AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ

ನಿಮ್ಮ ಸಹೋದರಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಅಂತ ಅಪ್ರಾಪ್ತ ಬಾಲಿಕಿ ಮೇಲೆ 6-7 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ ಚಿತ್ರದುರ್ಗ ಮೌಲ್ವಿ ಅಬ್ದುಲ್​ ರಹೆಮಾನ್​​ನನ್ನು ಚಿತ್ರದುರ್ಗ ಮಹಿಳಾ ಪೊಲೀಸ್​ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ
ಸಾಂದರ್ಭಿಕ ಚಿತ್ರ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 03, 2024 | 7:59 AM

Share

ಚಿತ್ರದುರ್ಗ, ಜೂನ್​ 03: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿ (Maulvi) ಅಬ್ದುಲ್ ರಹೆಮಾನ್ ವಿರುದ್ಧ ಚಿತ್ರದುರ್ಗ (Chitradurga) ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ (Pocso) ಪ್ರಕರಣ ದಾಖಲಾಗಿದ್ದು, ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ.

ಬಾಲಕಿ ಕಳೆದ ಮೂರು ವರ್ಷದಿಂದ ಖುರಾನ್ ಓದಲು ಮಸೀದಿಗೆ ಹೋಗುತ್ತಿದ್ದಳು. ಬಾಲಕಿಗೆ ದೆವ್ವ ಹಿಡಿದಿದೆ, ಮನೆಯಲ್ಲೇ ಪರಿಹಾರ ಪೂಜೆ ಮಾಡಬೇಕು ಎಂದು ಮೌಲ್ವಿ ಹೇಳಿದ್ದನು. ಅದರಂತೆ ಮೌಲ್ವಿ 6-7 ತಿಂಗಳುಗಳ ಕಾಲ ವಾರಕೊಮ್ಮೆ ಮನೆಗೆ ಹೋಗಿದ್ದಾನೆ. ಮನೆಗೆ ಹೋದಾಗಲೆಲ್ಲ ಬಾಲಕಿ ಮತ್ತು ಆಕೆಯ ಸಹೋದರನನ್ನು ಕೋಣೆಯೊಳಗೆ ಕರೆದೊಯ್ಯುತ್ತಿದ್ದನು. ಬಾಲಕಿ ತಾಯಿಯನ್ನು ಕೋಣೆಯ ಹೊರಗೆ ಇರುವಂತೆ ಹೇಳುತ್ತಿದ್ದನು. ಬಾಲಕಿ ಸಹೋದರನಿಗೆ “ನಿನ್ನ ಸಹೋದರಿಗೆ ದೆವ್ವ ಮೆಟ್ಟಿದೆ” ಅಂತ ನಂಬಿಸಿದ್ದನು. ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಎಂದು ಹೇಳಿದ್ದನು.

ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಸಹೋದರಿ ಮೇಲೆ ಅತ್ಯಾಚಾರವೆಸಗುವಂತೆ ಸಹೋದರನಿಗೆ ಪ್ರೇರಣೆ ನೀಡುತ್ತಿದ್ದನು. ಮೌಲ್ವಿಯ ಪ್ರೇರಣೆಯಂತೆ ಸಹೋದರ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಹೋದರಿ ಮೇಲೆ ಸಹೋದರ ಅತ್ಯಾಚಾರ ಎಸಗಿರುವುದನ್ನು ಮೌಲ್ವಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ತಾನೂ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ.

6-7 ತಿಂಗಳು ಕಾಲ ಇದೇ ರೀತಿ ನಡೆದಿದೆ. ಒಂದು ದಿನ ಬಾಲಕಿ ಹೊಟ್ಟೆ ನೋವು ಅಂತ ಒದ್ದಾಡಿದ್ದಾಳೆ. ಕೂಡಲೆ ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬಯಲಾಗಿದೆ. ಸಂತ್ರಸ್ತೆಯ ತಾಯಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಮೌಲ್ವಿ, ಸಂತ್ರಸ್ತೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK