AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ

ಕಳಪೆ ಕಾಮಗಾರಿ ಆರೋಪ ಮಾಡಿ, ಚಿತ್ರದುರ್ಗ ತಾಲೂಕಿನ ಕಸವನಹಳ್ಳಿಯಲ್ಲಿ ಗ್ರಾಮಸ್ಥರು ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ
ಹಲ್ಲೆಗೊಳಗಾದ ಇಂಜಿನಿಯರ್​
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2023 | 9:26 AM

ಚಿತ್ರದುರ್ಗ: ತಾಲೂಕಿನ ಕಸವನಹಳ್ಳಿಯಲ್ಲಿ ಕಳಪೆ ಕಾಮಗಾರಿ ಆರೋಪ ಹಿನ್ನಲೆ, ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸನವನಹಳ್ಳಿ ಬಳಿ 1ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆ ರಸ್ತೆ ಕಾಮಗಾರಿ ವೀಕ್ಷಣೆಗೆ ಇಂಜಿನಿಯರ್ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಳಪೆ ಕಾಮಗಾರಿ ಮಾಡಲಾಗುತ್ತಿದೆಯೆಂದು ಆರೋಪಿಸಿ ಅವರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭ ತಳ್ಳಾಟದ ವೇಳೆ ಇಂಜಿನಿಯರ್ ನಾಗರಾಜ್ ಮೇಲೆ ಕಲ್ಲೆಸೆತ ನಡೆಸಿದ್ದು, ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಸವನಹಳ್ಳಿಯ ಕರಿಯಪ್ಪ ಹಾಗೂ ಮತ್ತಿತರರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗಿನಲ್ಲಿ ಇನ್ನೂ ನಿಲ್ಲದ ಪುಡಿ ರೌಡಿಗಳ ಅಟ್ಟಹಾಸ; ಬಿಯರ್ ಬಾಟಲ್​ನಿಂದ ಯುವಕನ ಮೇಲೆ ಹಲ್ಲೆ

ಗದಗ: ನಗರದಲ್ಲಿ ಇನ್ನೂ ಪುಡಿ ರೌಡಿಗಳ ಅಟ್ಟಹಾಸ ನಿಂತಂತೆ ಕಾಣುತ್ತಿಲ್ಲ. ರವಿವಾರ(ಜು.9) ನಕ್ಷತ್ರ ಕಂಫರ್ಟ್ ಬಾರ್​ವೊಂದರಲ್ಲಿ ಯುವಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕುಡಿದ‌ ಅಮಲಿನಲ್ಲಿ ಬಿಯರ್ ಬಾಟಲ್​ನಿಂದ ಯುವಕನ ತಲೆಗೆ ಹೊಡೆದಿದ್ದಾರೆ. ತಲೆಯಿಂದ ಸುರಿದ ರಕ್ತದಲ್ಲೇ ಯುವಕ ಮುಖ ತೊಳೆದುಕೊಂಡಿದ್ದಾನೆ.ಇದನ್ನು ನೋಡಿದ ಜನರು ಕಂಗಾಲಾಗಿದ್ದಾರೆ. ಇನ್ನೂ ಇಷ್ಟೇಲ್ಲಾ ಆಗುತ್ತಿದ್ದು, ಯುವಕನ ತಲೆಯಿಂದ ರಕ್ತ ಸುರಿಯುತ್ತಿದ್ದರೂ ಬಾರ್ ಮಾಲೀಕ ಪೊಲೀಸ್​ರಿಗೆ ಮಾಹಿತಿ ನೀಡಿಲ್ಲ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Koppala News: ಆಸ್ತಿಗೋಸ್ಕರ ಹೆತ್ತವಳ ಮೇಲೆಯೇ ಹಲ್ಲೆ ನಡೆಸಿದ ಮಗ; ನ್ಯಾಯಕ್ಕಾಗಿ ಕಣ್ಣೀರಿಡುತ್ತಿರುವ ತಾಯಿ

ಇನ್ನು ಇದೇ ಶನಿವಾರ(ಜು.8) ಅಕ್ರಮ ಅಕ್ಕಿ ಸಂಗ್ರಹಿಸಿಟ್ಟ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಕ್ಕೆ ಕುಪಿತಗೊಂಡ ಅಕ್ಕಿ ಚೋರರು ಕರವೇ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಇದಾದ ಮಾರನೇ ದಿನ ಬಾರ್​ನಲ್ಲಿ ಹಲ್ಲೆ ನಡೆದಿದೆ. ಇಷ್ಟಾದರೂ ಪೊಲೀಸ್​ ಇಲಾಖೆ ಕೈ ಕಟ್ಟಿಕುಳಿತಿರುವುದು ವಿಷಾದನೀಯ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ