AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದಲ್ಲೂ ನರೇಂದ್ರ ಮೋದಿಯಂಥ ಪ್ರಬಲ ನಾಯಕರು ಬರಲಿ; ರಾಹುಲ್ ಗಾಂಧಿ ಭೇಟಿಗೆ ಮೊದಲು ಶಿವಮೂರ್ತಿ ಮುರುಘಾ ಶರಣರ ಪ್ರತಿಕ್ರಿಯೆ

ರಾಹುಲ್ ಗಾಂಧಿ ಚಿತ್ರದುರ್ಗದ ಮುರುಘಾಮಠದಲ್ಲಿ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ವಿರೋಧ ಪಕ್ಷದಲ್ಲೂ ನರೇಂದ್ರ ಮೋದಿಯಂಥ ಪ್ರಬಲ ನಾಯಕರು ಬರಲಿ; ರಾಹುಲ್ ಗಾಂಧಿ ಭೇಟಿಗೆ ಮೊದಲು ಶಿವಮೂರ್ತಿ ಮುರುಘಾ ಶರಣರ ಪ್ರತಿಕ್ರಿಯೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
TV9 Web
| Edited By: |

Updated on:Aug 03, 2022 | 12:29 PM

Share

ಚಿತ್ರದುರ್ಗ: ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಹೊರಟಿರುವ ರಾಹುಲ್ ಗಾಂಧಿ ಚಿತ್ರದುರ್ಗದ ಮುರುಘಾಮಠದಲ್ಲಿ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು. ರಾಹುಲ್ ಅವರನ್ನು ಶಾಸಕ ಟಿ.ರಘುಮೂರ್ತಿ ಹೂಮಾಲೆ ಹಾಕಿ ಸ್ವಾಗತಿಸಿ, ಮಠಕ್ಕೆ ಕರೆದೊಯ್ದರು.

ಮುರುಘಾಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ 20ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಸಂವಾದ ನಡೆಸಿದರು. ಚಿತ್ರದುರ್ಗದ ಮುರುಘಾಮಠದ ಸುತ್ತ ಪೊಲೀಸ್ ಬಂದೋಬಸ್ತ್​​​​​ ಹಾಕಲಾಗಿತ್ತು. ಮುರುಘಾಮಠದ ಸಭಾಂಗಣದಲ್ಲಿ ಐವತ್ತಕ್ಕೂ ಹೆಚ್ಚು ಆಸನಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಭೇಟಿಯ ವೇಳೆ ಲಿಂಗಪೂಜೆ ಬಗ್ಗೆ ಮಾಹಿತಿ ನೀಡುವಂತೆ ರಾಹುಲ್ ಗಾಂಧಿ ಕೋರಿದರು. ರಾಹುಲ್​ಗೆ ಲಿಂಗಧಾರಣೆ ಮಾಡಿ ವಿಭೂತಿ‌ ಹಚ್ಚಿದ ಶ್ರೀಗಳು ತತ್ವದ ಉಪದೇಶ ಮಾಡಿದರು. ಲಿಂಗಪೂಜೆಯ ನಿಯಮಗಳನ್ನು ಪಾಲಿಸುವುದಾಗಿ ರಾಹುಲ್ ಗಾಂಧಿ ಅರಿಕೆ ಮಾಡಿಕೊಂಡರು.

ಚಿತ್ರದುರ್ಗ ಮುರುಘಾಮಠಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಮಠದ ಪ್ರವೇಶಕ್ಕೆ ಪಾಸ್ ವಿತರಣೆಯಲ್ಲಿ ಗೊಂದಲವಾಯಿತು. ಈ ಸಂಬಂಧ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್​ಪೀರ್ ಅವರನ್ನು ಕಾಂಗ್ರೆಸ್ ಮುಖಂಡರು ತರಾಟೆಗೆ ತೆಗೆದುಕೊಂಡರು. ಪಾಸ್ ಸಿಗದವರು ತಾಜ್​ಪೀರ್ ಅವರೊಂದಿಗೆ ವಾಗ್ವಾದಕ್ಕೆ ಇಳಿದರು. ಕೆಪಿಸಿಸಿ ಕಾರ್ಯದರ್ಶಿ ಸಾಸಲು ಸತೀಶ್, ಮುಖಂಡ ಡಾ.ತಿಪ್ಪೇಸ್ವಾಮಿ ದನಿ ಏರಿಸಿ ಮಾತನಾಡಿದರು.

ರಾಹುಲ್ ಭೇಟಿ ಹಿನ್ನೆಲೆಯಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಡಾ.ಶಿವಮೂರ್ತಿ ಮುರುಘಾ ಶರಣರು, ಕೆಲ ಮಠಾಧೀಶರು ಇಂದು ಮುರುಘಾಮಠಕ್ಕೆ ಬರುತ್ತಾರೆ. ನೋಡುವವರಿಗೆ ಲಿಂಗಾಯತ ಮತ ಸೆಳೆಯುವ ಭಾವನೆ ಇರಬಹುದು. ಆದರೆ ನಮ್ಮಲ್ಲಿ ಆ ರೀತಿಯ ಭಾವನೆ ಇಲ್ಲದಿದ್ದರೆ ಆಯಿತು. ನಾವು ಸಮತೋಲನ ಕಾಯ್ದುಕೊಳ್ಳುತ್ತೇವೆ. ನಮಗೆ ಭಾರತ ದೇಶ ಬಹಳ ಮುಖ್ಯ ಎಂದರು.

ನಮಗೆ ದೇಶದ ಭದ್ರತೆ ಬಹಳ ಮುಖ್ಯ. ದೇಶದ ಸುತ್ತ ಶತ್ರುಗಳಿದ್ದಾರೆ. ಪ್ರಧಾನಿ ಮೋದಿಯಂತಹ ಬಲಿಷ್ಠ ನಾಯಕರು ಬೇಕಿದೆ. ಪರಿಶ್ರಮದಿಂದು ಬಂದು ದೇಶಕ್ಕೆ ಭದ್ರತೆಯ ಪ್ರಯತ್ನ ಮಾಡಿದರು. ವಿಪಕ್ಷಗಳಲ್ಲಿಯೂ ಅಂತಹ ಬಲಿಷ್ಠ ನಾಯಕ ಬರಲಿ ಎಂದು ಆಶಯ ವ್ಯಕ್ತಪಡಿಸಿದರು. ರಾಜ್ಯ ಅಥವಾ ರಾಷ್ಟ್ರದಲ್ಲಿ ಕೋಮು ದಳ್ಳುರಿ ತಾಂಡವ ಆಡಬೇಕೆಂದು ನಾವ್ಯಾರು ಬಯಸುವುದಿಲ್ಲ. ನಾವೆಲ್ಲೆರೂ ಶಾಂತಿಪ್ರಿಯರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಸುವ್ಯವಸ್ಥೆಯ ವಾತಾವರಣ ನಿರ್ಮಾಣವಾಗಬೇಕಿದೆ. ಶಾಂತಿ ಸಾಮರಸ್ಯದ ಕಡೆ ಎಲ್ಲರ ನಡೆ ಇರಬೇಕು. ಲಿಂಗಾಯತ ಸಮುದಾಯದ ಹೋರಾಟ ನಿರಂತರವಾಗಿರುತ್ತದೆ. ಸಮಾಜ ಬಾಂಧವರು ಸಂಕುಚಿತ‌ ಮನೋಭಾವ ಬಿಡಬೇಕು ಎಂದು ಸಲಹೆ ಮಾಡಿದರು.

Published On - 11:50 am, Wed, 3 August 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್