ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ

ನಿಮ್ಮ ಸಹೋದರಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಅಂತ ಅಪ್ರಾಪ್ತ ಬಾಲಿಕಿ ಮೇಲೆ 6-7 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ ಚಿತ್ರದುರ್ಗ ಮೌಲ್ವಿ ಅಬ್ದುಲ್​ ರಹೆಮಾನ್​​ನನ್ನು ಚಿತ್ರದುರ್ಗ ಮಹಿಳಾ ಪೊಲೀಸ್​ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Jun 03, 2024 | 7:59 AM

ಚಿತ್ರದುರ್ಗ, ಜೂನ್​ 03: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿ (Maulvi) ಅಬ್ದುಲ್ ರಹೆಮಾನ್ ವಿರುದ್ಧ ಚಿತ್ರದುರ್ಗ (Chitradurga) ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ (Pocso) ಪ್ರಕರಣ ದಾಖಲಾಗಿದ್ದು, ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ.

ಬಾಲಕಿ ಕಳೆದ ಮೂರು ವರ್ಷದಿಂದ ಖುರಾನ್ ಓದಲು ಮಸೀದಿಗೆ ಹೋಗುತ್ತಿದ್ದಳು. ಬಾಲಕಿಗೆ ದೆವ್ವ ಹಿಡಿದಿದೆ, ಮನೆಯಲ್ಲೇ ಪರಿಹಾರ ಪೂಜೆ ಮಾಡಬೇಕು ಎಂದು ಮೌಲ್ವಿ ಹೇಳಿದ್ದನು. ಅದರಂತೆ ಮೌಲ್ವಿ 6-7 ತಿಂಗಳುಗಳ ಕಾಲ ವಾರಕೊಮ್ಮೆ ಮನೆಗೆ ಹೋಗಿದ್ದಾನೆ. ಮನೆಗೆ ಹೋದಾಗಲೆಲ್ಲ ಬಾಲಕಿ ಮತ್ತು ಆಕೆಯ ಸಹೋದರನನ್ನು ಕೋಣೆಯೊಳಗೆ ಕರೆದೊಯ್ಯುತ್ತಿದ್ದನು. ಬಾಲಕಿ ತಾಯಿಯನ್ನು ಕೋಣೆಯ ಹೊರಗೆ ಇರುವಂತೆ ಹೇಳುತ್ತಿದ್ದನು. ಬಾಲಕಿ ಸಹೋದರನಿಗೆ “ನಿನ್ನ ಸಹೋದರಿಗೆ ದೆವ್ವ ಮೆಟ್ಟಿದೆ” ಅಂತ ನಂಬಿಸಿದ್ದನು. ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಎಂದು ಹೇಳಿದ್ದನು.

ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಸಹೋದರಿ ಮೇಲೆ ಅತ್ಯಾಚಾರವೆಸಗುವಂತೆ ಸಹೋದರನಿಗೆ ಪ್ರೇರಣೆ ನೀಡುತ್ತಿದ್ದನು. ಮೌಲ್ವಿಯ ಪ್ರೇರಣೆಯಂತೆ ಸಹೋದರ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಹೋದರಿ ಮೇಲೆ ಸಹೋದರ ಅತ್ಯಾಚಾರ ಎಸಗಿರುವುದನ್ನು ಮೌಲ್ವಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ತಾನೂ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ.

6-7 ತಿಂಗಳು ಕಾಲ ಇದೇ ರೀತಿ ನಡೆದಿದೆ. ಒಂದು ದಿನ ಬಾಲಕಿ ಹೊಟ್ಟೆ ನೋವು ಅಂತ ಒದ್ದಾಡಿದ್ದಾಳೆ. ಕೂಡಲೆ ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬಯಲಾಗಿದೆ. ಸಂತ್ರಸ್ತೆಯ ತಾಯಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಮೌಲ್ವಿ, ಸಂತ್ರಸ್ತೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!