ಚಿತ್ರದುರ್ಗ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮದುವೆ ಬಸ್ ಪಲ್ಟಿ, ಇಬ್ಬರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಹೊಸದುರ್ಗ(Hosadurga) ತಾಲೂಕಿನ ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮದುವೆ ಬಸ್ ಪಲ್ಟಿ, ಇಬ್ಬರು ದುರ್ಮರಣ; ಹಲವರ ಸ್ಥಿತಿ ಗಂಭೀರ
ಬಸ್​ ಪಲ್ಟಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 09, 2023 | 6:36 PM

ಚಿತ್ರದುರ್ಗ, ಡಿ.09: ಜಿಲ್ಲೆಯ ಹೊಸದುರ್ಗ(Hosadurga) ತಾಲೂಕಿನ ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಹಂಪ್ ಗೊತ್ತಾಗದೇ ಬೈಕ್ ಸ್ಕಿಡ್; ಸವಾರರಿಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ರಸ್ತೆಯಲ್ಲಿದ್ದ ಹಂಪ್​ ಗಮನಿಸದೇ ವೇಗವಾಗಿ ಬಂದ ಬೈಕ್​​ಸವಾರರು ಸ್ಕಿಡ್​ ಆಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್​​ ತಾಲೂಕಿನ ಮಾದಪಟ್ಟಣ ಬಳಿ ನಡೆದಿದೆ. ಕಾರ್ಮಿಕ ಫೋಕೀರ್​​​ ಚರಣ್​​ಪ್ರಧಾನ್​​(29), ಬೀರ್​​​ ಸಿಂಗ್​​​ ನಾಯಕ್​​ ಮೃತ ವ್ಯಕ್ತಿಗಳು. ಕಂಪನಿ ಕೆಲಸ ಮುಗಿಸಿ ಜಿಗಣಿಯಿಂದ ಇಂಡ್ಲವಾಡಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ:ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಹಂಪ್​​ ಗಮನಿಸದೇ ಬ್ರೇಕ್​​ ಹಾಕಿದ್ದ ಸವಾರ

ಮಾದಪಟ್ಟಣ ಬಳಿ ರಸ್ತೆಯಲ್ಲಿದ್ದ ಹಂಪ್​​ ಗಮನಿಸದೇ ಬೈಕ್​ ಚಲಿಸುತ್ತಿದ್ದ ಪ್ರಧಾನ್​ ಸಡನ್​ ಬ್ರೇಕ್​​ ಹಾಕಿದ್ದಾನೆ. ಈ ವೇಳೆ ಹಿಂಬದಿ ಸವಾರ ಬೀರ್ ಸಿಂಗ್ ಸೇರಿ ಇಬ್ಬರು​ ಮೇಲಕ್ಕೆ ಹಾರಿ ಬಸ್​​ಗೆ ತಲೆಬಡಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚರಣ್ ಪ್ರಧಾನ್ L&t ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಶಕ್ತಿ ಪ್ರೊಸೆಸಿಂಗ್ ಕಂಪನಿಯಲ್ಲಿ ಸಹಾಯಕ ಹುದ್ದೆಯಲ್ಲಿ ಬೀರ್ ಸಿಂಗ್ ಇದ್ದರು. ಮೃತಪಟ್ಟ ಇಬ್ಬರು ಬೈಕ್​ ಸವಾರರು ಮೂಲತಃ ಒರಿಸ್ಸಾ ಮೂಲದವರಾಗಿದ್ದಾರೆ. ಇನ್ನು ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sat, 9 December 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us