AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿದ ಉಪವಿಭಾಗಾಧಿಕಾರಿ

ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಈ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್​​ಪೋಸ್ಟ್​ಗಳನ್ನು ಕೂಡ ನಿರ್ಮಿಸಿ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಕಾನೂನು ಕ್ರಮ ಕೈಗೊಂಡಿದ್ದು, ಚಿತ್ರದುರ್ಗ(Chitradurga) ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿ ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾರ್ತಿಕ್ ಅವರು ಆದೇಶಿಸಿದ್ದಾರೆ.

ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿದ ಉಪವಿಭಾಗಾಧಿಕಾರಿ
ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 28, 2024 | 5:51 PM

Share

ಚಿತ್ರದುರ್ಗ, ಮಾ.28: ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಈ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್​​ಪೋಸ್ಟ್​ಗಳನ್ನು ಕೂಡ ನಿರ್ಮಿಸಿ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಕಾನೂನು ಕ್ರಮ ಕೈಗೊಂಡಿದ್ದು, ಚಿತ್ರದುರ್ಗ(Chitradurga) ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿ ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾರ್ತಿಕ್ ಅವರು ಆದೇಶಿಸಿದ್ದಾರೆ. ನಗರದ ಚೇಳಗುಡ್ಡ ಬಡಾವಣೆ ನಿವಾಸಿ ಬಷೀರ್, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ವೇಣುಗೋಪಾಲ್ ಮತ್ತು ಚಿತ್ರದುರ್ಗ ತಾಲೂಕಿನ ಕೊಳಹಾಳ್ ನಿವಾಸಿ ಸಂತೋಷ್ ಎಂಬುವವರು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ‌ ಆರೋಪಿಗಳಾಗಿದ್ದು. ಈ ಹಿನ್ನಲೆ ಪೊಲೀಸರು ನೀಡಿದ‌ ಪ್ರಸ್ತಾವನೆ ಪರಿಶೀಲಿಸಿ ಗಡಿಪಾರು ಗಡಿಪಾರು ಮಾಡಲಾಗಿದೆ.

ತಮ್ಮನಾಯಕನಹಳ್ಳಿಯಲ್ಲಿ ಜಿಂಕೆ ಬೇಟೆಯಾಡ್ತಿದ್ದವರ ಬಂಧನ

ಬೆಂಗಳೂರು ಗ್ರಾಮಾಂತರ: ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿ ಬಳಿ ಜಿಂಕೆ ಬೇಟೆಯಾಡುತ್ತಿದ್ದವರನ್ನು ಅರಣ್ಯ ಸಿಬ್ಬಂದಿ ಅರೆಸ್ಟ್​ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಮರಳವಾಡಿ ಗ್ರಾಮದ ದೇವರಾಜ್ , ಇಂಡ್ಲವಾಡಿ ಗ್ರಾಮದ ಕಿಶೋರ್​ ಹಾಗೂ ಆದೂರು ಗ್ರಾಮದ ರಾಮಕೃಷ್ಣ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ ಜಿಂಕೆ ಮಾಂಸ, ಚರ್ಮ, ಮೂರು ಬೈಕ್, ಒಂದು ಕಾರು ಹಾಗೂ ನಾಡ ಬಂದೂಕನ್ನು ಜಪ್ತಿ ಮಾಡಲಾಗಿದೆ. ಇನ್ನು ಇವರು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ತಮ್ಮನಾಯಕನಹಳ್ಳಿ ಬೀಟ್ ಏರಿಯಾದಲ್ಲಿ ಜಿಂಕೆ ಭೇಟೆಯಾಡಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಆನೇಕಲ್ ವಲಯ ಅರಣ್ಯಾಧಿಕಾರಿ ರಘು ಮತ್ತು ತಂಡದಿಂದ ದಾಳಿ ಮಾಡಲಾಗಿತ್ತು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆನೇಕಲ್​ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಮತ್ತೊಬ್ಬ ರೌಡಿಶೀಟರ್ ಫಜಲ್​ ಅಹ್ಮದ್​​​ ಗಡಿಪಾರು, ಇನ್ನುಳಿದವರೆಗೂ ಖಡಕ್ ಎಚ್ಚರಿಕೆ

ಅಕ್ರಮವಾಗಿ ಗಾಂಜಾ ಸೇವನೆ ಮಾಡಿ, ಮಾರಟ ಮಾಡ್ತಿದ್ದವರ ಬಂಧನ

ಬಳ್ಳಾರಿ: ನಗರದ ಮೋತಿ ಸರ್ಕಲ್ ಬಳಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಸೈಯದ್ ಗುಲಾಬ್ ಸಾಬ್ ಹಾಗೂ ಆಲಂ ಬಾಷಾ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿ ಇದ್ದ 750 ಗ್ರಾಂ ತೂಕದ 75 ಸಾವಿರಕ್ಕೂ ಹೆಚ್ಚು ಮೌಲ್ಯದ ಗಾಂಜಾವನ್ನ ಪೊಲೀಸರು ಜಪ್ತಿ ಮಾಡಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Thu, 28 March 24

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More