AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಚಿತ್ರದುರ್ಗ ಜಿಲ್ಲಾ ಖಾದಿ ಸಹಕಾರ ಸಂಘದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳರು ಕಬಳಿಸಿದ್ದಾರೆ. 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ
ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 04, 2026 | 6:37 PM

Share

ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯಾಂಶಗಳು

  • ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘದಲ್ಲಿ ಗೋಲ್​ ಮಾಲ್​​
  • ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿ ಕಬಳಿಕೆ
  • ಮಾಜಿ ಜಿಲ್ಲಾ ಪಂಚಾಯತಿ ಸದಸ್ಯನಿಂದಲೇ ಕಬಳಿಕೆ ಆರೋಪ

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ

ಮಹಾತ್ಮ ಗಾಂಧೀಜಿ ಅವರ ಗ್ರಾಮ ಭಾರತದ ಕನಸಿನೊಂದಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘ ನಿರ್ಮಾಣವಾಗಿತ್ತು. ಚಿತ್ರದುರ್ಗ, ಭರಮಸಾಗರ ಸೇರಿದಂತೆ ವಿವಿಧೆಡೆ ಸಂಘದ ಬೆಲೆ ಬಾಳುವ ಆಸ್ತಿಯಿದೆ. ಆದರೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಎಂಬುವವರು ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿರುವ ಆಸ್ತಿ ಲಪಟಾಯಿಸಿದ್ದಾರೆ. ಸಂಘದ ಮಾಜಿ ಉದ್ಯೋಗಿ ಜಯಪ್ಪ ಎಂಬುವರನ್ನು ಬಳಸಿಕೊಂಡು 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಖಾಲಿ ಜಾಗ ಎಂದು ನಕಲಿ ದಾಖಲೆ ಸೃಷ್ಟಿಸಿ 40 ಲಕ್ಷ ರೂಪಾಯಿಗೆ ಖರೀದಿಸಿದ್ದಾಗಿ ದಾಖಲೆ ಸೃಷ್ಟಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.

ಸೂಕ್ತ ಕ್ರಮಕ್ಕೆ ಸಂಘದ ಸದಸ್ಯರು ಆಗ್ರಹ

ಇನ್ನು ಚಿತ್ರದುರ್ಗ ನಗರ, ಮಾಳಪ್ಪನಹಟ್ಟಿ, ಮಾನಂಗಿ, ಭರಮಸಾಗರ ಸೇರಿ ವಿವಿಧೆಡೆ ಸಂಘದ ಆಸ್ತಿ ಇದೆ. ಗ್ರಾಮದ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಎಲ್ಲಾ ಕಡೆ ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಆದರೆ ಭರಮಸಾಗರದಲ್ಲಿ ಮಾತ್ರ ಗ್ರಾಮ ಪಂಚಾಯತಿ ಅಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಸೇರಿದಂತೆ ಇತರೆ ಅಧಿಕಾರಿಗಳು ಶಾಮೀಲಾಗಿ ಸಹಕಾರ ಸಂಘದ ಆಸ್ತಿ ಕಬಳಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಈ ಬಗ್ಗೆ ದೂರು ಸಲ್ಲಿಸಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಹಕಾರ ಸಂಘದ ಆಸ್ತಿ ಉಳಿಸಬೇಕು ಎಂದು ಸಂಘದ ಸದಸ್ಯ ತಿಮ್ಮಣ್ಣ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗದಲ್ಲಿ ಗಾಂಧೀಜಿ ಗ್ರಾಮ ಭಾರತ ಕನಸಿನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘದ ಆಸ್ತಿಯನ್ನ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಅದರಲ್ಲೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಮತ್ತು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ