AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡು ಚಿತ್ರದುರ್ಗದಲ್ಲಿ ಚಿರತೆ ಭೀತಿ: ಮನೆಯಿಂದ ಹೊರಬರಲು ಭಯ ಪಡುತ್ತಿರುವ ಜನರು

ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 10, 2022 | 5:11 PM

Share
ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ
ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

ಕೋಟೆನಾಡು ಚಿತ್ರದುರ್ಗದಲ್ಲೂ ಚಿರತೆ ಭೀತಿ ಶುರುವಾಗಿದೆ. ಕಳೆದ ಒಂದು ವಾರದ ಹಿಂದೆ ಕುರುಡಿಹಳ್ಳಿ ಬಳಿ ಕಾಣಿಸಿಕೊಂಡ ಚಿರತೆ ಭಯ ಸೃಷ್ಠಿಸಿದ್ದು. ಗ್ರಾಮದ ಜನರು ಕೃಷಿ ಕೆಲಸಕ್ಕಷ್ಟೇ ಅಲ್ಲದೆ ಮನೆಯಿಂದ ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣ ಆಗಿದೆ.

1 / 7
ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

ಕೂಲಿ ಕಾರ್ಮಿಕರು ಜಮೀನುಗಳಿಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗೆ ಜನರು ಮನವಿ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿ ಕೈತೊಳೆದುಕೊಂಡಿದೆ. ಹೀಗಾಗಿ ಕಳೆದ ನಾಲ್ಕಾರು ದಿನಗಳಿಂದ ಚಿರತೆ ಬೋನಿಗೂ ಬಿದ್ದಿಲ್ಲ.

2 / 7
ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡ ಚಿರತೆಯು ಗ್ರಾಮದ ಜನರಿಗೆ ಭಯ ಸೃಷ್ಟಿಸಿದೆ. ಇದರಿಂದ ಇಲ್ಲಿನ ರೈತರು ಹೊಲ ಗದ್ದೆಗಳಿಗೆ ಹೋಗದೆ ಮನೆಯ ಬಳಿಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

3 / 7
ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

ಈ ಗ್ರಾಮದ ಬಾಬು ಎಂಬುವರ ಜಮೀನಿನ ಬಳಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಗ್ರಾಮದ ಬಳಿ ನಾಯಿ ಬೇಟೆಗೆ ಚಿರತೆ ಓಡಾಡುತ್ತಿರುವ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಪರಿಣಾಮ ಗ್ರಾಮದ ಜನರು ಕೃಷಿ ಕೆಲಸಕ್ಕೆ ತೆರಳಲು ಭಯ ಪಡುವಂತಾಗಿದೆ.

4 / 7
ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

ಯಾವ ಜಮೀನು, ಗುಡ್ಡದಲ್ಲಿ ಅಡಗಿದೆಯೋ ಗೊತ್ತಿಲ್ಲದಂತಾಗಿದ್ದು ಈ ಭಾಗದ ಜನರು ಭಯಭೀತಿಗೆ ಒಳಗಾಗಿದ್ದಾರೆ. ಕೆಲ ಯುವಕರು ದೊಣ್ಣೆಗಳನ್ನು ಹಿಡಿದು ಚಿರತೆ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹೀಗಾಗಿ, ಕಾಡು ಪ್ರಾಣಿ ಮತ್ತು ಮನುಷ್ಯ ಸಂಘರ್ಷಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂಬುದು ಇವರ ಆಗ್ರಹ.

5 / 7
ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ  ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

ಈ ಭಾಗದ ಗ್ರಾಮದ ಜನರು ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದು ಬಹುತೇಕರು ಮನೆ ಸೇರುವಂಥ ವಾತಾವರಣ ನಿರ್ಮಾಣ ಆಗಿದೆ ಚಿರತೆ ಭೀತಿಯಿಂದ ಈ ಭಾಗದ ಕೃಷಿ ಕೆಲಸಗಳು ನಿಂತು ಹೋಗಿವೆ.

6 / 7
ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ
ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ.  ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಕೋಟೆನಾಡಿನ ಕುರುಡಿಹಳ್ಳಿ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ ಜನರಲ್ಲಿ ಭಾರೀ ಭೀತಿ ಸೃಷ್ಠಿಸಿದೆ. ಗ್ರಾಮದ ನಾಯಿ, ಕುರಿ, ಮೇಕೆಗಳು ನಾಪತ್ತೆ ಆಗುತ್ತಿವೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದು ಜನರ ಭೀತಿ ಹೆಚ್ಚಿಸುತ್ತಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚಿ ಶೀಘ್ರ ಸೆರೆ ಹಿಡಿದು ಕಾಡಿಗೆ ಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಆ ಮೂಲಕ ಈ ಭಾಗದ ಜನರ ಭೀತಿಗೆ ತೆರೆ ಎಳೆಯಬೇಕೆಂಬುದು ಜನರ ಆಗ್ರಹವಾಗಿದೆ.

7 / 7
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ