AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀಗಳ ಬಂಧನದ ನಡುವೆಯೂ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ

ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರಸ್ವಾಮಿ ನೇತೃತ್ವದಲ್ಲಿ ಕಲ್ಯಾಣ ಮಹೋತ್ಸವ ನಡೆಯಲಿದ್ದು ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯನ್ನು ಗುರುಮಠಕಲ್ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀ ವಹಿಸಿಕೊಂಡಿದ್ದಾರೆ.

ಮುರುಘಾಶ್ರೀಗಳ ಬಂಧನದ ನಡುವೆಯೂ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವಕ್ಕೆ ಸಿದ್ಧತೆ
ಮುರುಘಾಮಠ
TV9 Web
| Edited By: ಆಯೇಷಾ ಬಾನು|

Updated on:Sep 04, 2022 | 4:15 PM

Share

ಚಿತ್ರದುರ್ಗ: ಜಿಲ್ಲೆಯ ಮುರುಘಾಮಠದಲ್ಲಿ ನಾಳೆ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರಸ್ವಾಮಿ ನೇತೃತ್ವದಲ್ಲಿ ಕಲ್ಯಾಣ ಮಹೋತ್ಸವ ನಡೆಯಲಿದ್ದು ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯನ್ನು ಗುರುಮಠಕಲ್ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀ ವಹಿಸಿಕೊಂಡಿದ್ದಾರೆ. ಜಿ.ಪಂ ಮಾಜಿ ಉಪಾಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನಸ್ವಾಮಿ, ಎಸ್ ಜೆ ಎಂ ವಿದ್ಯಾಪೀಠದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಷಣ್ಮುಖಪ್ಪ ಉಪಸ್ಥಿತರಿರಲಿದ್ದಾರೆ. ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಏಳು ಜೋಡಿ ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಮುರುಘಾಮಠದಿಂದ ಮಾಹಿತಿ ಸಿಕ್ಕಿದೆ.

ಪ್ರತಿ ತಿಂಗಳ 5ನೇ ತಾರೀಖಿನಂದು ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಈ ಬಾರಿ ಕೂಡ ನಡೆಸಲು ತಯಾರಿ ನಡೆದಿದೆ. ನಾಳೆ ನಡೆಯಲಿರುವ ಸಾಮೂಹಿಕ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಡಲು 11 ಜೋಡಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಆದರೆ ಸ್ವಾಮೀಜಿಯ ಬಂಧನ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹ ನೋಂದಣಿ ದಿಡೀರ್ ಕುಸಿದಿದೆ. ನಿಗದಿಯಂತೆಯೇ ಸೋಮವಾರ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಮುರುಘಾ ಮಠದ ಹಾಸ್ಟೆಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮುರುಘಾಶ್ರೀ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗ ಪೊಲೀಸರು ಶ್ರೀಗಳನ್ನು ಮಠಕ್ಕೆ ಕರೆತಂದು ಮಹಜರು ಪ್ರಕ್ರಿಯೆಯನ್ನೂ ಮುಗಿಸಿದ್ದಾರೆ. ಈ ಬೆನ್ನಲ್ಲೇ ಈಗ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ.

ಮುರುಘಾ ಮಠದಲ್ಲಿ ಸ್ಥಳ ಮಹಜರು ವೇಳೆ ಕಣ್ಣೀರಿಟ್ಟ ಸ್ವಾಮೀಜಿ

ಪೋಕ್ಸೋ ಕೇಸ್​ನಲ್ಲಿ ಪೊಲೀಸರ ವಶದಲ್ಲಿರುವ ಮುರುಘಾಶ್ರೀಗಳು ಮುರುಘಾ ಮಠದಲ್ಲಿ ಸ್ಥಳ ಮಹಜರು ವೇಳೆ ಕಣ್ಣೀರಿಟ್ಟ ಘಟನೆ ನಡೆದಿದೆ. ಮಹಜರು ವೇಳೆ ಮುರುಘಾಶ್ರೀಗಳು ಗದ್ದುಗೆ, ಪೂಜಾ ಸ್ಥಳಗಳಿಗೆ ತೆರಳಿ ನಮಸ್ಕರಿಸಿದ್ರು. ಸ್ವಾಮೀಜಿ ಬಳಸುತ್ತಿದ್ದ ಎಲ್ಲಾ ಕೊಠಡಿಗಳು, ದರ್ಬಾರ್ ಹಾಲ್, ಮಠದ ಕಚೇರಿಗೆ ಚಿತ್ರದುರ್ಗದ ಪೊಲೀಸರು ಭೇಟಿ ಮಾಡಿಸಿದ್ರು. ಸ್ಥಳ ಮಹಜರು ವೇಳೆ 15ಕ್ಕೂ ಹೆಚ್ಚು ಸ್ವಾಮೀಜಿಗಳಿದ್ದರು. ಮುರುಘಾಶ್ರೀ ಕಂಡೊಡನೆ ಶಿಷ್ಯವೃಂದ ಕಣ್ಣೀರು ಹಾಕಿದೆ. ಮಠದಲ್ಲಿ ಎಲ್ಲರನ್ನು ಕಂಡು ಮುರುಘಾ ಶರಣರು ಭಾವುಕರಾದ್ರು. ಸತತ ಒಂದೂವರೆ ಗಂಟೆ ಕಾಲ ಪೊಲೀಸರು ಶ್ರೀಗಳ ವಾಸ್ತವ್ಯದ ಕೊಠಡಿಯಲ್ಲಿ ಮಾಹಿತಿ ಪಡೆದ್ರು. ಎಸ್​ಪಿ, ಡಿವೈಎಸ್​​ಪಿ ಮುರುಘಾ ಶರಣರಿಂದ ಮಾಹಿತಿ ಕಲೆ ಹಾಕಿದ್ದಾರೆ. ಮುರುಘಾ ಸ್ವಾಮೀಜಿ ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:11 pm, Sun, 4 September 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು