತೆ ಕಾಮಗಾರಿ ವೀಕ್ಷಣೆಗೆ ಇಂಜಿನಿಯರ್ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಳಪೆ ಕಾಮಗಾರಿ ಮಾಡಲಾಗುತ್ತಿದೆಯೆಂದು ಆರೋಪಿಸಿ ಅವರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭ ತಳ್ಳಾಟದ ವೇಳೆ ಇಂಜಿನಿಯರ್ ನಾಗರಾಜ್ ಮೇಲೆ ಕಲ್ಲೆಸೆತ ನಡೆಸಿದ್ದು, ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಸವನಹಳ್ಳಿಯ ಕರಿಯಪ್ಪ ಹಾಗೂ ಮತ್ತಿತರರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗಿನಲ್ಲಿ ಇನ್ನೂ ನಿಲ್ಲದ ಪುಡಿ ರೌಡಿಗಳ ಅಟ್ಟಹಾಸ; ಬಿಯರ್ ಬಾಟಲ್​ನಿಂದ ಯುವಕನ ಮೇಲೆ ಹಲ್ಲೆ

ಗದಗ: ನಗರದಲ್ಲಿ ಇನ್ನೂ ಪುಡಿ ರೌಡಿಗಳ ಅಟ್ಟಹಾಸ ನಿಂತಂತೆ ಕಾಣುತ್ತಿಲ್ಲ. ರವಿವಾರ(ಜು.9) ನಕ್ಷತ್ರ ಕಂಫರ್ಟ್ ಬಾರ್​ವೊಂದರಲ್ಲಿ ಯುವಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕುಡಿದ‌ ಅಮಲಿನಲ್ಲಿ ಬಿಯರ್ ಬಾಟಲ್​ನಿಂದ ಯುವಕನ ತಲೆಗೆ ಹೊಡೆದಿದ್ದಾರೆ. ತಲೆಯಿಂದ ಸುರಿದ ರಕ್ತದಲ್ಲೇ ಯುವಕ ಮುಖ ತೊಳೆದುಕೊಂಡಿದ್ದಾನೆ.ಇದನ್ನು ನೋಡಿದ ಜನರು ಕಂಗಾಲಾಗಿದ್ದಾರೆ. ಇನ್ನೂ ಇಷ್ಟೇಲ್ಲಾ ಆಗುತ್ತಿದ್ದು, ಯುವಕನ ತಲೆಯಿಂದ ರಕ್ತ ಸುರಿಯುತ್ತಿದ್ದರೂ ಬಾರ್ ಮಾಲೀಕ ಪೊಲೀಸ್​ರಿಗೆ ಮಾಹಿತಿ ನೀಡಿಲ್ಲ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Koppala News: ಆಸ್ತಿಗೋಸ್ಕರ ಹೆತ್ತವಳ ಮೇಲೆಯೇ ಹಲ್ಲೆ ನಡೆಸಿದ ಮಗ; ನ್ಯಾಯಕ್ಕಾಗಿ ಕಣ್ಣೀರಿಡುತ್ತಿರುವ ತಾಯಿ

ಇನ್ನು ಇದೇ ಶನಿವಾರ(ಜು.8) ಅಕ್ರಮ ಅಕ್ಕಿ ಸಂಗ್ರಹಿಸಿಟ್ಟ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಕ್ಕೆ ಕುಪಿತಗೊಂಡ ಅಕ್ಕಿ ಚೋರರು ಕರವೇ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಇದಾದ ಮಾರನೇ ದಿನ ಬಾರ್​ನಲ್ಲಿ ಹಲ್ಲೆ ನಡೆದಿದೆ. ಇಷ್ಟಾದರೂ ಪೊಲೀಸ್​ ಇಲಾಖೆ ಕೈ ಕಟ್ಟಿಕುಳಿತಿರುವುದು ವಿಷಾದನೀಯ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More