AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ

ಕಳಪೆ ಕಾಮಗಾರಿ ಆರೋಪ ಮಾಡಿ, ಚಿತ್ರದುರ್ಗ ತಾಲೂಕಿನ ಕಸವನಹಳ್ಳಿಯಲ್ಲಿ ಗ್ರಾಮಸ್ಥರು ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Chitradurga News: ಕಸವನಹಳ್ಳಿ ಗ್ರಾಮಸ್ಥರಿಂದ ಕಳಪೆ ಕಾಮಗಾರಿ ಆರೋಪ; PWD ಇಂಜಿನಿಯರ್​ ಮೇಲೆ ಕಲ್ಲಿನಿಂದ ಹಲ್ಲೆ
ಹಲ್ಲೆಗೊಳಗಾದ ಇಂಜಿನಿಯರ್​
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jul 11, 2023 | 9:26 AM

Share

ಚಿತ್ರದುರ್ಗ: ತಾಲೂಕಿನ ಕಸವನಹಳ್ಳಿಯಲ್ಲಿ ಕಳಪೆ ಕಾಮಗಾರಿ ಆರೋಪ ಹಿನ್ನಲೆ, ಕಲ್ಲಿನಿಂದ ಪಿಡಬ್ಲ್ಯೂಡಿ(PWD) ಇಂಜಿನಿಯರ್​ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳು ಪಿಡಬ್ಲ್ಯೂಡಿ ಇಂಜಿನಿಯರ್ ನಾಗರಾಜ್ ಎನ್ನುವವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸನವನಹಳ್ಳಿ ಬಳಿ 1ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆ ರಸ್ತೆ ಕಾಮಗಾರಿ ವೀಕ್ಷಣೆಗೆ ಇಂಜಿನಿಯರ್ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಳಪೆ ಕಾಮಗಾರಿ ಮಾಡಲಾಗುತ್ತಿದೆಯೆಂದು ಆರೋಪಿಸಿ ಅವರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭ ತಳ್ಳಾಟದ ವೇಳೆ ಇಂಜಿನಿಯರ್ ನಾಗರಾಜ್ ಮೇಲೆ ಕಲ್ಲೆಸೆತ ನಡೆಸಿದ್ದು, ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಸವನಹಳ್ಳಿಯ ಕರಿಯಪ್ಪ ಹಾಗೂ ಮತ್ತಿತರರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗಿನಲ್ಲಿ ಇನ್ನೂ ನಿಲ್ಲದ ಪುಡಿ ರೌಡಿಗಳ ಅಟ್ಟಹಾಸ; ಬಿಯರ್ ಬಾಟಲ್​ನಿಂದ ಯುವಕನ ಮೇಲೆ ಹಲ್ಲೆ

ಗದಗ: ನಗರದಲ್ಲಿ ಇನ್ನೂ ಪುಡಿ ರೌಡಿಗಳ ಅಟ್ಟಹಾಸ ನಿಂತಂತೆ ಕಾಣುತ್ತಿಲ್ಲ. ರವಿವಾರ(ಜು.9) ನಕ್ಷತ್ರ ಕಂಫರ್ಟ್ ಬಾರ್​ವೊಂದರಲ್ಲಿ ಯುವಕರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕುಡಿದ‌ ಅಮಲಿನಲ್ಲಿ ಬಿಯರ್ ಬಾಟಲ್​ನಿಂದ ಯುವಕನ ತಲೆಗೆ ಹೊಡೆದಿದ್ದಾರೆ. ತಲೆಯಿಂದ ಸುರಿದ ರಕ್ತದಲ್ಲೇ ಯುವಕ ಮುಖ ತೊಳೆದುಕೊಂಡಿದ್ದಾನೆ.ಇದನ್ನು ನೋಡಿದ ಜನರು ಕಂಗಾಲಾಗಿದ್ದಾರೆ. ಇನ್ನೂ ಇಷ್ಟೇಲ್ಲಾ ಆಗುತ್ತಿದ್ದು, ಯುವಕನ ತಲೆಯಿಂದ ರಕ್ತ ಸುರಿಯುತ್ತಿದ್ದರೂ ಬಾರ್ ಮಾಲೀಕ ಪೊಲೀಸ್​ರಿಗೆ ಮಾಹಿತಿ ನೀಡಿಲ್ಲ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Koppala News: ಆಸ್ತಿಗೋಸ್ಕರ ಹೆತ್ತವಳ ಮೇಲೆಯೇ ಹಲ್ಲೆ ನಡೆಸಿದ ಮಗ; ನ್ಯಾಯಕ್ಕಾಗಿ ಕಣ್ಣೀರಿಡುತ್ತಿರುವ ತಾಯಿ

ಇನ್ನು ಇದೇ ಶನಿವಾರ(ಜು.8) ಅಕ್ರಮ ಅಕ್ಕಿ ಸಂಗ್ರಹಿಸಿಟ್ಟ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಕ್ಕೆ ಕುಪಿತಗೊಂಡ ಅಕ್ಕಿ ಚೋರರು ಕರವೇ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಇದಾದ ಮಾರನೇ ದಿನ ಬಾರ್​ನಲ್ಲಿ ಹಲ್ಲೆ ನಡೆದಿದೆ. ಇಷ್ಟಾದರೂ ಪೊಲೀಸ್​ ಇಲಾಖೆ ಕೈ ಕಟ್ಟಿಕುಳಿತಿರುವುದು ವಿಷಾದನೀಯ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ