AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀಗಳ ಬಂಧನದ ನಡುವೆಯೂ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ

ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರಸ್ವಾಮಿ ನೇತೃತ್ವದಲ್ಲಿ ಕಲ್ಯಾಣ ಮಹೋತ್ಸವ ನಡೆಯಲಿದ್ದು ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯನ್ನು ಗುರುಮಠಕಲ್ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀ ವಹಿಸಿಕೊಂಡಿದ್ದಾರೆ.

ಮುರುಘಾಶ್ರೀಗಳ ಬಂಧನದ ನಡುವೆಯೂ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ
ಮುರುಘಾಮಠ
TV9 Web
| Edited By: |

Updated on:Sep 04, 2022 | 4:15 PM

Share

ಚಿತ್ರದುರ್ಗ: ಜಿಲ್ಲೆಯ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರಸ್ವಾಮಿ ನೇತೃತ್ವದಲ್ಲಿ ಕಲ್ಯಾಣ ಮಹೋತ್ಸವ ನಡೆಯಲಿದ್ದು ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯನ್ನು ಗುರುಮಠಕಲ್ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀ ವಹಿಸಿಕೊಂಡಿದ್ದಾರೆ. ಜಿ.ಪಂ ಮಾಜಿ ಉಪಾಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನಸ್ವಾಮಿ, ಎಸ್ ಜೆ ಎಂ ವಿದ್ಯಾಪೀಠದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಷಣ್ಮುಖಪ್ಪ ಉಪಸ್ಥಿತರಿರಲಿದ್ದಾರೆ. ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಏಳು ಜೋಡಿ ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಮುರುಘಾಮಠದಿಂದ ಮಾಹಿತಿ ಸಿಕ್ಕಿದೆ.

ಪ್ರತಿ ತಿಂಗಳ 5ನೇ ತಾರೀಖಿನಂದು ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಈ ಬಾರಿ ಕೂಡ ನಡೆಸಲು ತಯಾರಿ ನಡೆದಿದೆ. ನಾಳೆ ನಡೆಯಲಿರುವ ಸಾಮೂಹಿಕ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಡಲು 11 ಜೋಡಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಆದರೆ ಸ್ವಾಮೀಜಿಯ ಬಂಧನ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹ ನೋಂದಣಿ ದಿಡೀರ್ ಕುಸಿದಿದೆ. ನಿಗದಿಯಂತೆಯೇ ಸೋಮವಾರ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಮುರುಘಾ ಮಠದ ಹಾಸ್ಟೆಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮುರುಘಾಶ್ರೀ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗ ಪೊಲೀಸರು ಶ್ರೀಗಳನ್ನು ಮಠಕ್ಕೆ ಕರೆತಂದು ಮಹಜರು ಪ್ರಕ್ರಿಯೆಯನ್ನೂ ಮುಗಿಸಿದ್ದಾರೆ. ಈ ಬೆನ್ನಲ್ಲೇ ಈಗ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ.

ಮುರುಘಾ ಮಠದಲ್ಲಿ ಸ್ಥಳ ಮಹಜರು ವೇಳೆ ಕಣ್ಣೀರಿಟ್ಟ ಸ್ವಾಮೀಜಿ

ಪೋಕ್ಸೋ ಕೇಸ್​ನಲ್ಲಿ ಪೊಲೀಸರ ವಶದಲ್ಲಿರುವ ಮುರುಘಾಶ್ರೀಗಳು ಮುರುಘಾ ಮಠದಲ್ಲಿ ಸ್ಥಳ ಮಹಜರು ವೇಳೆ ಕಣ್ಣೀರಿಟ್ಟ ಘಟನೆ ನಡೆದಿದೆ. ಮಹಜರು ವೇಳೆ ಮುರುಘಾಶ್ರೀಗಳು ಗದ್ದುಗೆ, ಪೂಜಾ ಸ್ಥಳಗಳಿಗೆ ತೆರಳಿ ನಮಸ್ಕರಿಸಿದ್ರು. ಸ್ವಾಮೀಜಿ ಬಳಸುತ್ತಿದ್ದ ಎಲ್ಲಾ ಕೊಠಡಿಗಳು, ದರ್ಬಾರ್ ಹಾಲ್, ಮಠದ ಕಚೇರಿಗೆ ಚಿತ್ರದುರ್ಗದ ಪೊಲೀಸರು ಭೇಟಿ ಮಾಡಿಸಿದ್ರು. ಸ್ಥಳ ಮಹಜರು ವೇಳೆ 15ಕ್ಕೂ ಹೆಚ್ಚು ಸ್ವಾಮೀಜಿಗಳಿದ್ದರು. ಮುರುಘಾಶ್ರೀ ಕಂಡೊಡನೆ ಶಿಷ್ಯವೃಂದ ಕಣ್ಣೀರು ಹಾಕಿದೆ. ಮಠದಲ್ಲಿ ಎಲ್ಲರನ್ನು ಕಂಡು ಮುರುಘಾ ಶರಣರು ಭಾವುಕರಾದ್ರು. ಸತತ ಒಂದೂವರೆ ಗಂಟೆ ಕಾಲ ಪೊಲೀಸರು ಶ್ರೀಗಳ ವಾಸ್ತವ್ಯದ ಕೊಠಡಿಯಲ್ಲಿ ಮಾಹಿತಿ ಪಡೆದ್ರು. ಎಸ್​ಪಿ, ಡಿವೈಎಸ್​​ಪಿ ಮುರುಘಾ ಶರಣರಿಂದ ಮಾಹಿತಿ ಕಲೆ ಹಾಕಿದ್ದಾರೆ. ಮುರುಘಾ ಸ್ವಾಮೀಜಿ ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:11 pm, Sun, 4 September 22

Follow Us
Web contact
Web contact

TV9 Kannada

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು